Advertisement
ಸುದ್ದಿಗಳು

ಗುತ್ತಿಗಾರು ಚರ್ಚ್‌ನಲ್ಲಿ ಸೌಹಾರ್ದ ಕೂಟ | ಸ್ನೇಹಮಯ ವಾತಾವರಣದಿಂದಲೇ ಭಗವಂತ ನೆಲೆಯಾಗಲು ಸಾಧ್ಯ |

Share

ಸಮಾಜದಲ್ಲಿ ಸ್ನೇಹಮಯ ವಾತಾವರಣ ಇದ್ದಾಗ ಮಾತ್ರವೇ ಭಗವಂತ ಆಲಯಗಳಲ್ಲಿ ನೆಲೆಸಲು ಸಾಧ್ಯ. ಧರ್ಮಗಳ ಒಳಗೆ ಸಂಘರ್ಷ, ಸಮಾಜದಲ್ಲಿ ಸಂಘರ್ಷ ಇದ್ದಾಗ ಯಾವತ್ತೂ ಶಾಂತಿ ಇರಲು ಸಾಧ್ಯವಿಲ್ಲ. ಶಾಂತಿ ಇಲ್ಲದ ಕಡೆಗಳಲ್ಲಿ  ಭಗವಂತ ನೆಲೆಸಲು ಸಾಧ್ಯವಿಲ್ಲ ಎಂದು  ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್‌ ರೆ.ಫಾ.ಡಾ. ಲಾರೆನ್ಸ್‌ ಎಂ ಟಿ ಹೇಳಿದರು.

ಅವರು ಗುತ್ತಿಗಾರಿನ ಸಂತ ಮೆರೀಸ್‌ ಚರ್ಚ್‌ ನ ಸಭಾಭವನದಲ್ಲಿ ಭಾನುವಾರ ಸಂಜೆ ನಡೆದ ಸೌಹಾರ್ದ ಕೂಟದಲ್ಲಿ ಮಾತನಾಡಿದರು. ವಿವಿಧ ಗಣ್ಯರು ಈ ಸೌಹಾರ್ದ ಸಭೆಯಲ್ಲಿ ಭಾಗವಹಿಸಿದ್ದರು. ಸಮಾಜದಲ್ಲಿ ಸಾಮರಸ್ಯ  ಮತ್ತು ಐಕ್ಯತೆ ಮೂಡಿಸುವ ಹಾಗೂ ಬೆಳೆಸುವ ನಿಟ್ಟಿನಲ್ಲಿ  ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಭೆಯಲ್ಲಿ ಗಣ್ಯರು ಮಾತನಾಡಿ, ಕ್ರೈಸ್ತ ಸಮುದಾಯದ ಕೊಡುಗೆ ಹಾಗೂ ಸಮಾಜದಲ್ಲಿ ಕ್ರೈಸ್ತರು ಬೆಸೆದುಕೊಂಡಿರುವ ರೀತಿಯ ಬಗ್ಗೆ ಹೇಳಿದರು.

ಬಳಿಕ ಮಾತನಾಡಿದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್‌ ರೆ.ಫಾ.ಡಾ. ಲಾರೆನ್ಸ್‌ ಎಂ ಟಿ, ಶಾಂತಿ, ಸೌಹಾದರ್ತೆ ನೆಲೆಯಾದರೆ ಮಾತ್ರವೇ ಸಮಾಜದಲ್ಲಿ ಉತ್ತಮ ಬಾಂಧವ್ಯ ಬೆಳೆಯಲು ಸಾಧ್ಯವಿದೆ. ಯಾವುದೇ ಕಾರಣಕ್ಕೂ ಅಶಾಂತಿಗಳು ಸೃಷ್ಟಿಯಾಗಬಾರದು. ಭಗವಂತನೂ ಕೂಡಾ ಇದೇ ವಾತಾವರಣವನ್ನು ಬಯಸುತ್ತಾರೆ. ಎಲ್ಲಾ ಧರ್ಮಗಳಲ್ಲೂ ಕೆಲವೊಮ್ಮೆ ಅಚಾತುರ್ಯಗಳು,  ತಪ್ಪುಗಳಾಗಬಹುದು. ಅದನ್ನು ತಕ್ಷಣವೇ ಸರಿಪಡಿಸಿಕೊಳ್ಳುವ ನೇತೃತ್ವವನ್ನು ಧರ್ಮಗುರುಗಳು ವಹಿಸಿಕೊಳ್ಳಬೇಕು ಎಂದರು.

ಸಭೆಯಲ್ಲಿ ಗುತ್ತಿಗಾರು ಸಂತ ಮೆರೀಸ್‌ ಚರ್ಚ್‌‌ ಧರ್ಮಗುರು ಫಾ.ಆದರ್ಶ್‌ ಜೋಸೆಫ್‌, ಗುತ್ತಿಗಾರು ಮಸೀದಿಯ ಉಸ್ತಾದ್‌ ಅಬ್ದುಲ್‌ ನಝರ್‌, ಮುಖಂಡರಾದ ಭರತ್‌ ಮುಂಡೋಡಿ, ಪಿ ಸಿ ಜಯರಾಮ, ವೆಂಕಟ್‌ ದಂಬೆಕೋಡಿ, ಡಾ.ಯು ಪಿ ಶಿವಾನಂದ,  ವೆಂಕಟ್‌ ವಳಲಂಬೆ, ಲಕ್ಷ್ಮೀಶ ಗಬ್ಲಡ್ಕ, ಅಬ್ಬಾಸ್‌ ವಳಲಂಬೆ, ಪ್ರವೀಣ್‌ ಮುಂಡೋಡಿ, ಮಹೇಶ್‌ ಪುಚ್ಚಪ್ಪಾಡಿ ಹಾಗೂ ಚರ್ಚ್‌  ಆಡಳಿತ ಸಮಿತಿ ಪದಾಧಿಕಾರಿಗಳು ಭಾಗವಹಿಸಿದ್ದರು.

ಬಿಟ್ಟಿ ನೆಡುನೀಲಂ ಸ್ವಾಗತಿಸಿ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

9 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

9 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

1 day ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

2 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago