Advertisement
MIRROR FOCUS

ಗುತ್ತಿಗಾರು | ರಸ್ತೆ ಬದಿ ಕಸ ಎಸೆದವರಿಗೆ ದಂಡ ವಿಧಿಸಿದ ಪಂಚಾಯತ್‌ | ಎಚ್ಚರಿಕೆ ಇನ್ನು ಮುಂದೆ ಗುತ್ತಿಗಾರು ಆಸುಪಾಸಿನಲ್ಲಿ ರಸ್ತೆ ಬದಿ ಕಸ ಎಸೆದರೆ ದಂಡ ಬೀಳುತ್ತೆ…! |

Share

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕಳೆದ ಕೆಲವು ಸಮಯಗಳಿಂದ ಪ್ರತೀ ವಾರ ಸ್ವಚ್ಛತಾ ಅಭಿಯಾನ ನಡೆಯುತ್ತಿದೆ. ಸ್ವಚ್ಛತೆಗಾಗಿ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತೀ ವಾರ ಅಭಿಯಾನ ನಡೆಯುತ್ತದೆ. ಹಾಗಿದ್ದರೂ ರಸ್ತೆ ಬದಿ ಕಸ ಎಸೆಯುವುದು ಕಡಿಮೆಯಾಗಿರಲಿಲ್ಲ. ಇದೀಗ ರಸ್ತೆ ಬದಿ ಕಸ ಎಸೆದ ಪ್ರಕರಣವೊಂದರಲ್ಲಿ ಪತ್ತೆ ಮಾಡಿ ಗುತ್ತಿಗಾರು ಗ್ರಾಪಂ ದಂಡ ವಿಧಿಸಿದೆ. …….ಮುಂದೆ ಓದಿ…..

ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ರಸ್ತೆ ಬದಿ ಕಸ ಎಸೆಯದಂತೆ  ಕಳೆದ ಹಲವು ಸಮಯಗಳಿಂದ ಜಾಗೃತಿ ಮೂಡಿಸಲಾಗುತ್ತಿದೆ. ದಯವಿಟ್ಟು ರಸ್ತೆ ಬದಿ, ಕಾಡಿನ ಅಂಚಿನಲ್ಲಿ ಕಸ ಎಸೆಯಬೇಡಿ ಎಂದು ಪದೇಪದೇ ಮನವಿ ಮಾಡಲಾಗುತ್ತಿತ್ತು. ಹಾಗಿದ್ದರೂ ಕಸ ಎಸೆಯುವ ಪ್ರವೃತ್ತಿ ಕಡಿಮೆಯಾಗಿರಲಿಲ್ಲ.ಎರಡು ದಿನದ ಹಿಂದೆ ಗುತ್ತಿಗಾರು-ಬಳ್ಪ ರಸ್ತೆಯ ಚತ್ರಪ್ಪಾಡಿ ಬಳಿ ವಾಹನದಲ್ಲಿ ತಂದು ಕಸ ಸುರಿಯಲಾಗಿತ್ತು. ಹೀಗೆ ಕಸ ಸುರಿದರನ್ನು ಪತ್ತೆ ಮಾಡಿ ಗ್ರಾ ಪಂ ಆಡಳಿತವು 1000 ರೂಪಾಯಿ ದಂಡ ವಿಧಿಸಿದೆ ಹಾಗೂ ಕಸ ಎಸೆದವರಿಂದಲೇ ಕಸ ಹೆಕ್ಕಿಸಿದೆ.

ರಸ್ತೆ ಬದಿ ಎಸೆದಿರುವ ತ್ಯಾಜ್ಯ
ದಂಡ ವಿಧಿಸಿರುವುದು

ಗುತ್ತಿಗಾರಿನ ವಿವಿದೆಡೆ ಈಗಲೂ ಕಸ ಎಸೆಯಲಾಗುತ್ತಿದೆ.ಹೀಗೆ ಕಸ ಎಸೆದವರ ಬಗ್ಗೆ  ಗ್ರಾಮ ಪಂಚಾಯತ್‌ ಗೆ ಸಾರ್ವಜನಿಕರೂ ಮಾಹಿತಿ ಹಾಗೂ ಫೋಟೊ ಸಹಿತ ದಾಖಲೆ ನೀಡಿ ದಂಡ ವಿಧಿಸಲು ಒತ್ತಾಯ ಮಾಡುವುದು ಹಾಗೂ ಕಸವನ್ನು ಹಾಕಿದವರಿಂದಲೇ ತೆಗೆಯುವಂತೆ ಒತ್ತಾಯ ಮಾಡಬಹುದಾಗಿದೆ.

ಬಳ್ಪ ಕಾಡಿನಲ್ಲಿ ಎಸೆದಿರುವ ತ್ಯಾಜ್ಯ

ಗುತ್ತಿಗಾರು-ಬಳ್ಪ ರಸ್ತೆಯ ನಡುವೆ ಕಾಡಿನ ನಡುವೆ ಸಾಕಷ್ಟು ಪ್ರಮಾಣದಲ್ಲಿ ಕಸ, ಕೋಳಿತ್ಯಾಜ್ಯ ಸೇರಿದಂತೆ ಇತರ ವಸ್ತುಗಳನ್ನು ಕಾಡಿನಲ್ಲಿ ಎಸೆಯುವ ಬಗ್ಗೆ ಈಗಾಗಲೇ ಮಾಹಿತಿ ಬಂದಿದ್ದು, ಈ ಬಗ್ಗೆಯೂ ಕಾರ್ಯಾಚರಣೆ ನಡೆಸಿ ಕಸ ಎಸೆಯುವವರ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗುವುದು ಎಂದು ಸಾರ್ವಜನಿಕರು ಹೇಳಿದ್ದಾರೆ. ಅಲ್ಲದೆ ಗ್ರಾಪಂ ಕೂಡಾ ಕಾಡಿನಲ್ಲಿ ಕಸ ಎಸೆಯುವವರ ವಿರುದ್ಧ ಸ್ವಯಂ ಪ್ರೇರಿತವಾಗಿ ಕ್ರಮ ಕೈಗೊಳ್ಳಬೇಕಿದೆ. ಬಳ್ಪ ಕಾಡಿನ ರಸ್ತೆ ಬದಿ ಎಸೆಯುವ ಕಸವು ಹರಿಯುವ ಹೊಳೆಗೆ ಸೇರುತ್ತಿದೆ.ಈ ನೀರನ್ನೇ ಹಲವು ಮಂದಿ ಕುಡಿಯುವುದಕ್ಕೆ ಕೂಡಾ ಬಳಕೆ ಮಾಡುತ್ತಿದ್ದರು. ಹೀಗಾಗಿ ಕಾಡು ಮಾತ್ರವಲ್ಲ, ನದಿಯೂ ಮಲಿನವಾಗುತ್ತಿದೆ ಎಂದು ಪರಿಸರ ಪ್ರೇಮಿಗಳು ಹೇಳಿದ್ದಾರೆ.

ಕಳೆದ ವಾರ ಬಳ್ಪ ಕಾಡಿನಲ್ಲಿ ಕಸ ಎಸೆಯುವುದರ ಬಗ್ಗೆ ಗುತ್ತಿಗಾರು ಗ್ರಾಮ ಪಂಚಾಯತ್‌ ಆಡಳಿತ ಖುದ್ದು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ನಿಗಾ ನಿಗಾವಹಿಸಿದೆ.

Guthigar Gram Panchayat has fined those who threw garbage on the roadside. Cleanliness campaign is also going on in Guthigar Gram Panchayat for some time now.

ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

16 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

18 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

20 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

21 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago