ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಮದ್ಯ ಸೇವಿಸಿ ದೇವಸ್ಥಾನಕ್ಕೆ ಬಂದಿದ್ದ ಪಾನಮತ್ತ ಸ್ವಾಮಿಗೆ ಗೋಕುಲ ಗ್ರಾಮದ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಕಪಾಳಮೋಕ್ಷ ಮಾಡಿ, ಮಾಲೆ ತೆಗೆಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಗೋಕುಲದ ಮೋಹನ ಗುರುಸ್ವಾಮಿ ಅವರು ಮದ್ಯ ಸೇವಿಸಿ ದೇವಸ್ಥಾನಕ್ಕೆ ಬಂದಿದ್ದ ಮಾಲಾಧಾರಿ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ್ದಾರೆ. ಅಯ್ಯಪ್ಪ ಸ್ವಾಮಿ ಮಾಲೆ ಹಾಕಿದವರು ಕಠಿಣ ವ್ರತ ಮಾಡಬೇಕು. ಆದರೆ ಈ ವ್ಯಕ್ತಿ ಮಾಲೆ ಧರಿಸಿ ಮದ್ಯ ಸೇವಿಸಿ ಬಂದು ವ್ರತ ಭಂಗ ಮಾಡಿದ್ದ. ಆತನ ಸನಿಹಕ್ಕೆ ಹೋದರೆ ಮದ್ಯದ ವಾಸನೆ ಮೂಗು ಬರುತ್ತಿತ್ತು. ಹೀಗಾಗಿ ಮದ್ಯ ಸೇವಿಸಿ ದೇವರ ಸನ್ನಿಧನಕ್ಕೆ ತೆರಳಿದ್ದ ವ್ಯಕ್ತಿ ಗುರು ಸ್ವಾಮಿ ಬಳಿ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಗುರುಸ್ವಾಮಿ ವ್ಯಕ್ತಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಸ್ಥಳದಲ್ಲೇ ಅಯ್ಯಪ್ಪ ಮಾಲೆ ತೆಗೆಸಿದ್ದಾರೆ. ಕಪ್ಪುಬಟ್ಟೆಯನ್ನೂ ತೆಗೆದು ಸೂಚಿಸಿದ್ದಾರೆ. ಗುರುಸ್ವಾಮಿಯಾಗಿ ಇದು ನನ್ನ ಜವಾಬ್ದಾರಿ, ಸನ್ನಿದಾನದ ಪಾವಿತ್ರ್ಯತೆ ಉಳಿಸಬೇಕು ಎಂದು ಗುರುಸ್ವಾಮಿ ಹೇಳಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…