ಸುದ್ದಿಗಳು

ಗೂನಡ್ಕಕ್ಕೆ ಕೆಪಿಸಿಸಿ ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಭೇಟಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೆ.ಪಿ.ಸಿ.ಸಿ.ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷರು ಮತ್ತು ಕರ್ನಾಟಕ ಸರ್ಕಾರದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣರವರು ಸಂಪಾಜೆ ಗ್ರಾಮದ ಗೂನಡ್ಕಕ್ಕೆ ನ.22 ರಂದು ಭೇಟಿ ನೀಡಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞ ಗೂನಡ್ಕರವರ ಕಚೇರಿಯಲ್ಲಿ ನಡೆದ ಸಂಪಾಜೆ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದರು.

Advertisement

ಸರ್ವರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಕೆ.ಪಿ.ಸಿ.ಸಿ.ಮಾಧ್ಯಮ ವಕ್ತಾರ ಶೌವಾದ್ ಗೂನಡ್ಕರವರು “ಸಂಪಾಜೆ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ ಇದು ಎಲ್ಲಾ ಚುನಾವಣೆಗಳಲ್ಲಿಯೂ ಸಾಬೀತಾಗಿದೆ. ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯನ್ನು 14 ರಲ್ಲಿ 14 ಸ್ಥಾನಗಳನ್ನು ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಗುರಿಯನ್ನು ಇಟ್ಟುಕೊಂಡು ನಾವು ಕಾರ್ಯನಿರ್ವಹಿಸಲಿದ್ದೇವೆ” ಎಂದು ತಿಳಿಸಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎ.ಎಸ್.ಪೊನ್ನಣ್ಣರವರು “ಕಾಂಗ್ರೆಸ್ ಪಕ್ಷವನ್ನು ಪ್ರಸ್ತುತ ಸನ್ನಿವೇಶದಲ್ಲಿ ತಳಹಂತದಿಂದ ಗಟ್ಟಿಗೊಳಿಸಬೇಕಾದ ಅನಿರ್ವಾಯತೆ ಇದೆ. ಆ ಕಾರ್ಯವನ್ನು ಸಂಪಾಜೆ ಗ್ರಾಮದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಒಳ್ಳೆಯ ರೀತಿಯಲ್ಲಿ ನಿರ್ವಹಿಸುತ್ತಿದ್ದಾರೆ. ಆ ಕಾರಣದಿಂದ ಇಲ್ಲಿ ಪಕ್ಷ ಬಲಿಷ್ಠವಾಗಿದೆ. ಮುಂದೆಯೂ ಇನ್ನಷ್ಟು ಸದೃಢವಾಗಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿ ಗೆಲುವನ್ನು ಸಾಧಿಸಲಿ” ಎಂದು ಆಶಿಸಿದರು.
ಕೆ.ಪಿ.ಸಿ.ಸಿ.ಮಾಧ್ಯಮ ವಕ್ತಾರ ಟಿ.ಪಿ.ರಮೇಶ್ ರವರು ಮಾತನಾಡಿ “ತಳಹಂತದ ಕಾರ್ಯಕರ್ತರಿಗೆ ಪ್ರಾಮುಖ್ಯತೆ ಸಿಗಬೇಕೇ ಹೊರತು ಪಕ್ಷಕ್ಕೆ ಅಧಿಕಾರ ಸಿಕ್ಕಾಗ ಮಾತ್ರ ಬರುವ ನಾಯಕರಿಗಲ್ಲ” ಎಂದವರು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ವಲಯ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ್ ಕೊಯಂಗಾಜೆಯವರು “ಸಂಪಾಜೆ ಗ್ರಾಮದಲ್ಲಿ ನಾವು ಒಗ್ಗಟ್ಟಾಗಿ ಕಾರ್ಯನಿರ್ವಹಿಸುವ ಮೂಲಕ ಪಕ್ಷದ ಹಿತಕ್ಕಾಗಿ ದುಡಿದಿದ್ದೇವೆ. ಮುಂದೆಯೂ ಕೂಡ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ನಾವು ಕಾರ್ಯೋನ್ಮುಖರಾಗಲಿದ್ದೇವೆ” ಎಂದು ತಿಳಿಸಿದರು.

ಕೆ.ಪಿ.ಸಿ.ಸಿ.ಮಾಜಿ ಕಾರ್ಯದರ್ಶಿ ಟಿ.ಎಂ.ಶಹೀದ್, ನಾಪೋಕ್ಲ ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್ ,ಕೊಡಗು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಹಾಂ , ಪ್ರಮುಖರಾದ ಮೋಹಿನಿ ವಸಂತ ಗೌಡ ಪೆಲ್ತಡ್ಕ , ಮಹಮ್ಮದ್ ಕುಂಞ ಗೂನಡ್ಕ, ದಿನಕರ ಗೌಡ ಸಣ್ಣಮನೆ, ಧರ್ಮಪಾಲ ಕೊಯಂಗಾಜೆ, ಜಿ.ಕೆ.ಹಮೀದ್, ಸುರಯ್ಯಾ, ಸೂರಜ್ ಹೊಸೂರು, ಎಸ್.ಪಿ.ಹನೀಫ್, ತಾಜ್ ಮಹಮ್ಮದ್, ಪುಟ್ಟಯ್ಯ ಗೌಡ, ಎಸ್.ಕೆ.ಹನೀಫ್, ಬಾಲಚಂದ್ರ, ತಾಜುದ್ದೀನ್ ಅರಂತೋಡು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪಿ.ಕೆ.ಅಬೂಸಾಲಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 20-07-2025 | ಮತ್ತೆ ಬದಲಾಯಿತು ಹವಾಮಾನ | ಮಳೆ ಕಡಿಮೆಯಾಗುವ ಲಕ್ಷಣ |

ಮಧ್ಯಮ ಸ್ತರದ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕರಾವಳಿ…

3 hours ago

ಬದುಕು ಪುರಾಣ | ರಾಮಬಾಣದ ಇರಿತ

ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…

10 hours ago

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್

ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…

11 hours ago

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

20 hours ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

21 hours ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

21 hours ago