Advertisement
ಸುದ್ದಿಗಳು

ಗುತ್ತಿಗಾರು ಸಹಕಾರಿ ಸಂಘದ ಮಹಾಸಭೆ | ಶೇ.7 ಡಿವಿಡೆಂಟ್ ಘೋಷಣೆ | 434 ಕೋಟಿ ರೂಪಾಯಿ ವ್ಯವಹಾರ | 1.42 ರೂಪಾಯಿ ಕೋಟಿ ಲಾಭ |

Share

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ (Guthigar PAC Bank) ಸಂಘದ ವಾರ್ಷಿಕ ಮಹಾಸಭೆಯು ಸಹಕಾರಿ  ಸಂಘದ ದೀನದಯಾಳ್ ಸಭಾಭವನದಲ್ಲಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಅಧ್ಯಕ್ಷತೆಯಲ್ಲಿ ನಡೆಯಿತು.

Advertisement
Advertisement

ಸುಳ್ಯ ತಾಲೂಕಿನ ಪ್ರತಿಷ್ಟಿತ ಸಹಕಾರಿ ಸಂಘಗಳಲ್ಲಿ ಒಂದಾಗಿರುವ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ಶನಿವಾರ ನಡೆಯಿತು.  ಪ್ರಸಕ್ತ ಸಾಲಿನಲ್ಲಿ ಸಂಘವು 434 ಕೋಟಿ ರೂಪಾಯಿ ವ್ಯವಹಾರ ನಡೆಸಿ ‍ 1.42 ಕೋಟಿ ರೂಪಾಯಿ ಲಾಭಾಂಶ ಪಡೆದಿದೆ. ಸದಸ್ಯರಿಗೆ ಶೇ.7 ಡಿವಿಡೆಂಟ್ ಘೋಷಿಸಲಾಯಿತು.

Advertisement

ಈ ಸಂದರ್ಭ ಕ್ಯಾಂಪ್ಕೋ ಗೆ ಅತಿ ಹೆಚ್ಚು ಅಡಿಕೆ ಮಾರಾಟ ಮಾಡಿದ ರತ್ನ ಎಂ ಮುಂಡೋಡಿ, ಕೊಕ್ಕೋ ಮಾರಾಟ ಮಾಡಿದ ವಿಭಾಗದಲ್ಲಿ ನಾಗಪ್ಪ ಗೌಡ, ತಿರುಮಲೇಶ್ವರ್ ಭಟ್ ಚಣಿಲ, ಕಮಲಾಕ್ಷ ಸಂಪ್ಯಾಡಿ, ಅತೀ ಹೆಚ್ಚು ರಸಗೊಬ್ಬರ ಖರೀದಿಗಾಗಿ ಮುಳಿಯ ಕೇಶವ ಭಟ್, ದಯಾನಂದ ಮುತ್ಲಾಜೆ , ಪೆಟ್ರೋಲ್ ಮತ್ತು ಡೀಸೆಲ್ ಖರೀದಿಗಾಗಿ ಸೌರಭ ಟ್ರಾವೆಲ್ಸ್ ನ ಕುಮಾರ್, ಶ್ರೇಯಸ್ ಎಂ ಡಿ ಹೆಚ್ಚು ದಿನಸಿ ಖರೀದಿಗಾಗಿ ಶಿವಪ್ರಕಾಶ್ ಕಡಪಳ, ಪದ್ಮನಾಭ ಕಾಜಿಮಡ್ಕ ದಯಾನಂದ ಮುತ್ತಾಜೆ, ಅತೀ ಹೆಚ್ಚು ದಿನಸಿ ಖರೀದಿ ಮಾಡಿದ ಸಂಸ್ಥೆಯ ಸಲುವಾಗಿ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪರವಾಗಿ ವ್ಯವಸ್ಥಾಪನ ಸಮಿತಿ ಸದಸ್ಯ ಚಂದ್ರಶೇಖರ ಬಾಳುಗೋಡು, ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವಳಲಂಬೆ ಪರವಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮಣ್ಣಗೌಡ ಮತ್ತು ಲಿಂಗಪ್ಪ ಕಾಜಿಮಡ್ಕ ಅವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಕಿಶೋರ್ ಕುಮಾರ್ ಅಂಬೆಕಲ್ಲು, ನಿರ್ದೇಶಕರುಗಳಾದ ಬೆಳ್ಯಪ್ಪ ಗೌಡ, ಎ.ವಿ ತೀರ್ಥರಾಮ, ಕೇಶವ ಭಟ್ ಮುಳಿಯ, ಮಂಜುಳಾ ಮುತ್ಲಾಜೆ, ರವಿಪ್ರಕಾಶ್ ಬಳ್ಳಕ್ಕ ,ಕೃಷ್ಣಯ್ಯ ಮೂಲೆತೋಟ, ಜಯಪ್ರಕಾಶ್ ಮೊಗ್ರ, ನವೀನ್ ಬಾಳುಗೋಡು,  ಚಂದ್ರಾವತಿ ಮುಂಡೋಡಿ, ಕುಂಞ ಬಳ್ಳಕ್ಕ, ಆನಂದ ಹಲಸಿನಡ್ಕ ಉಪಸ್ಥಿತರಿದ್ದರು.

Advertisement
ವೆಂಕಟ್ ದಂಬೆಕೋಡಿ ಸ್ವಾಗತಿಸಿ ಶರತ್ ಎ.ಕೆ ವಂದಿಸಿದರು. ಕಿಶೋರ್ ಕುಮಾರ್ ಪೈಕ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಎ ಕೆ ವರದಿ ವಾಚಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಎ.ವಿ ತೀರ್ಥರಾಮ, ಕೇಂದ್ರ ರಬ್ಬರ್ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಮುಳಿಯ ಕೇಶವ ಭಟ್, ಅವರನ್ನು ಸನ್ಮಾನಿಸಲಾಯಿತು. ಇತ್ತೀಚೆಗೆ ನಿವೃತ್ತರಾದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಹೂವಯ್ಯ ಗೌಡ ಸಂಪ್ಯಾಡಿ ಮತ್ತು ಜಯಂತಿ ದಂಪತಿಗಳನ್ನು ಗೌರವಿಸಲಾಯಿತು.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

14 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

14 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

14 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

15 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

15 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

15 hours ago