ಗುರುಪೂರ್ಣಿಮೆ
ಆಷಾಢ ಹುಣ್ಣಿಮೆ ಅಂದರೆ ಗುರುಪೂರ್ಣಿಮೆ. ಈ ಪ್ರಯುಕ್ತ ಸೋಮವಾರದಂದು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಸಭಾಗೃಹದಲ್ಲಿ ಗುರುಪೂರ್ಣಿಮಾ ಮಹೋತ್ಸವ ನಡೆಯಿತು. ಮಹೋತ್ಸವದಲ್ಲಿ ಮುಳಿಯ ಜುವೆಲ್ಲರ್ಸ್ ಮಾಲಕರಾದ ಕೇಶವ್ ಪ್ರಸಾದ್ ಮುಳಿಯ ಮತ್ತು ಸನಾತನ ಸಂಸ್ಥೆಯ ಲಕ್ಷ್ಮೀ ಪೈ ಇವರು ಉಪಸ್ಥಿತರಿದ್ದರು.
ಮಹೋತ್ಸವವು ಶ್ರೀ ವ್ಯಾಸಪೂಜೆ ಮತ್ತು ಪ. ಪೂ. ಭಕ್ತರಾಜ ಮಹಾರಾಜರ ಪ್ರತಿಮೆಯ ಪೂಜೆಯೊಂದಿಗೆ ಆರಂಭವಾಯಿತು. ನಂತರ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತ ಪ್ರಶಾಂತ್ ಎನ್ಮಾಡಿ ಇವರು ಗುರುಪೂರ್ಣಿಮೆ ನಿಮಿತ್ತ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಸಂದೇಶವನ್ನು ವಾಚನ ಮಾಡಿದರು. ಧರ್ಮಶಿಕ್ಷಣ ನೀಡುವ ಮತ್ತು ರಾಷ್ಟ್ರ ಜಾಗೃತಿ ಮೂಡಿಸುವ ಫಲಕಗಳು, ಆಧ್ಯಾತ್ಮ, ಧರ್ಮಾಚರಣೆ ಮತ್ತು ಸಾಧನೆ ಇನ್ನಿತರ ವಿಷಯಗಳ ಕುರಿತು ಗ್ರಂಥ ಪ್ರದರ್ಶಿನಿಗಳು ಇದ್ದವು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…