Advertisement
ಸುದ್ದಿಗಳು

ಗುತ್ತಿಗಾರು ಚರ್ಚ್‌ನಲ್ಲಿ ಸೌಹಾರ್ದ ಕೂಟ | ಸ್ನೇಹಮಯ ವಾತಾವರಣದಿಂದಲೇ ಭಗವಂತ ನೆಲೆಯಾಗಲು ಸಾಧ್ಯ |

Share

ಸಮಾಜದಲ್ಲಿ ಸ್ನೇಹಮಯ ವಾತಾವರಣ ಇದ್ದಾಗ ಮಾತ್ರವೇ ಭಗವಂತ ಆಲಯಗಳಲ್ಲಿ ನೆಲೆಸಲು ಸಾಧ್ಯ. ಧರ್ಮಗಳ ಒಳಗೆ ಸಂಘರ್ಷ, ಸಮಾಜದಲ್ಲಿ ಸಂಘರ್ಷ ಇದ್ದಾಗ ಯಾವತ್ತೂ ಶಾಂತಿ ಇರಲು ಸಾಧ್ಯವಿಲ್ಲ. ಶಾಂತಿ ಇಲ್ಲದ ಕಡೆಗಳಲ್ಲಿ  ಭಗವಂತ ನೆಲೆಸಲು ಸಾಧ್ಯವಿಲ್ಲ ಎಂದು  ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್‌ ರೆ.ಫಾ.ಡಾ. ಲಾರೆನ್ಸ್‌ ಎಂ ಟಿ ಹೇಳಿದರು.

ಅವರು ಗುತ್ತಿಗಾರಿನ ಸಂತ ಮೆರೀಸ್‌ ಚರ್ಚ್‌ ನ ಸಭಾಭವನದಲ್ಲಿ ಭಾನುವಾರ ಸಂಜೆ ನಡೆದ ಸೌಹಾರ್ದ ಕೂಟದಲ್ಲಿ ಮಾತನಾಡಿದರು. ವಿವಿಧ ಗಣ್ಯರು ಈ ಸೌಹಾರ್ದ ಸಭೆಯಲ್ಲಿ ಭಾಗವಹಿಸಿದ್ದರು. ಸಮಾಜದಲ್ಲಿ ಸಾಮರಸ್ಯ  ಮತ್ತು ಐಕ್ಯತೆ ಮೂಡಿಸುವ ಹಾಗೂ ಬೆಳೆಸುವ ನಿಟ್ಟಿನಲ್ಲಿ  ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಭೆಯಲ್ಲಿ ಗಣ್ಯರು ಮಾತನಾಡಿ, ಕ್ರೈಸ್ತ ಸಮುದಾಯದ ಕೊಡುಗೆ ಹಾಗೂ ಸಮಾಜದಲ್ಲಿ ಕ್ರೈಸ್ತರು ಬೆಸೆದುಕೊಂಡಿರುವ ರೀತಿಯ ಬಗ್ಗೆ ಹೇಳಿದರು.

ಬಳಿಕ ಮಾತನಾಡಿದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್‌ ರೆ.ಫಾ.ಡಾ. ಲಾರೆನ್ಸ್‌ ಎಂ ಟಿ, ಶಾಂತಿ, ಸೌಹಾದರ್ತೆ ನೆಲೆಯಾದರೆ ಮಾತ್ರವೇ ಸಮಾಜದಲ್ಲಿ ಉತ್ತಮ ಬಾಂಧವ್ಯ ಬೆಳೆಯಲು ಸಾಧ್ಯವಿದೆ. ಯಾವುದೇ ಕಾರಣಕ್ಕೂ ಅಶಾಂತಿಗಳು ಸೃಷ್ಟಿಯಾಗಬಾರದು. ಭಗವಂತನೂ ಕೂಡಾ ಇದೇ ವಾತಾವರಣವನ್ನು ಬಯಸುತ್ತಾರೆ. ಎಲ್ಲಾ ಧರ್ಮಗಳಲ್ಲೂ ಕೆಲವೊಮ್ಮೆ ಅಚಾತುರ್ಯಗಳು,  ತಪ್ಪುಗಳಾಗಬಹುದು. ಅದನ್ನು ತಕ್ಷಣವೇ ಸರಿಪಡಿಸಿಕೊಳ್ಳುವ ನೇತೃತ್ವವನ್ನು ಧರ್ಮಗುರುಗಳು ವಹಿಸಿಕೊಳ್ಳಬೇಕು ಎಂದರು.

ಸಭೆಯಲ್ಲಿ ಗುತ್ತಿಗಾರು ಸಂತ ಮೆರೀಸ್‌ ಚರ್ಚ್‌‌ ಧರ್ಮಗುರು ಫಾ.ಆದರ್ಶ್‌ ಜೋಸೆಫ್‌, ಗುತ್ತಿಗಾರು ಮಸೀದಿಯ ಉಸ್ತಾದ್‌ ಅಬ್ದುಲ್‌ ನಝರ್‌, ಮುಖಂಡರಾದ ಭರತ್‌ ಮುಂಡೋಡಿ, ಪಿ ಸಿ ಜಯರಾಮ, ವೆಂಕಟ್‌ ದಂಬೆಕೋಡಿ, ಡಾ.ಯು ಪಿ ಶಿವಾನಂದ,  ವೆಂಕಟ್‌ ವಳಲಂಬೆ, ಲಕ್ಷ್ಮೀಶ ಗಬ್ಲಡ್ಕ, ಅಬ್ಬಾಸ್‌ ವಳಲಂಬೆ, ಪ್ರವೀಣ್‌ ಮುಂಡೋಡಿ, ಮಹೇಶ್‌ ಪುಚ್ಚಪ್ಪಾಡಿ ಹಾಗೂ ಚರ್ಚ್‌  ಆಡಳಿತ ಸಮಿತಿ ಪದಾಧಿಕಾರಿಗಳು ಭಾಗವಹಿಸಿದ್ದರು.

ಬಿಟ್ಟಿ ನೆಡುನೀಲಂ ಸ್ವಾಗತಿಸಿ ನಿರೂಪಿಸಿದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

15 hours ago

ಕೂದಲಿಗೆ ಬಳಸುವ ಎಣ್ಣೆಯ ಪ್ರಯೋಜನ

ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…

21 hours ago

ಚಳಿಗಾಲದಲ್ಲಿ ಹೃದಯದ ಕಾಳಜಿಯ ಬಗ್ಗೆ ನಿರ್ಲಕ್ಷ್ಯ ಬೇಡ- ಎಚ್ಚರಿಕೆ ಇರಲಿ

ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…

21 hours ago

ಮಹಿಳೆಯರಿಗಾಗಿ ಉಚಿತ ಆರಿ ವರ್ಕ್ಸ್ ತರಬೇತಿ

ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…

21 hours ago

ಮೊಟ್ಟೆಯಲ್ಲಿ ಅಪಾಯಕಾರಿ ಕ್ಯಾನ್ಸರ್ ಅಂಶ ಪತ್ತೆ ಎಂಬ ಊಹಪೋಹಗಳಿಗೆ ಬ್ರೇಕ್

ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…

21 hours ago

ಗೃಹಲಕ್ಷ್ಮಿ ಸಹಕಾರ ಬ್ಯಾಂಕ್ ಕಡಿಮೆ ಬಡ್ಡಿಯಲಿ ಸಾಲ ಪಡೆಯಿರಿ

ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…

21 hours ago