ಗುತ್ತಿಗಾರು | ಆಜಾದಿ ಕಾ ಅಮೃತಮಹೋತ್ಸವ ಆಚರಣೆ | ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ |

September 18, 2022
10:19 PM

ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ಮತ್ತು ಗುತ್ತಿಗಾರು ಸೈಂಟ್ ಮೇರಿಸ್ ಚರ್ಚ್  ಸಂಯುಕ್ತ ಆಶ್ರಯದಲ್ಲಿ ಗುತ್ತಿಗಾರು ಗ್ರಾಮದ ಪ್ರೌಢ ಶಾಲಾ ಮಕ್ಕಳಿಗೆ 75 ನೇ ಸ್ವಾತಂತ್ರ್ಯೋತ್ಸವ  ಪ್ರಯುಕ್ತ “ಪ್ರಜಾಪ್ರಭುತ್ವ ದೇಶ, ನನ್ನ ಭಾರತ” ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸ್ಫರ್ಧೆತ ಬಹುಮಾನ ವಿತರಣಾ ಕಾರ್ಯಕ್ರಮ ಭಾನುವಾರ ಗುತ್ತಿಗಾರು ಸೈಂಟ್ ಮೇರಿಸ್ ಚರ್ಚ್ ಗುತ್ತಿಗಾರು ವಠಾರದಲ್ಲಿ ನಡೆಯಿತು.

Advertisement
Advertisement

ಗುತಿಗಾರು ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ  ನೆಲ್ಸನ್ ಕಾಸ್ಟಲೀನೋ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ನಮ್ಮ ದೇಶ ವೈವಿದ್ಯತೆಯಿಂದ ಕೂಡಿದ ದೇಶ ಇಲ್ಲಿ ಎಲ್ಲರೂ ಸಾಮರಸ್ಯ ಮತ್ತು ಶಾಂತಿ ಸೌಹಾರ್ದತೆಯನ್ನು ಪಾಲನೆ ಮಾಡುವಾಗ ನಮ್ಮ ದೇಶ ಬಲಿಷ್ಠವಾಗಲಿದೆ ಎಂದರು.

Advertisement

ಕಾರ್ಯಕ್ರಮದಲ್ಲಿ  ಅತಿಥಿಗಳಾಗಿದ್ದ ಪತ್ರಕರ್ತ ಮಹೇಶ್ ಪುಚ್ಚಪಾಡಿ ಪ್ರಜಾಪ್ರಭುತ್ವ ಮೌಲ್ಯಗಳು ಹಾಗೂ ಗ್ರಾಮೀಣ ಭಾರತದ ಬಗ್ಗೆ ಮಾತನಾಡಿ, ಸ್ವಾತಂತ್ರ್ಯದ ಅಮೃತಮಹೋತ್ಸವದ ಸಂದರ್ಭ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಇನ್ನಷ್ಟು ಬೆಳೆಸುವುದರ ಜೊತೆಗೆ ಧಾರ್ಮಿಕ ಕೇಂದ್ರಗಳ, ಸಂಘಟನೆಗಳ ಮೂಲಕ ಪ್ರಜಾಪ್ರಭುತ್ವದ ಉಳಿವಿಗೆ  ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಆಜಾದಿ ಕಾ ಅಮೃತ ಮಹೋತ್ಸವದ ಸಂದರ್ಭದಲ್ಲಿ ಭಾರತ ಬೆಳೆದ ಹಾದಿ ಹಾಗೂ ಮುಂದೆ ಬೆಳೆಯಬೇಕಾದ ಹಾದಿಗಳ ಬಗ್ಗೆ ಯೋಚಿಸವೇಕಾಗಿದೆ. ಗ್ರಾಮೀಣ ಭಾರತ ಸಶಕ್ತವಾಗುವ ಮೂಲಕ ಭಾರತವನ್ನು ಬೆಳೆಸಬೇಕಿದೆ ಎಂದರು.

ಧರ್ಮಗುರು ಫಾ ಆದರ್ಶ್ ಜೋಸೆಫ್ ಮಾತನಾಡಿ ಎಲ್ಲರಲ್ಲೂ ಭಗವಂತನ ಚೇತನ ಇದೆ. ಒಬ್ಬರೊಬ್ಬರನ್ನು ಅರ್ಥ ಮಾಡಿಕೊಂಡು ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವಾಗ ಸಮಾಜದಲ್ಲಿ ಸಾಮರಸ್ಯ ಇರುತ್ತದೆ ಹಾಗೂ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಗಳಲ್ಲಿ ಭಾಗವಹಿಸಿ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಬೇಕೆಂದು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು.

Advertisement

ಕಾರ್ಯಕ್ರಮದಲ್ಲಿ ಸುಬ್ರಮಣ್ಯ ಠಾಣೆಯ ಎ ಎಸ್ ಐ ಥೋಮಸ್. ಇ . ಜಿ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.

Advertisement

ಕೆ. ಎಸ್. ಎಂ. ಸಿ. ಎ ಗುತ್ತಿಗಾರು ಘಟಕದ ಅಧ್ಯಕ್ಷ  ಜೋರ್ಜ್. ಕೆ.ಎಂ ಸಭಾಧ್ಯಕ್ಷತೆಯನ್ನು ವಹಿಸಿದರು. ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ಕೇಂದ್ರ ಸಮಿತಿಯ ಬಿಟ್ಟಿ ಬಿ ನೆಡುನೀಲಂ ಪ್ರಸ್ತಾವಿಕ ಭಾಷಣ ಮಾಡಿದರು. . ಎಸ್. ಎಂ. ಸಿ. ಎ ಗುತ್ತಿಗಾರು ಘಟಕದ ಕಾರ್ಯದರ್ಶಿ ಸಿಜೊ ಅಬ್ರಹಾಂ ಸ್ವಾಗತಿಸಿ, ಕೋಶಾಧಿಕಾರಿ  ಶೈಜು ವಂದಿಸಿದರು.  ಜಿಸ್ಮಿ ಲಿಜೊ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಬೆಳೆಯಲು ಕೃಷಿಯೂ ಪಠ್ಯದ ಭಾಗವಾಗಬೇಕು | ಪದ್ಮಶ್ರೀ ಸತ್ಯನಾರಾಯಣ ಬೆಳೆರಿ ಅಭಿಪ್ರಾಯ |
May 10, 2024
10:00 PM
by: ಮಹೇಶ್ ಪುಚ್ಚಪ್ಪಾಡಿ
ಅಕ್ಷಯ ತೃತೀಯ | ಅನಂತ ಶುಭವನ್ನು ತರುವ ಹಬ್ಬ | ಚಿನ್ನ ಖರೀದಿಸುವುದೊಂದೇ ಅಕ್ಷಯ ತೃತೀಯ ಅಲ್ಲ..!
May 10, 2024
1:56 PM
by: The Rural Mirror ಸುದ್ದಿಜಾಲ
ಪಾರಂಪರಿಕ ಬೀಜೋತ್ಸವ | ದಾವಣಗೆರೆಯಲ್ಲಿ ಮೇ.12 ರಂದು ನಡೆಯಲಿದೆ ಸಂಭ್ರಮದ ಬೀಜ ವೈಭವ |
May 10, 2024
1:28 PM
by: The Rural Mirror ಸುದ್ದಿಜಾಲ
ಬ್ರೆಜಿಲ್‌ನಲ್ಲಿ ಹೆಚ್ಚಿದ ಪ್ರವಾಹ ತೀವ್ರತೆ | ಮೃತರ ಸಂಖ್ಯೆ 78ಕ್ಕೆ ಏರಿಕೆ, 105 ಮಂದಿ ನಾಪತ್ತೆ | 1,15,000ಕ್ಕೂ ಹೆಚ್ಚು ಜನರ ಸ್ಥಳಾಂತರ |
May 10, 2024
1:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror