ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಮದ್ಯ ಸೇವಿಸಿ ದೇವಸ್ಥಾನಕ್ಕೆ ಬಂದಿದ್ದ ಪಾನಮತ್ತ ಸ್ವಾಮಿಗೆ ಗೋಕುಲ ಗ್ರಾಮದ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಕಪಾಳಮೋಕ್ಷ ಮಾಡಿ, ಮಾಲೆ ತೆಗೆಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಗೋಕುಲದ ಮೋಹನ ಗುರುಸ್ವಾಮಿ ಅವರು ಮದ್ಯ ಸೇವಿಸಿ ದೇವಸ್ಥಾನಕ್ಕೆ ಬಂದಿದ್ದ ಮಾಲಾಧಾರಿ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ್ದಾರೆ. ಅಯ್ಯಪ್ಪ ಸ್ವಾಮಿ ಮಾಲೆ ಹಾಕಿದವರು ಕಠಿಣ ವ್ರತ ಮಾಡಬೇಕು. ಆದರೆ ಈ ವ್ಯಕ್ತಿ ಮಾಲೆ ಧರಿಸಿ ಮದ್ಯ ಸೇವಿಸಿ ಬಂದು ವ್ರತ ಭಂಗ ಮಾಡಿದ್ದ. ಆತನ ಸನಿಹಕ್ಕೆ ಹೋದರೆ ಮದ್ಯದ ವಾಸನೆ ಮೂಗು ಬರುತ್ತಿತ್ತು. ಹೀಗಾಗಿ ಮದ್ಯ ಸೇವಿಸಿ ದೇವರ ಸನ್ನಿಧನಕ್ಕೆ ತೆರಳಿದ್ದ ವ್ಯಕ್ತಿ ಗುರು ಸ್ವಾಮಿ ಬಳಿ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಗುರುಸ್ವಾಮಿ ವ್ಯಕ್ತಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಸ್ಥಳದಲ್ಲೇ ಅಯ್ಯಪ್ಪ ಮಾಲೆ ತೆಗೆಸಿದ್ದಾರೆ. ಕಪ್ಪುಬಟ್ಟೆಯನ್ನೂ ತೆಗೆದು ಸೂಚಿಸಿದ್ದಾರೆ. ಗುರುಸ್ವಾಮಿಯಾಗಿ ಇದು ನನ್ನ ಜವಾಬ್ದಾರಿ, ಸನ್ನಿದಾನದ ಪಾವಿತ್ರ್ಯತೆ ಉಳಿಸಬೇಕು ಎಂದು ಗುರುಸ್ವಾಮಿ ಹೇಳಿದ್ದಾರೆ.
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…