Advertisement
ಸುದ್ದಿಗಳು

ಶಕ್ತಿ ವಸತಿ ಶಾಲೆಯಲ್ಲಿ ಗುರು ಪೂರ್ಣಿಮೆ | ದೇವರು ಹಾಗೂ ಗುರು ಇಬ್ಬರೂ ಪೂಜೆಗೆ ಯೋಗ್ಯ

Share

ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು ಇಬ್ಬರೂ ಪೂಜೆಗೆ ಯೋಗ್ಯರಾದವರು. ತಂದೆಯನ್ನು ದೇವರಿಗೆ ಹೋಲಿಸಿದರೆ ತಾಯಿಯನ್ನು ಗುರುವಿಗೆ ಹೋಲಿಸಲಾಗುತ್ತದೆ. ಮಕ್ಕಳಲ್ಲಿ ಇರುವ ಎಲ್ಲಾ ಲೋಪದೋಷಗಳನ್ನು ತಿದ್ದಿ ಈ ಸಮಾಜಕ್ಕೆ ಒಬ್ಬ ಉತ್ತಮ ಪ್ರಜೆಯನ್ನು ನೀಡುವುದು ಅಮ್ಮ ಹಾಗೂ ಗುರು ಎಂದು ಹೊಸದಿಗಂತ ಪತ್ರಿಕೆಯ ಸಿಇಓ ಪಿ ಎಸ್ ಪ್ರಕಾಶ್‍ ಹೇಳಿದರು.

ಅವರು ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯಲ್ಲಿಗುರು ಪೂರ್ಣಿಮೆ ಆಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.  ಬರೀ ಸರ್ಟಿಫಿಕೇಟ್‍ಗೋಸ್ಕರ ಶಾಲೆಗೆ ಬಂದರೆ ಅದು ನಿಜವಾದ ವಿದ್ಯೆ ಆಗೋದಿಲ್ಲ, ಸರ್ಟಿಫಿಕೇಟ್‍ ಜೊತೆಗೆ ನಮ್ಮ ಜೀವನಕ್ಕೆ ಬೇಕಾದ ಒಂದು ಉತ್ತಮ ಮೌಲ್ಯ, ಸಂಸ್ಕಾರವನ್ನು ಕೂಡ ನಾವು ಶಿಕ್ಷಣದಿಂದ ಪಡೆಯುವಂತಾಗಬೇಕು. ಅಂತಹ ಒಳ್ಳೆಯ ಮೌಲ್ಯ ಸಂಸ್ಕಾರವನ್ನು ಈ ಶಕ್ತಿ ಶಾಲೆಯು ಇಲ್ಲಿನ ವಿದ್ಯಾರ್ಥಿಗಳಿಗೆ ನೀಡುತ್ತಿದೆ. ಇಡೀ ಜಗತ್ತಿಗೆ ಭಾರತದ ಮೌಲ್ಯ ಮಾದರಿಯಾಗಬೇಕು. ಹಾಗೆ ಆಗಬೇಕಾದರೆ ಇಂತಹ ಶಾಲೆಯಲ್ಲಿ ಕಲಿತ ಒಳ್ಳೆಯ ಸಂಸ್ಕಾರಭರಿತ ಮಕ್ಕಳಿಂದ ಮಾತ್ರ ಸಾಧ್ಯಎಂದರು. ನಾಗರಿಕ ಶಿಷ್ಟಾಚಾರದ ಪಾಲನೆಯನ್ನು ನಾವು ಮಾಡಬೇಕು, ಪ್ರಕೃತಿಯ ರಕ್ಷಣೆ ದೇಶರಕ್ಷಣೆಯ ಮೊದಲ ಹೆಜ್ಜೆ, ಹಾಗಾಗಿ ನಾವು ನಮ್ಮ ಪ್ರಕೃತಿಯ ರಕ್ಷಣೆಯನ್ನು ಮಾಡಬೇಕು ಎಂದರು.

ಶಕ್ತಿ ಶಾಲೆಯ ಸಂಸ್ಕೃತ  ಶಿಕ್ಷಕಿ  ಸಾರಿಕಾ ಗುರುಪೂರ್ಣಿಮೆಯ ಮಹತ್ವದ ಬಗ್ಗೆ ತಿಳಿಸಿದರು. ನಂತರ ಮುಖ್ಯ ಅತಿಥಿಗಳಾದ  ಪಿ ಎಸ್ ಪ್ರಕಾಶ್‍ ಅವರಿಗೆ ಪಾದಪೂಜೆಯನ್ನು ಮಾಡುವ ಮೂಲಕ ಗುರುಪೂಜೆಯನ್ನು ನೆರವೇರಿಸಲಾಯಿತು.

 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಕ್ತಿ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿಯಾಗಿರುವ ಡಾ. ಕೆ ಸಿ ನಾಯ್ಕ್ ಅವರು ವಿದ್ಯಾರ್ಥಿಗಳಿಗೆ ಆಶೀರ್ವಾದವನ್ನು ಮಾಡಿದರು. ಶಕ್ತಿ ವಿದ್ಯಾ ಸಂಸ್ಥೆಯ ಮುಖ್ಯ ಸಲಹೆಗಾರರಾಗಿರುವ‌  ರಮೇಶ್ ಕೆ, ಉಪ ಪ್ರಾಂಶುಪಾಲರಾದ  ನಟೇಶ್ ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಮೇಶ್ ಕೆ  ಸ್ವಾಗತಿಸಿ , ಶಕ್ತಿ ಶಾಲೆಯ ಶಿಕ್ಷಕ ಶರಣಪ್ಪಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

13 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

20 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

20 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago