ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಮದ್ಯ ಸೇವಿಸಿ ದೇವಸ್ಥಾನಕ್ಕೆ ಬಂದಿದ್ದ ಪಾನಮತ್ತ ಸ್ವಾಮಿಗೆ ಗೋಕುಲ ಗ್ರಾಮದ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಕಪಾಳಮೋಕ್ಷ ಮಾಡಿ, ಮಾಲೆ ತೆಗೆಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಗೋಕುಲದ ಮೋಹನ ಗುರುಸ್ವಾಮಿ ಅವರು ಮದ್ಯ ಸೇವಿಸಿ ದೇವಸ್ಥಾನಕ್ಕೆ ಬಂದಿದ್ದ ಮಾಲಾಧಾರಿ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ್ದಾರೆ. ಅಯ್ಯಪ್ಪ ಸ್ವಾಮಿ ಮಾಲೆ ಹಾಕಿದವರು ಕಠಿಣ ವ್ರತ ಮಾಡಬೇಕು. ಆದರೆ ಈ ವ್ಯಕ್ತಿ ಮಾಲೆ ಧರಿಸಿ ಮದ್ಯ ಸೇವಿಸಿ ಬಂದು ವ್ರತ ಭಂಗ ಮಾಡಿದ್ದ. ಆತನ ಸನಿಹಕ್ಕೆ ಹೋದರೆ ಮದ್ಯದ ವಾಸನೆ ಮೂಗು ಬರುತ್ತಿತ್ತು. ಹೀಗಾಗಿ ಮದ್ಯ ಸೇವಿಸಿ ದೇವರ ಸನ್ನಿಧನಕ್ಕೆ ತೆರಳಿದ್ದ ವ್ಯಕ್ತಿ ಗುರು ಸ್ವಾಮಿ ಬಳಿ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಗುರುಸ್ವಾಮಿ ವ್ಯಕ್ತಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಸ್ಥಳದಲ್ಲೇ ಅಯ್ಯಪ್ಪ ಮಾಲೆ ತೆಗೆಸಿದ್ದಾರೆ. ಕಪ್ಪುಬಟ್ಟೆಯನ್ನೂ ತೆಗೆದು ಸೂಚಿಸಿದ್ದಾರೆ. ಗುರುಸ್ವಾಮಿಯಾಗಿ ಇದು ನನ್ನ ಜವಾಬ್ದಾರಿ, ಸನ್ನಿದಾನದ ಪಾವಿತ್ರ್ಯತೆ ಉಳಿಸಬೇಕು ಎಂದು ಗುರುಸ್ವಾಮಿ ಹೇಳಿದ್ದಾರೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…