Advertisement
ಸುದ್ದಿಗಳು

ಗೂನಡ್ಕಕ್ಕೆ ಕೆಪಿಸಿಸಿ ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಭೇಟಿ

Share

ಕೆ.ಪಿ.ಸಿ.ಸಿ.ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷರು ಮತ್ತು ಕರ್ನಾಟಕ ಸರ್ಕಾರದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣರವರು ಸಂಪಾಜೆ ಗ್ರಾಮದ ಗೂನಡ್ಕಕ್ಕೆ ನ.22 ರಂದು ಭೇಟಿ ನೀಡಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞ ಗೂನಡ್ಕರವರ ಕಚೇರಿಯಲ್ಲಿ ನಡೆದ ಸಂಪಾಜೆ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದರು.

Advertisement
Advertisement
Advertisement
Advertisement

ಸರ್ವರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಕೆ.ಪಿ.ಸಿ.ಸಿ.ಮಾಧ್ಯಮ ವಕ್ತಾರ ಶೌವಾದ್ ಗೂನಡ್ಕರವರು “ಸಂಪಾಜೆ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ ಇದು ಎಲ್ಲಾ ಚುನಾವಣೆಗಳಲ್ಲಿಯೂ ಸಾಬೀತಾಗಿದೆ. ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯನ್ನು 14 ರಲ್ಲಿ 14 ಸ್ಥಾನಗಳನ್ನು ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಗುರಿಯನ್ನು ಇಟ್ಟುಕೊಂಡು ನಾವು ಕಾರ್ಯನಿರ್ವಹಿಸಲಿದ್ದೇವೆ” ಎಂದು ತಿಳಿಸಿದರು.

Advertisement

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎ.ಎಸ್.ಪೊನ್ನಣ್ಣರವರು “ಕಾಂಗ್ರೆಸ್ ಪಕ್ಷವನ್ನು ಪ್ರಸ್ತುತ ಸನ್ನಿವೇಶದಲ್ಲಿ ತಳಹಂತದಿಂದ ಗಟ್ಟಿಗೊಳಿಸಬೇಕಾದ ಅನಿರ್ವಾಯತೆ ಇದೆ. ಆ ಕಾರ್ಯವನ್ನು ಸಂಪಾಜೆ ಗ್ರಾಮದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಒಳ್ಳೆಯ ರೀತಿಯಲ್ಲಿ ನಿರ್ವಹಿಸುತ್ತಿದ್ದಾರೆ. ಆ ಕಾರಣದಿಂದ ಇಲ್ಲಿ ಪಕ್ಷ ಬಲಿಷ್ಠವಾಗಿದೆ. ಮುಂದೆಯೂ ಇನ್ನಷ್ಟು ಸದೃಢವಾಗಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿ ಗೆಲುವನ್ನು ಸಾಧಿಸಲಿ” ಎಂದು ಆಶಿಸಿದರು.
ಕೆ.ಪಿ.ಸಿ.ಸಿ.ಮಾಧ್ಯಮ ವಕ್ತಾರ ಟಿ.ಪಿ.ರಮೇಶ್ ರವರು ಮಾತನಾಡಿ “ತಳಹಂತದ ಕಾರ್ಯಕರ್ತರಿಗೆ ಪ್ರಾಮುಖ್ಯತೆ ಸಿಗಬೇಕೇ ಹೊರತು ಪಕ್ಷಕ್ಕೆ ಅಧಿಕಾರ ಸಿಕ್ಕಾಗ ಮಾತ್ರ ಬರುವ ನಾಯಕರಿಗಲ್ಲ” ಎಂದವರು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ವಲಯ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ್ ಕೊಯಂಗಾಜೆಯವರು “ಸಂಪಾಜೆ ಗ್ರಾಮದಲ್ಲಿ ನಾವು ಒಗ್ಗಟ್ಟಾಗಿ ಕಾರ್ಯನಿರ್ವಹಿಸುವ ಮೂಲಕ ಪಕ್ಷದ ಹಿತಕ್ಕಾಗಿ ದುಡಿದಿದ್ದೇವೆ. ಮುಂದೆಯೂ ಕೂಡ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ನಾವು ಕಾರ್ಯೋನ್ಮುಖರಾಗಲಿದ್ದೇವೆ” ಎಂದು ತಿಳಿಸಿದರು.

Advertisement

ಕೆ.ಪಿ.ಸಿ.ಸಿ.ಮಾಜಿ ಕಾರ್ಯದರ್ಶಿ ಟಿ.ಎಂ.ಶಹೀದ್, ನಾಪೋಕ್ಲ ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್ ,ಕೊಡಗು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಹಾಂ , ಪ್ರಮುಖರಾದ ಮೋಹಿನಿ ವಸಂತ ಗೌಡ ಪೆಲ್ತಡ್ಕ , ಮಹಮ್ಮದ್ ಕುಂಞ ಗೂನಡ್ಕ, ದಿನಕರ ಗೌಡ ಸಣ್ಣಮನೆ, ಧರ್ಮಪಾಲ ಕೊಯಂಗಾಜೆ, ಜಿ.ಕೆ.ಹಮೀದ್, ಸುರಯ್ಯಾ, ಸೂರಜ್ ಹೊಸೂರು, ಎಸ್.ಪಿ.ಹನೀಫ್, ತಾಜ್ ಮಹಮ್ಮದ್, ಪುಟ್ಟಯ್ಯ ಗೌಡ, ಎಸ್.ಕೆ.ಹನೀಫ್, ಬಾಲಚಂದ್ರ, ತಾಜುದ್ದೀನ್ ಅರಂತೋಡು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪಿ.ಕೆ.ಅಬೂಸಾಲಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…

17 hours ago

‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ

ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…

17 hours ago

ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |

15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…

18 hours ago

ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ

ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…

18 hours ago

ಅಡಿಕೆಯ ಹಳದಿ ಎಲೆ ರೋಗದ ಖಾಯಂ ನಿವಾರಣೆಗಾಗಿ ಯೋಜನೆ ಅನುಷ್ಟಾನಗೊಳ್ಳುತ್ತದೆ ಎಂಬ ಭರವಸೆ ಇರಲಿ

ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…

1 day ago

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…

1 day ago