ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಮದ್ಯ ಸೇವಿಸಿ ದೇವಸ್ಥಾನಕ್ಕೆ ಬಂದಿದ್ದ ಪಾನಮತ್ತ ಸ್ವಾಮಿಗೆ ಗೋಕುಲ ಗ್ರಾಮದ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಕಪಾಳಮೋಕ್ಷ ಮಾಡಿ, ಮಾಲೆ ತೆಗೆಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಗೋಕುಲದ ಮೋಹನ ಗುರುಸ್ವಾಮಿ ಅವರು ಮದ್ಯ ಸೇವಿಸಿ ದೇವಸ್ಥಾನಕ್ಕೆ ಬಂದಿದ್ದ ಮಾಲಾಧಾರಿ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ್ದಾರೆ. ಅಯ್ಯಪ್ಪ ಸ್ವಾಮಿ ಮಾಲೆ ಹಾಕಿದವರು ಕಠಿಣ ವ್ರತ ಮಾಡಬೇಕು. ಆದರೆ ಈ ವ್ಯಕ್ತಿ ಮಾಲೆ ಧರಿಸಿ ಮದ್ಯ ಸೇವಿಸಿ ಬಂದು ವ್ರತ ಭಂಗ ಮಾಡಿದ್ದ. ಆತನ ಸನಿಹಕ್ಕೆ ಹೋದರೆ ಮದ್ಯದ ವಾಸನೆ ಮೂಗು ಬರುತ್ತಿತ್ತು. ಹೀಗಾಗಿ ಮದ್ಯ ಸೇವಿಸಿ ದೇವರ ಸನ್ನಿಧನಕ್ಕೆ ತೆರಳಿದ್ದ ವ್ಯಕ್ತಿ ಗುರು ಸ್ವಾಮಿ ಬಳಿ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಗುರುಸ್ವಾಮಿ ವ್ಯಕ್ತಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಸ್ಥಳದಲ್ಲೇ ಅಯ್ಯಪ್ಪ ಮಾಲೆ ತೆಗೆಸಿದ್ದಾರೆ. ಕಪ್ಪುಬಟ್ಟೆಯನ್ನೂ ತೆಗೆದು ಸೂಚಿಸಿದ್ದಾರೆ. ಗುರುಸ್ವಾಮಿಯಾಗಿ ಇದು ನನ್ನ ಜವಾಬ್ದಾರಿ, ಸನ್ನಿದಾನದ ಪಾವಿತ್ರ್ಯತೆ ಉಳಿಸಬೇಕು ಎಂದು ಗುರುಸ್ವಾಮಿ ಹೇಳಿದ್ದಾರೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…