Advertisement
ಸುದ್ದಿಗಳು

ಗುರುವಾಯನಕೆರೆ–ಉಪ್ಪಿನಂಗಡಿ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಮಂಜೂರು – ಸಂಚಾರ ಸುಗಮ, ಪ್ರವಾಸೋದ್ಯಮಕ್ಕೂ ಉತ್ತೇಜನ

Share

ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಅಭಿವೃದ್ಧಿಗೆ ₹13 ಕೋಟಿ ಮೊತ್ತದ ಅಂದಾಜು ಪಟ್ಟಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಈ ಹೆದ್ದಾರಿಯು ಗುಡ್ಡಗಾಡು ಪ್ರದೇಶ, ಕಡಿದಾದ ಇಳಿಜಾರು ಮತ್ತು ತಿರುವುಗಳಿಂದ ಕೂಡಿದ್ದು, ವಾಹನ ಸಂಚಾರಕ್ಕೆ ಸವಾಲಾಗಿತ್ತು. ರಸ್ತೆ ಅಭಿವೃದ್ಧಿ ಕಾರ್ಯಗಳಿಂದ ಈ ಸಮಸ್ಯೆಗಳಿಗೆ ಪರಿಹಾರ ಸಿಗುವ ನಿರೀಕ್ಷೆ ಇದೆ.

ಗುರುವಾಯನಕೆರೆದಿಂದ ಉಪ್ಪಿನಂಗಡಿವರೆಗೆ ಇರುವ ಈ ಹೆದ್ದಾರಿ, ಬೆಂಗಳೂರು, ಮಂಗಳೂರು ಸೇರಿದಂತೆ ಪ್ರಮುಖ ನಗರಗಳೊಂದಿಗೆ ಜೊತೆಗೆ ಧರ್ಮಸ್ಥಳ, ವೇಣೂರು, ಸಹಸ್ರಲಿಂಗೇಶ್ವರ ದೇವಾಲಯ ಹಾಗೂ ಮಹಾಲಿಂಗೇಶ್ವರ ದೇವಸ್ಥಾನಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಕೊಂಡಿಯಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಜಿಲ್ಲೆಯ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಈ ಹೆದ್ದಾರಿಯನ್ನು ಅಭಿವೃದ್ಧಿಪಡಿಸುವುದು ದೀರ್ಘಕಾಲದ ಬೇಡಿಕೆಯಾಗಿದ್ದು, ಇದೀಗ ಅದು ಈಡೇರಿದಂತಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ರಸ್ತೆ ಸುಧಾರಣೆಯಿಂದ ಸ್ಥಳೀಯ ವಾಹನ ಸವಾರರಿಗೆ ಹಾಗೂ ಪ್ರವಾಸಿಗರಿಗೆ ಸಂಚಾರ ಸುಗಮವಾಗಲಿದ್ದು, ಈ ಭಾಗದ ಪ್ರವಾಸೋದ್ಯಮಕ್ಕೂ ಉತ್ತೇಜನ ಸಿಗಲಿದೆ.

The Karnataka government has approved ₹13 crore for the development of the Guruvayanakere–Uppinangady state highway in Dakshina Kannada. The upgrade is expected to improve connectivity, ease travel, and boost tourism in the region.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

3 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

3 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

3 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

4 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

14 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

15 hours ago