Advertisement
MIRROR FOCUS

ಗುತ್ತಿಗಾರು | ರಸ್ತೆ ಬದಿ ಕಸ ಎಸೆದವರಿಗೆ ದಂಡ ವಿಧಿಸಿದ ಪಂಚಾಯತ್‌ | ಎಚ್ಚರಿಕೆ ಇನ್ನು ಮುಂದೆ ಗುತ್ತಿಗಾರು ಆಸುಪಾಸಿನಲ್ಲಿ ರಸ್ತೆ ಬದಿ ಕಸ ಎಸೆದರೆ ದಂಡ ಬೀಳುತ್ತೆ…! |

Share

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕಳೆದ ಕೆಲವು ಸಮಯಗಳಿಂದ ಪ್ರತೀ ವಾರ ಸ್ವಚ್ಛತಾ ಅಭಿಯಾನ ನಡೆಯುತ್ತಿದೆ. ಸ್ವಚ್ಛತೆಗಾಗಿ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತೀ ವಾರ ಅಭಿಯಾನ ನಡೆಯುತ್ತದೆ. ಹಾಗಿದ್ದರೂ ರಸ್ತೆ ಬದಿ ಕಸ ಎಸೆಯುವುದು ಕಡಿಮೆಯಾಗಿರಲಿಲ್ಲ. ಇದೀಗ ರಸ್ತೆ ಬದಿ ಕಸ ಎಸೆದ ಪ್ರಕರಣವೊಂದರಲ್ಲಿ ಪತ್ತೆ ಮಾಡಿ ಗುತ್ತಿಗಾರು ಗ್ರಾಪಂ ದಂಡ ವಿಧಿಸಿದೆ. …….ಮುಂದೆ ಓದಿ…..

Advertisement
Advertisement

ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ರಸ್ತೆ ಬದಿ ಕಸ ಎಸೆಯದಂತೆ  ಕಳೆದ ಹಲವು ಸಮಯಗಳಿಂದ ಜಾಗೃತಿ ಮೂಡಿಸಲಾಗುತ್ತಿದೆ. ದಯವಿಟ್ಟು ರಸ್ತೆ ಬದಿ, ಕಾಡಿನ ಅಂಚಿನಲ್ಲಿ ಕಸ ಎಸೆಯಬೇಡಿ ಎಂದು ಪದೇಪದೇ ಮನವಿ ಮಾಡಲಾಗುತ್ತಿತ್ತು. ಹಾಗಿದ್ದರೂ ಕಸ ಎಸೆಯುವ ಪ್ರವೃತ್ತಿ ಕಡಿಮೆಯಾಗಿರಲಿಲ್ಲ.ಎರಡು ದಿನದ ಹಿಂದೆ ಗುತ್ತಿಗಾರು-ಬಳ್ಪ ರಸ್ತೆಯ ಚತ್ರಪ್ಪಾಡಿ ಬಳಿ ವಾಹನದಲ್ಲಿ ತಂದು ಕಸ ಸುರಿಯಲಾಗಿತ್ತು. ಹೀಗೆ ಕಸ ಸುರಿದರನ್ನು ಪತ್ತೆ ಮಾಡಿ ಗ್ರಾ ಪಂ ಆಡಳಿತವು 1000 ರೂಪಾಯಿ ದಂಡ ವಿಧಿಸಿದೆ ಹಾಗೂ ಕಸ ಎಸೆದವರಿಂದಲೇ ಕಸ ಹೆಕ್ಕಿಸಿದೆ.

ರಸ್ತೆ ಬದಿ ಎಸೆದಿರುವ ತ್ಯಾಜ್ಯ
ದಂಡ ವಿಧಿಸಿರುವುದು

ಗುತ್ತಿಗಾರಿನ ವಿವಿದೆಡೆ ಈಗಲೂ ಕಸ ಎಸೆಯಲಾಗುತ್ತಿದೆ.ಹೀಗೆ ಕಸ ಎಸೆದವರ ಬಗ್ಗೆ  ಗ್ರಾಮ ಪಂಚಾಯತ್‌ ಗೆ ಸಾರ್ವಜನಿಕರೂ ಮಾಹಿತಿ ಹಾಗೂ ಫೋಟೊ ಸಹಿತ ದಾಖಲೆ ನೀಡಿ ದಂಡ ವಿಧಿಸಲು ಒತ್ತಾಯ ಮಾಡುವುದು ಹಾಗೂ ಕಸವನ್ನು ಹಾಕಿದವರಿಂದಲೇ ತೆಗೆಯುವಂತೆ ಒತ್ತಾಯ ಮಾಡಬಹುದಾಗಿದೆ.

ಬಳ್ಪ ಕಾಡಿನಲ್ಲಿ ಎಸೆದಿರುವ ತ್ಯಾಜ್ಯ

ಗುತ್ತಿಗಾರು-ಬಳ್ಪ ರಸ್ತೆಯ ನಡುವೆ ಕಾಡಿನ ನಡುವೆ ಸಾಕಷ್ಟು ಪ್ರಮಾಣದಲ್ಲಿ ಕಸ, ಕೋಳಿತ್ಯಾಜ್ಯ ಸೇರಿದಂತೆ ಇತರ ವಸ್ತುಗಳನ್ನು ಕಾಡಿನಲ್ಲಿ ಎಸೆಯುವ ಬಗ್ಗೆ ಈಗಾಗಲೇ ಮಾಹಿತಿ ಬಂದಿದ್ದು, ಈ ಬಗ್ಗೆಯೂ ಕಾರ್ಯಾಚರಣೆ ನಡೆಸಿ ಕಸ ಎಸೆಯುವವರ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗುವುದು ಎಂದು ಸಾರ್ವಜನಿಕರು ಹೇಳಿದ್ದಾರೆ. ಅಲ್ಲದೆ ಗ್ರಾಪಂ ಕೂಡಾ ಕಾಡಿನಲ್ಲಿ ಕಸ ಎಸೆಯುವವರ ವಿರುದ್ಧ ಸ್ವಯಂ ಪ್ರೇರಿತವಾಗಿ ಕ್ರಮ ಕೈಗೊಳ್ಳಬೇಕಿದೆ. ಬಳ್ಪ ಕಾಡಿನ ರಸ್ತೆ ಬದಿ ಎಸೆಯುವ ಕಸವು ಹರಿಯುವ ಹೊಳೆಗೆ ಸೇರುತ್ತಿದೆ.ಈ ನೀರನ್ನೇ ಹಲವು ಮಂದಿ ಕುಡಿಯುವುದಕ್ಕೆ ಕೂಡಾ ಬಳಕೆ ಮಾಡುತ್ತಿದ್ದರು. ಹೀಗಾಗಿ ಕಾಡು ಮಾತ್ರವಲ್ಲ, ನದಿಯೂ ಮಲಿನವಾಗುತ್ತಿದೆ ಎಂದು ಪರಿಸರ ಪ್ರೇಮಿಗಳು ಹೇಳಿದ್ದಾರೆ.

ಕಳೆದ ವಾರ ಬಳ್ಪ ಕಾಡಿನಲ್ಲಿ ಕಸ ಎಸೆಯುವುದರ ಬಗ್ಗೆ ಗುತ್ತಿಗಾರು ಗ್ರಾಮ ಪಂಚಾಯತ್‌ ಆಡಳಿತ ಖುದ್ದು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ನಿಗಾ ನಿಗಾವಹಿಸಿದೆ.

Guthigar Gram Panchayat has fined those who threw garbage on the roadside. Cleanliness campaign is also going on in Guthigar Gram Panchayat for some time now.

ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

14 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago