ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿ ಅವರಿಗೆ ‘ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ’ |

April 12, 2022
8:01 PM

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರದಿಂದ ಕೊಡಮಾಡುವ ರಾಜ್ಯ ಮಟ್ಟದ ಪ್ರತಿಷ್ಠಿತ ‘ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ’ಗೆ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿ ಅವರು ಆಯ್ಕೆಯಾಗಿದ್ದಾರೆ.

ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಎ.14 ರಂದು ಬೆಳಗ್ಗೆ 10.30ಕ್ಕೆ  ಪ್ರಶಸ್ತಿ ಪ್ರದಾನ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಪ್ರಶಸ್ತಿಯು 5 ಲಕ್ಷ ರೂ. ನಗದು, 20 ಗ್ರಾಂನ ಚಿನ್ನದ ಪದಕ ಹಾಗೂ ಪ್ರಶಸ್ತಿಪತ್ರ ಒಳಗೊಂಡಿದೆ. ಬಾಳೇಪುಣಿ ಅವರಿಗೆ ಈ ಹಿಂದೆ 2011ರಲ್ಲಿ ರಾಷ್ಟ್ರಮಟ್ಟದ ಸರೋಜಿನಿ ನಾಯ್ಡು ಪ್ರಶಸ್ತಿ, 2004ರಲ್ಲಿ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿ, 2014ರಲ್ಲಿ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, 2012ರಲ್ಲಿ ಕಾಂತಾವರ ಪುರಸ್ಕಾರ ದೊರೆತಿದೆ.

ಹೊಸ ದಿಗಂತ ಪತ್ರಿಕೆಯಲ್ಲಿ ಕಳೆದ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಗುರುವಪ್ಪ ಎನ್‌ ಟಿ ಬಾಳೇಪುಣಿ ಅವರು, ಪತ್ರಿಕೋದ್ಯಮದಲ್ಲಿ ಒಟ್ಟು 36 ವರ್ಷಗಳ ಅನುಭವ ಹೊಂದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ
ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ
March 13, 2026
10:02 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ
March 13, 2026
8:47 PM
by: ದ ರೂರಲ್ ಮಿರರ್.ಕಾಂ
ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ
March 13, 2026
8:08 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror