Advertisement
ಸುದ್ದಿಗಳು

ಶಕ್ತಿ ವಸತಿ ಶಾಲೆಯಲ್ಲಿ ಗುರು ಪೂರ್ಣಿಮೆ | ದೇವರು ಹಾಗೂ ಗುರು ಇಬ್ಬರೂ ಪೂಜೆಗೆ ಯೋಗ್ಯ

Share

ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು ಇಬ್ಬರೂ ಪೂಜೆಗೆ ಯೋಗ್ಯರಾದವರು. ತಂದೆಯನ್ನು ದೇವರಿಗೆ ಹೋಲಿಸಿದರೆ ತಾಯಿಯನ್ನು ಗುರುವಿಗೆ ಹೋಲಿಸಲಾಗುತ್ತದೆ. ಮಕ್ಕಳಲ್ಲಿ ಇರುವ ಎಲ್ಲಾ ಲೋಪದೋಷಗಳನ್ನು ತಿದ್ದಿ ಈ ಸಮಾಜಕ್ಕೆ ಒಬ್ಬ ಉತ್ತಮ ಪ್ರಜೆಯನ್ನು ನೀಡುವುದು ಅಮ್ಮ ಹಾಗೂ ಗುರು ಎಂದು ಹೊಸದಿಗಂತ ಪತ್ರಿಕೆಯ ಸಿಇಓ ಪಿ ಎಸ್ ಪ್ರಕಾಶ್‍ ಹೇಳಿದರು.

ಅವರು ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯಲ್ಲಿಗುರು ಪೂರ್ಣಿಮೆ ಆಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.  ಬರೀ ಸರ್ಟಿಫಿಕೇಟ್‍ಗೋಸ್ಕರ ಶಾಲೆಗೆ ಬಂದರೆ ಅದು ನಿಜವಾದ ವಿದ್ಯೆ ಆಗೋದಿಲ್ಲ, ಸರ್ಟಿಫಿಕೇಟ್‍ ಜೊತೆಗೆ ನಮ್ಮ ಜೀವನಕ್ಕೆ ಬೇಕಾದ ಒಂದು ಉತ್ತಮ ಮೌಲ್ಯ, ಸಂಸ್ಕಾರವನ್ನು ಕೂಡ ನಾವು ಶಿಕ್ಷಣದಿಂದ ಪಡೆಯುವಂತಾಗಬೇಕು. ಅಂತಹ ಒಳ್ಳೆಯ ಮೌಲ್ಯ ಸಂಸ್ಕಾರವನ್ನು ಈ ಶಕ್ತಿ ಶಾಲೆಯು ಇಲ್ಲಿನ ವಿದ್ಯಾರ್ಥಿಗಳಿಗೆ ನೀಡುತ್ತಿದೆ. ಇಡೀ ಜಗತ್ತಿಗೆ ಭಾರತದ ಮೌಲ್ಯ ಮಾದರಿಯಾಗಬೇಕು. ಹಾಗೆ ಆಗಬೇಕಾದರೆ ಇಂತಹ ಶಾಲೆಯಲ್ಲಿ ಕಲಿತ ಒಳ್ಳೆಯ ಸಂಸ್ಕಾರಭರಿತ ಮಕ್ಕಳಿಂದ ಮಾತ್ರ ಸಾಧ್ಯಎಂದರು. ನಾಗರಿಕ ಶಿಷ್ಟಾಚಾರದ ಪಾಲನೆಯನ್ನು ನಾವು ಮಾಡಬೇಕು, ಪ್ರಕೃತಿಯ ರಕ್ಷಣೆ ದೇಶರಕ್ಷಣೆಯ ಮೊದಲ ಹೆಜ್ಜೆ, ಹಾಗಾಗಿ ನಾವು ನಮ್ಮ ಪ್ರಕೃತಿಯ ರಕ್ಷಣೆಯನ್ನು ಮಾಡಬೇಕು ಎಂದರು.

Advertisement

ಶಕ್ತಿ ಶಾಲೆಯ ಸಂಸ್ಕೃತ  ಶಿಕ್ಷಕಿ  ಸಾರಿಕಾ ಗುರುಪೂರ್ಣಿಮೆಯ ಮಹತ್ವದ ಬಗ್ಗೆ ತಿಳಿಸಿದರು. ನಂತರ ಮುಖ್ಯ ಅತಿಥಿಗಳಾದ  ಪಿ ಎಸ್ ಪ್ರಕಾಶ್‍ ಅವರಿಗೆ ಪಾದಪೂಜೆಯನ್ನು ಮಾಡುವ ಮೂಲಕ ಗುರುಪೂಜೆಯನ್ನು ನೆರವೇರಿಸಲಾಯಿತು.

 

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಕ್ತಿ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿಯಾಗಿರುವ ಡಾ. ಕೆ ಸಿ ನಾಯ್ಕ್ ಅವರು ವಿದ್ಯಾರ್ಥಿಗಳಿಗೆ ಆಶೀರ್ವಾದವನ್ನು ಮಾಡಿದರು. ಶಕ್ತಿ ವಿದ್ಯಾ ಸಂಸ್ಥೆಯ ಮುಖ್ಯ ಸಲಹೆಗಾರರಾಗಿರುವ‌  ರಮೇಶ್ ಕೆ, ಉಪ ಪ್ರಾಂಶುಪಾಲರಾದ  ನಟೇಶ್ ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಮೇಶ್ ಕೆ  ಸ್ವಾಗತಿಸಿ , ಶಕ್ತಿ ಶಾಲೆಯ ಶಿಕ್ಷಕ ಶರಣಪ್ಪಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

11 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

13 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

19 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago