ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಮದ್ಯ ಸೇವಿಸಿ ದೇವಸ್ಥಾನಕ್ಕೆ ಬಂದಿದ್ದ ಪಾನಮತ್ತ ಸ್ವಾಮಿಗೆ ಗೋಕುಲ ಗ್ರಾಮದ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಕಪಾಳಮೋಕ್ಷ ಮಾಡಿ, ಮಾಲೆ ತೆಗೆಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಗೋಕುಲದ ಮೋಹನ ಗುರುಸ್ವಾಮಿ ಅವರು ಮದ್ಯ ಸೇವಿಸಿ ದೇವಸ್ಥಾನಕ್ಕೆ ಬಂದಿದ್ದ ಮಾಲಾಧಾರಿ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ್ದಾರೆ. ಅಯ್ಯಪ್ಪ ಸ್ವಾಮಿ ಮಾಲೆ ಹಾಕಿದವರು ಕಠಿಣ ವ್ರತ ಮಾಡಬೇಕು. ಆದರೆ ಈ ವ್ಯಕ್ತಿ ಮಾಲೆ ಧರಿಸಿ ಮದ್ಯ ಸೇವಿಸಿ ಬಂದು ವ್ರತ ಭಂಗ ಮಾಡಿದ್ದ. ಆತನ ಸನಿಹಕ್ಕೆ ಹೋದರೆ ಮದ್ಯದ ವಾಸನೆ ಮೂಗು ಬರುತ್ತಿತ್ತು. ಹೀಗಾಗಿ ಮದ್ಯ ಸೇವಿಸಿ ದೇವರ ಸನ್ನಿಧನಕ್ಕೆ ತೆರಳಿದ್ದ ವ್ಯಕ್ತಿ ಗುರು ಸ್ವಾಮಿ ಬಳಿ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಗುರುಸ್ವಾಮಿ ವ್ಯಕ್ತಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಸ್ಥಳದಲ್ಲೇ ಅಯ್ಯಪ್ಪ ಮಾಲೆ ತೆಗೆಸಿದ್ದಾರೆ. ಕಪ್ಪುಬಟ್ಟೆಯನ್ನೂ ತೆಗೆದು ಸೂಚಿಸಿದ್ದಾರೆ. ಗುರುಸ್ವಾಮಿಯಾಗಿ ಇದು ನನ್ನ ಜವಾಬ್ದಾರಿ, ಸನ್ನಿದಾನದ ಪಾವಿತ್ರ್ಯತೆ ಉಳಿಸಬೇಕು ಎಂದು ಗುರುಸ್ವಾಮಿ ಹೇಳಿದ್ದಾರೆ.
ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…
ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…
ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…
ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…
ಜೂನ್ 22, 2025 ರಂದು 6 ಗ್ರಹಗಳ ಮಹಾಗೋಚಾರ, ಸೂರ್ಯ, ಚಂದ್ರ, ಬುಧ,…
ಐಸ್ ಕ್ರೀಮ್ ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರಿಗೂ ಬೇಕು. ಹಲಸಿನ ಹಣ್ಣಿನ…