Advertisement
ಸುದ್ದಿಗಳು

ಶಕ್ತಿ ವಸತಿ ಶಾಲೆಯಲ್ಲಿ ಗುರು ಪೂರ್ಣಿಮೆ | ದೇವರು ಹಾಗೂ ಗುರು ಇಬ್ಬರೂ ಪೂಜೆಗೆ ಯೋಗ್ಯ

Share

ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು ಇಬ್ಬರೂ ಪೂಜೆಗೆ ಯೋಗ್ಯರಾದವರು. ತಂದೆಯನ್ನು ದೇವರಿಗೆ ಹೋಲಿಸಿದರೆ ತಾಯಿಯನ್ನು ಗುರುವಿಗೆ ಹೋಲಿಸಲಾಗುತ್ತದೆ. ಮಕ್ಕಳಲ್ಲಿ ಇರುವ ಎಲ್ಲಾ ಲೋಪದೋಷಗಳನ್ನು ತಿದ್ದಿ ಈ ಸಮಾಜಕ್ಕೆ ಒಬ್ಬ ಉತ್ತಮ ಪ್ರಜೆಯನ್ನು ನೀಡುವುದು ಅಮ್ಮ ಹಾಗೂ ಗುರು ಎಂದು ಹೊಸದಿಗಂತ ಪತ್ರಿಕೆಯ ಸಿಇಓ ಪಿ ಎಸ್ ಪ್ರಕಾಶ್‍ ಹೇಳಿದರು.

ಅವರು ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯಲ್ಲಿಗುರು ಪೂರ್ಣಿಮೆ ಆಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.  ಬರೀ ಸರ್ಟಿಫಿಕೇಟ್‍ಗೋಸ್ಕರ ಶಾಲೆಗೆ ಬಂದರೆ ಅದು ನಿಜವಾದ ವಿದ್ಯೆ ಆಗೋದಿಲ್ಲ, ಸರ್ಟಿಫಿಕೇಟ್‍ ಜೊತೆಗೆ ನಮ್ಮ ಜೀವನಕ್ಕೆ ಬೇಕಾದ ಒಂದು ಉತ್ತಮ ಮೌಲ್ಯ, ಸಂಸ್ಕಾರವನ್ನು ಕೂಡ ನಾವು ಶಿಕ್ಷಣದಿಂದ ಪಡೆಯುವಂತಾಗಬೇಕು. ಅಂತಹ ಒಳ್ಳೆಯ ಮೌಲ್ಯ ಸಂಸ್ಕಾರವನ್ನು ಈ ಶಕ್ತಿ ಶಾಲೆಯು ಇಲ್ಲಿನ ವಿದ್ಯಾರ್ಥಿಗಳಿಗೆ ನೀಡುತ್ತಿದೆ. ಇಡೀ ಜಗತ್ತಿಗೆ ಭಾರತದ ಮೌಲ್ಯ ಮಾದರಿಯಾಗಬೇಕು. ಹಾಗೆ ಆಗಬೇಕಾದರೆ ಇಂತಹ ಶಾಲೆಯಲ್ಲಿ ಕಲಿತ ಒಳ್ಳೆಯ ಸಂಸ್ಕಾರಭರಿತ ಮಕ್ಕಳಿಂದ ಮಾತ್ರ ಸಾಧ್ಯಎಂದರು. ನಾಗರಿಕ ಶಿಷ್ಟಾಚಾರದ ಪಾಲನೆಯನ್ನು ನಾವು ಮಾಡಬೇಕು, ಪ್ರಕೃತಿಯ ರಕ್ಷಣೆ ದೇಶರಕ್ಷಣೆಯ ಮೊದಲ ಹೆಜ್ಜೆ, ಹಾಗಾಗಿ ನಾವು ನಮ್ಮ ಪ್ರಕೃತಿಯ ರಕ್ಷಣೆಯನ್ನು ಮಾಡಬೇಕು ಎಂದರು.

ಶಕ್ತಿ ಶಾಲೆಯ ಸಂಸ್ಕೃತ  ಶಿಕ್ಷಕಿ  ಸಾರಿಕಾ ಗುರುಪೂರ್ಣಿಮೆಯ ಮಹತ್ವದ ಬಗ್ಗೆ ತಿಳಿಸಿದರು. ನಂತರ ಮುಖ್ಯ ಅತಿಥಿಗಳಾದ  ಪಿ ಎಸ್ ಪ್ರಕಾಶ್‍ ಅವರಿಗೆ ಪಾದಪೂಜೆಯನ್ನು ಮಾಡುವ ಮೂಲಕ ಗುರುಪೂಜೆಯನ್ನು ನೆರವೇರಿಸಲಾಯಿತು.

 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಕ್ತಿ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿಯಾಗಿರುವ ಡಾ. ಕೆ ಸಿ ನಾಯ್ಕ್ ಅವರು ವಿದ್ಯಾರ್ಥಿಗಳಿಗೆ ಆಶೀರ್ವಾದವನ್ನು ಮಾಡಿದರು. ಶಕ್ತಿ ವಿದ್ಯಾ ಸಂಸ್ಥೆಯ ಮುಖ್ಯ ಸಲಹೆಗಾರರಾಗಿರುವ‌  ರಮೇಶ್ ಕೆ, ಉಪ ಪ್ರಾಂಶುಪಾಲರಾದ  ನಟೇಶ್ ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಮೇಶ್ ಕೆ  ಸ್ವಾಗತಿಸಿ , ಶಕ್ತಿ ಶಾಲೆಯ ಶಿಕ್ಷಕ ಶರಣಪ್ಪಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

27 minutes ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

12 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

13 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

20 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

21 hours ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

1 day ago