ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಅಭಿವೃದ್ಧಿಗೆ ₹13 ಕೋಟಿ ಮೊತ್ತದ ಅಂದಾಜು ಪಟ್ಟಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಈ ಹೆದ್ದಾರಿಯು ಗುಡ್ಡಗಾಡು ಪ್ರದೇಶ, ಕಡಿದಾದ ಇಳಿಜಾರು ಮತ್ತು ತಿರುವುಗಳಿಂದ ಕೂಡಿದ್ದು, ವಾಹನ ಸಂಚಾರಕ್ಕೆ ಸವಾಲಾಗಿತ್ತು. ರಸ್ತೆ ಅಭಿವೃದ್ಧಿ ಕಾರ್ಯಗಳಿಂದ ಈ ಸಮಸ್ಯೆಗಳಿಗೆ ಪರಿಹಾರ ಸಿಗುವ ನಿರೀಕ್ಷೆ ಇದೆ.
ಗುರುವಾಯನಕೆರೆದಿಂದ ಉಪ್ಪಿನಂಗಡಿವರೆಗೆ ಇರುವ ಈ ಹೆದ್ದಾರಿ, ಬೆಂಗಳೂರು, ಮಂಗಳೂರು ಸೇರಿದಂತೆ ಪ್ರಮುಖ ನಗರಗಳೊಂದಿಗೆ ಜೊತೆಗೆ ಧರ್ಮಸ್ಥಳ, ವೇಣೂರು, ಸಹಸ್ರಲಿಂಗೇಶ್ವರ ದೇವಾಲಯ ಹಾಗೂ ಮಹಾಲಿಂಗೇಶ್ವರ ದೇವಸ್ಥಾನಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಕೊಂಡಿಯಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಜಿಲ್ಲೆಯ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಈ ಹೆದ್ದಾರಿಯನ್ನು ಅಭಿವೃದ್ಧಿಪಡಿಸುವುದು ದೀರ್ಘಕಾಲದ ಬೇಡಿಕೆಯಾಗಿದ್ದು, ಇದೀಗ ಅದು ಈಡೇರಿದಂತಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.
ರಸ್ತೆ ಸುಧಾರಣೆಯಿಂದ ಸ್ಥಳೀಯ ವಾಹನ ಸವಾರರಿಗೆ ಹಾಗೂ ಪ್ರವಾಸಿಗರಿಗೆ ಸಂಚಾರ ಸುಗಮವಾಗಲಿದ್ದು, ಈ ಭಾಗದ ಪ್ರವಾಸೋದ್ಯಮಕ್ಕೂ ಉತ್ತೇಜನ ಸಿಗಲಿದೆ.
The Karnataka government has approved ₹13 crore for the development of the Guruvayanakere–Uppinangady state highway in Dakshina Kannada. The upgrade is expected to improve connectivity, ease travel, and boost tourism in the region.
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…