ಆಮೆನಡಿಗೆಯ ಕಾಮಗಾರಿ | ಗುತ್ತಿಗಾರಿನಲ್ಲಿ ಮಹಿಳೆಯ ನೇತೃತ್ವದಲ್ಲಿ ತಾತ್ಕಾಲಿಕವಾಗಿ ರಸ್ತೆ ದುರಸ್ತಿ…..! | ಮಹಿಳೆಯ ಕಾಳಜಿಗೆ ಶ್ಲಾಘನೆ |

July 22, 2021
10:42 PM
ಅನೇಕ ಸಮಯಗಳಿಂದ ಆಮೆ ನಡಿಗೆಯಲ್ಲಿ ಗುತ್ತಿಗಾರಿನಲ್ಲಿ  ಮುಖ್ಯ ರಸ್ತೆಯ ಮೋರಿ ರಚನೆಯ ಕಾರ್ಯ ನಡೆಯುತ್ತಿತ್ತು. ದಿನವೂ ಸಾಕಷ್ಟು ಸಂಖ್ಯೆಯಲ್ಲಿ  ಜನರ ಓಡಾಟ ಇತ್ತು. ಈಚೆಗೆ ಅಪಘಾತಗಳು ನಡೆದವು. ಹೀಗಿದ್ದರೂ ಸಂಬಂಧಿಸಿದ ಇಲಾಖೆ ಎಚ್ಚೆತ್ತುಕೊಳ್ಳಲೇ ಇಲ್ಲ. ಸಾರ್ವಜನಿಕರು ಮನವಿ ಮಾಡಿದರೂ ಕೆಲಸ ಆಗಿಲ್ಲ. ಕಳೆದ ಎರಡು ದಿನಗಳ ಹಿಂದೆ ಮತ್ತೊಂದು ಸಣ್ಣ ಅಪಘಾತವಾಗಿತ್ತು. ಇದೀಗ ಅಲ್ಲೇ ಪಕ್ಕದಲ್ಲಿ  ಕಬ್ಬಿಣದ  ಕೆಲಸ ಮಾಡುವ ಅಂಗಡಿ ಹೊಂದಿದ್ದ ಲೀಲಾ ಎಂಬವರ ನೇತೃತ್ವದಲ್ಲಿ  ಗುಂಡಿಗೆ ಕಲ್ಲು ಹಾಕುವ ಮೂಲಕ ತಾತ್ಕಾಲಿಕ ದುರಸ್ತಿ ಮಾಡಿದ್ದಾರೆ. ಇಲಾಖೆಗಳು ಎಚ್ಚರವಾಗಿದ್ದರೆ ತಕ್ಷಣವೇ ಸುರಕ್ಷತೆಯ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕಿದೆ. ಜನಪ್ರತಿನಿಧಿಗಳೂ ಗಮನಿಸಬೇಕಿದೆ.
ಕಬ್ಬಣದ ಕೆಲಸ ಮಾಡುತ್ತಿದ್ದ ಸಾಮಾನ್ಯ ಮಹಿಳೆಯೊಬ್ಬರು  ತನ್ನ ಅಂಗಡಿ ಪಕ್ಕದಲ್ಲಿ ಅನೇಕ ದಿನಗಳಿಂದ ರಸ್ತೆಯ ಅವ್ಯವಸ್ಥೆ ಕಂಡು , ಅಪಘಾತದ ಸುದ್ದಿ ಕೇಳಿ, ಮಾಧ್ಯಮಗಳಲ್ಲಿನ ವರದಿ ಗಮನಿಸಿ ಗುರುವಾರ ಸಂಜೆ ಸ್ವತಃ ದುರಸ್ತಿ ಕಾರ್ಯ ಮಾಡಿದರು. ಸ್ಥಳೀಯ ಜನರೂ ಸಹಕಾರ ನೀಡಿದರು. ಮಹಿಳೆಯ ಈ ಮಾದರಿ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ | ರೋಗ ನಿರ್ವಹಣೆ ತಪ್ಪಿದರೆ ಇಳುವರಿ ಕುಸಿತ..! – ಅಡಿಕೆ ಸಮೀಕ್ಷೆ ವರದಿ
March 12, 2026
7:04 AM
by: ದ ರೂರಲ್ ಮಿರರ್.ಕಾಂ
ಮಣ್ಣಿನ ಆರೋಗ್ಯಕ್ಕೂ ಪ್ರಕೃತಿಯ ಸಮತೋಲನಕ್ಕೂ ಎಚ್ಚರಿಕೆಯ ಗಂಟೆ
January 19, 2026
7:41 AM
by: ಎ ಪಿ ಸದಾಶಿವ ಮರಿಕೆ
ಅಡಿಕೆ ಮಾರುಕಟ್ಟೆಯಲ್ಲಿ ಏನಿದು “ಡಿಸೆಂಬರ್‌ ಡಿಪ್‌” ? | ಮಾರುಕಟ್ಟೆ ಚೇತರಿಕೆ ಯಾವಾಗ..? ಬೆಳೆಗಾರರು ಏನು ಮಾಡಬಹುದು..?
December 18, 2025
10:11 PM
by: ಅರುಣ್‌ ಕುಮಾರ್ ಕಾಂಚೋಡು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳೆ ವಿಮೆ ಕತೆ ಏನು..? | ಬೆಳೆ ವಿಮೆ ಪಾವತಿಯಾಗದೇ ಇದ್ದರೆ ಸರ್ಕಾರದಿಂದ ಪರಿಹಾರ ಅಗತ್ಯವಿದೆ
December 7, 2025
8:20 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror