Advertisement
ಸುದ್ದಿಗಳು

ಗುತ್ತಿಗಾರು ಚರ್ಚ್‌ನಲ್ಲಿ ಸೌಹಾರ್ದ ಕೂಟ | ಸ್ನೇಹಮಯ ವಾತಾವರಣದಿಂದಲೇ ಭಗವಂತ ನೆಲೆಯಾಗಲು ಸಾಧ್ಯ |

Share

ಸಮಾಜದಲ್ಲಿ ಸ್ನೇಹಮಯ ವಾತಾವರಣ ಇದ್ದಾಗ ಮಾತ್ರವೇ ಭಗವಂತ ಆಲಯಗಳಲ್ಲಿ ನೆಲೆಸಲು ಸಾಧ್ಯ. ಧರ್ಮಗಳ ಒಳಗೆ ಸಂಘರ್ಷ, ಸಮಾಜದಲ್ಲಿ ಸಂಘರ್ಷ ಇದ್ದಾಗ ಯಾವತ್ತೂ ಶಾಂತಿ ಇರಲು ಸಾಧ್ಯವಿಲ್ಲ. ಶಾಂತಿ ಇಲ್ಲದ ಕಡೆಗಳಲ್ಲಿ  ಭಗವಂತ ನೆಲೆಸಲು ಸಾಧ್ಯವಿಲ್ಲ ಎಂದು  ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್‌ ರೆ.ಫಾ.ಡಾ. ಲಾರೆನ್ಸ್‌ ಎಂ ಟಿ ಹೇಳಿದರು.

ಅವರು ಗುತ್ತಿಗಾರಿನ ಸಂತ ಮೆರೀಸ್‌ ಚರ್ಚ್‌ ನ ಸಭಾಭವನದಲ್ಲಿ ಭಾನುವಾರ ಸಂಜೆ ನಡೆದ ಸೌಹಾರ್ದ ಕೂಟದಲ್ಲಿ ಮಾತನಾಡಿದರು. ವಿವಿಧ ಗಣ್ಯರು ಈ ಸೌಹಾರ್ದ ಸಭೆಯಲ್ಲಿ ಭಾಗವಹಿಸಿದ್ದರು. ಸಮಾಜದಲ್ಲಿ ಸಾಮರಸ್ಯ  ಮತ್ತು ಐಕ್ಯತೆ ಮೂಡಿಸುವ ಹಾಗೂ ಬೆಳೆಸುವ ನಿಟ್ಟಿನಲ್ಲಿ  ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಭೆಯಲ್ಲಿ ಗಣ್ಯರು ಮಾತನಾಡಿ, ಕ್ರೈಸ್ತ ಸಮುದಾಯದ ಕೊಡುಗೆ ಹಾಗೂ ಸಮಾಜದಲ್ಲಿ ಕ್ರೈಸ್ತರು ಬೆಸೆದುಕೊಂಡಿರುವ ರೀತಿಯ ಬಗ್ಗೆ ಹೇಳಿದರು.

ಬಳಿಕ ಮಾತನಾಡಿದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್‌ ರೆ.ಫಾ.ಡಾ. ಲಾರೆನ್ಸ್‌ ಎಂ ಟಿ, ಶಾಂತಿ, ಸೌಹಾದರ್ತೆ ನೆಲೆಯಾದರೆ ಮಾತ್ರವೇ ಸಮಾಜದಲ್ಲಿ ಉತ್ತಮ ಬಾಂಧವ್ಯ ಬೆಳೆಯಲು ಸಾಧ್ಯವಿದೆ. ಯಾವುದೇ ಕಾರಣಕ್ಕೂ ಅಶಾಂತಿಗಳು ಸೃಷ್ಟಿಯಾಗಬಾರದು. ಭಗವಂತನೂ ಕೂಡಾ ಇದೇ ವಾತಾವರಣವನ್ನು ಬಯಸುತ್ತಾರೆ. ಎಲ್ಲಾ ಧರ್ಮಗಳಲ್ಲೂ ಕೆಲವೊಮ್ಮೆ ಅಚಾತುರ್ಯಗಳು,  ತಪ್ಪುಗಳಾಗಬಹುದು. ಅದನ್ನು ತಕ್ಷಣವೇ ಸರಿಪಡಿಸಿಕೊಳ್ಳುವ ನೇತೃತ್ವವನ್ನು ಧರ್ಮಗುರುಗಳು ವಹಿಸಿಕೊಳ್ಳಬೇಕು ಎಂದರು.

ಸಭೆಯಲ್ಲಿ ಗುತ್ತಿಗಾರು ಸಂತ ಮೆರೀಸ್‌ ಚರ್ಚ್‌‌ ಧರ್ಮಗುರು ಫಾ.ಆದರ್ಶ್‌ ಜೋಸೆಫ್‌, ಗುತ್ತಿಗಾರು ಮಸೀದಿಯ ಉಸ್ತಾದ್‌ ಅಬ್ದುಲ್‌ ನಝರ್‌, ಮುಖಂಡರಾದ ಭರತ್‌ ಮುಂಡೋಡಿ, ಪಿ ಸಿ ಜಯರಾಮ, ವೆಂಕಟ್‌ ದಂಬೆಕೋಡಿ, ಡಾ.ಯು ಪಿ ಶಿವಾನಂದ,  ವೆಂಕಟ್‌ ವಳಲಂಬೆ, ಲಕ್ಷ್ಮೀಶ ಗಬ್ಲಡ್ಕ, ಅಬ್ಬಾಸ್‌ ವಳಲಂಬೆ, ಪ್ರವೀಣ್‌ ಮುಂಡೋಡಿ, ಮಹೇಶ್‌ ಪುಚ್ಚಪ್ಪಾಡಿ ಹಾಗೂ ಚರ್ಚ್‌  ಆಡಳಿತ ಸಮಿತಿ ಪದಾಧಿಕಾರಿಗಳು ಭಾಗವಹಿಸಿದ್ದರು.

ಬಿಟ್ಟಿ ನೆಡುನೀಲಂ ಸ್ವಾಗತಿಸಿ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ

ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…

32 minutes ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

1 hour ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

4 hours ago

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

6 hours ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

10 hours ago