ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಮದ್ಯ ಸೇವಿಸಿ ದೇವಸ್ಥಾನಕ್ಕೆ ಬಂದಿದ್ದ ಪಾನಮತ್ತ ಸ್ವಾಮಿಗೆ ಗೋಕುಲ ಗ್ರಾಮದ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಕಪಾಳಮೋಕ್ಷ ಮಾಡಿ, ಮಾಲೆ ತೆಗೆಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಗೋಕುಲದ ಮೋಹನ ಗುರುಸ್ವಾಮಿ ಅವರು ಮದ್ಯ ಸೇವಿಸಿ ದೇವಸ್ಥಾನಕ್ಕೆ ಬಂದಿದ್ದ ಮಾಲಾಧಾರಿ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ್ದಾರೆ. ಅಯ್ಯಪ್ಪ ಸ್ವಾಮಿ ಮಾಲೆ ಹಾಕಿದವರು ಕಠಿಣ ವ್ರತ ಮಾಡಬೇಕು. ಆದರೆ ಈ ವ್ಯಕ್ತಿ ಮಾಲೆ ಧರಿಸಿ ಮದ್ಯ ಸೇವಿಸಿ ಬಂದು ವ್ರತ ಭಂಗ ಮಾಡಿದ್ದ. ಆತನ ಸನಿಹಕ್ಕೆ ಹೋದರೆ ಮದ್ಯದ ವಾಸನೆ ಮೂಗು ಬರುತ್ತಿತ್ತು. ಹೀಗಾಗಿ ಮದ್ಯ ಸೇವಿಸಿ ದೇವರ ಸನ್ನಿಧನಕ್ಕೆ ತೆರಳಿದ್ದ ವ್ಯಕ್ತಿ ಗುರು ಸ್ವಾಮಿ ಬಳಿ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಗುರುಸ್ವಾಮಿ ವ್ಯಕ್ತಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಸ್ಥಳದಲ್ಲೇ ಅಯ್ಯಪ್ಪ ಮಾಲೆ ತೆಗೆಸಿದ್ದಾರೆ. ಕಪ್ಪುಬಟ್ಟೆಯನ್ನೂ ತೆಗೆದು ಸೂಚಿಸಿದ್ದಾರೆ. ಗುರುಸ್ವಾಮಿಯಾಗಿ ಇದು ನನ್ನ ಜವಾಬ್ದಾರಿ, ಸನ್ನಿದಾನದ ಪಾವಿತ್ರ್ಯತೆ ಉಳಿಸಬೇಕು ಎಂದು ಗುರುಸ್ವಾಮಿ ಹೇಳಿದ್ದಾರೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…