Advertisement
ಸುದ್ದಿಗಳು

ಗುತ್ತಿಗಾರು ಚರ್ಚ್‌ನಲ್ಲಿ ಸೌಹಾರ್ದ ಕೂಟ | ಸ್ನೇಹಮಯ ವಾತಾವರಣದಿಂದಲೇ ಭಗವಂತ ನೆಲೆಯಾಗಲು ಸಾಧ್ಯ |

Share

ಸಮಾಜದಲ್ಲಿ ಸ್ನೇಹಮಯ ವಾತಾವರಣ ಇದ್ದಾಗ ಮಾತ್ರವೇ ಭಗವಂತ ಆಲಯಗಳಲ್ಲಿ ನೆಲೆಸಲು ಸಾಧ್ಯ. ಧರ್ಮಗಳ ಒಳಗೆ ಸಂಘರ್ಷ, ಸಮಾಜದಲ್ಲಿ ಸಂಘರ್ಷ ಇದ್ದಾಗ ಯಾವತ್ತೂ ಶಾಂತಿ ಇರಲು ಸಾಧ್ಯವಿಲ್ಲ. ಶಾಂತಿ ಇಲ್ಲದ ಕಡೆಗಳಲ್ಲಿ  ಭಗವಂತ ನೆಲೆಸಲು ಸಾಧ್ಯವಿಲ್ಲ ಎಂದು  ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್‌ ರೆ.ಫಾ.ಡಾ. ಲಾರೆನ್ಸ್‌ ಎಂ ಟಿ ಹೇಳಿದರು.

Advertisement
Advertisement
Advertisement
Advertisement

ಅವರು ಗುತ್ತಿಗಾರಿನ ಸಂತ ಮೆರೀಸ್‌ ಚರ್ಚ್‌ ನ ಸಭಾಭವನದಲ್ಲಿ ಭಾನುವಾರ ಸಂಜೆ ನಡೆದ ಸೌಹಾರ್ದ ಕೂಟದಲ್ಲಿ ಮಾತನಾಡಿದರು. ವಿವಿಧ ಗಣ್ಯರು ಈ ಸೌಹಾರ್ದ ಸಭೆಯಲ್ಲಿ ಭಾಗವಹಿಸಿದ್ದರು. ಸಮಾಜದಲ್ಲಿ ಸಾಮರಸ್ಯ  ಮತ್ತು ಐಕ್ಯತೆ ಮೂಡಿಸುವ ಹಾಗೂ ಬೆಳೆಸುವ ನಿಟ್ಟಿನಲ್ಲಿ  ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಭೆಯಲ್ಲಿ ಗಣ್ಯರು ಮಾತನಾಡಿ, ಕ್ರೈಸ್ತ ಸಮುದಾಯದ ಕೊಡುಗೆ ಹಾಗೂ ಸಮಾಜದಲ್ಲಿ ಕ್ರೈಸ್ತರು ಬೆಸೆದುಕೊಂಡಿರುವ ರೀತಿಯ ಬಗ್ಗೆ ಹೇಳಿದರು.

Advertisement

ಬಳಿಕ ಮಾತನಾಡಿದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್‌ ರೆ.ಫಾ.ಡಾ. ಲಾರೆನ್ಸ್‌ ಎಂ ಟಿ, ಶಾಂತಿ, ಸೌಹಾದರ್ತೆ ನೆಲೆಯಾದರೆ ಮಾತ್ರವೇ ಸಮಾಜದಲ್ಲಿ ಉತ್ತಮ ಬಾಂಧವ್ಯ ಬೆಳೆಯಲು ಸಾಧ್ಯವಿದೆ. ಯಾವುದೇ ಕಾರಣಕ್ಕೂ ಅಶಾಂತಿಗಳು ಸೃಷ್ಟಿಯಾಗಬಾರದು. ಭಗವಂತನೂ ಕೂಡಾ ಇದೇ ವಾತಾವರಣವನ್ನು ಬಯಸುತ್ತಾರೆ. ಎಲ್ಲಾ ಧರ್ಮಗಳಲ್ಲೂ ಕೆಲವೊಮ್ಮೆ ಅಚಾತುರ್ಯಗಳು,  ತಪ್ಪುಗಳಾಗಬಹುದು. ಅದನ್ನು ತಕ್ಷಣವೇ ಸರಿಪಡಿಸಿಕೊಳ್ಳುವ ನೇತೃತ್ವವನ್ನು ಧರ್ಮಗುರುಗಳು ವಹಿಸಿಕೊಳ್ಳಬೇಕು ಎಂದರು.

ಸಭೆಯಲ್ಲಿ ಗುತ್ತಿಗಾರು ಸಂತ ಮೆರೀಸ್‌ ಚರ್ಚ್‌‌ ಧರ್ಮಗುರು ಫಾ.ಆದರ್ಶ್‌ ಜೋಸೆಫ್‌, ಗುತ್ತಿಗಾರು ಮಸೀದಿಯ ಉಸ್ತಾದ್‌ ಅಬ್ದುಲ್‌ ನಝರ್‌, ಮುಖಂಡರಾದ ಭರತ್‌ ಮುಂಡೋಡಿ, ಪಿ ಸಿ ಜಯರಾಮ, ವೆಂಕಟ್‌ ದಂಬೆಕೋಡಿ, ಡಾ.ಯು ಪಿ ಶಿವಾನಂದ,  ವೆಂಕಟ್‌ ವಳಲಂಬೆ, ಲಕ್ಷ್ಮೀಶ ಗಬ್ಲಡ್ಕ, ಅಬ್ಬಾಸ್‌ ವಳಲಂಬೆ, ಪ್ರವೀಣ್‌ ಮುಂಡೋಡಿ, ಮಹೇಶ್‌ ಪುಚ್ಚಪ್ಪಾಡಿ ಹಾಗೂ ಚರ್ಚ್‌  ಆಡಳಿತ ಸಮಿತಿ ಪದಾಧಿಕಾರಿಗಳು ಭಾಗವಹಿಸಿದ್ದರು.

Advertisement

ಬಿಟ್ಟಿ ನೆಡುನೀಲಂ ಸ್ವಾಗತಿಸಿ ನಿರೂಪಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

21 mins ago

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…

51 mins ago

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…

2 hours ago

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…

2 hours ago

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

15 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

15 hours ago