The Rural Mirror ಫಾಲೋಅಪ್

ಆಮೆನಡಿಗೆಯ ಕಾಮಗಾರಿ | ಗುತ್ತಿಗಾರಿನಲ್ಲಿ ಮಹಿಳೆಯ ನೇತೃತ್ವದಲ್ಲಿ ತಾತ್ಕಾಲಿಕವಾಗಿ ರಸ್ತೆ ದುರಸ್ತಿ…..! | ಮಹಿಳೆಯ ಕಾಳಜಿಗೆ ಶ್ಲಾಘನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಅನೇಕ ಸಮಯಗಳಿಂದ ಆಮೆ ನಡಿಗೆಯಲ್ಲಿ ಗುತ್ತಿಗಾರಿನಲ್ಲಿ  ಮುಖ್ಯ ರಸ್ತೆಯ ಮೋರಿ ರಚನೆಯ ಕಾರ್ಯ ನಡೆಯುತ್ತಿತ್ತು. ದಿನವೂ ಸಾಕಷ್ಟು ಸಂಖ್ಯೆಯಲ್ಲಿ  ಜನರ ಓಡಾಟ ಇತ್ತು. ಈಚೆಗೆ ಅಪಘಾತಗಳು ನಡೆದವು. ಹೀಗಿದ್ದರೂ ಸಂಬಂಧಿಸಿದ ಇಲಾಖೆ ಎಚ್ಚೆತ್ತುಕೊಳ್ಳಲೇ ಇಲ್ಲ. ಸಾರ್ವಜನಿಕರು ಮನವಿ ಮಾಡಿದರೂ ಕೆಲಸ ಆಗಿಲ್ಲ. ಕಳೆದ ಎರಡು ದಿನಗಳ ಹಿಂದೆ ಮತ್ತೊಂದು ಸಣ್ಣ ಅಪಘಾತವಾಗಿತ್ತು. ಇದೀಗ ಅಲ್ಲೇ ಪಕ್ಕದಲ್ಲಿ  ಕಬ್ಬಿಣದ  ಕೆಲಸ ಮಾಡುವ ಅಂಗಡಿ ಹೊಂದಿದ್ದ ಲೀಲಾ ಎಂಬವರ ನೇತೃತ್ವದಲ್ಲಿ ಗುಂಡಿಗೆ ಕಲ್ಲು ಹಾಕುವ ಮೂಲಕ ತಾತ್ಕಾಲಿಕ ದುರಸ್ತಿ ಮಾಡಿದ್ದಾರೆ. ಇಲಾಖೆಗಳು ಎಚ್ಚರವಾಗಿದ್ದರೆ ತಕ್ಷಣವೇ ಸುರಕ್ಷತೆಯ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕಿದೆ. ಜನಪ್ರತಿನಿಧಿಗಳೂ ಗಮನಿಸಬೇಕಿದೆ.
ಕಬ್ಬಣದ ಕೆಲಸ ಮಾಡುತ್ತಿದ್ದ ಸಾಮಾನ್ಯ ಮಹಿಳೆಯೊಬ್ಬರು  ತನ್ನ ಅಂಗಡಿ ಪಕ್ಕದಲ್ಲಿ ಅನೇಕ ದಿನಗಳಿಂದ ರಸ್ತೆಯ ಅವ್ಯವಸ್ಥೆ ಕಂಡು , ಅಪಘಾತದ ಸುದ್ದಿ ಕೇಳಿ, ಮಾಧ್ಯಮಗಳಲ್ಲಿನ ವರದಿ ಗಮನಿಸಿ ಗುರುವಾರ ಸಂಜೆ ಸ್ವತಃ ದುರಸ್ತಿ ಕಾರ್ಯ ಮಾಡಿದರು. ಸ್ಥಳೀಯ ಜನರೂ ಸಹಕಾರ ನೀಡಿದರು. ಮಹಿಳೆಯ ಈ ಮಾದರಿ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

9 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

10 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

13 hours ago

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

13 hours ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

13 hours ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

2 days ago