Advertisement
ಸುದ್ದಿಗಳು

ಗುತ್ತಿಗಾರು ಸಹಕಾರಿ ಸಂಘದ ಮಹಾಸಭೆ | ಶೇ.7 ಡಿವಿಡೆಂಟ್ ಘೋಷಣೆ | 434 ಕೋಟಿ ರೂಪಾಯಿ ವ್ಯವಹಾರ | 1.42 ರೂಪಾಯಿ ಕೋಟಿ ಲಾಭ |

Share

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ (Guthigar PAC Bank) ಸಂಘದ ವಾರ್ಷಿಕ ಮಹಾಸಭೆಯು ಸಹಕಾರಿ  ಸಂಘದ ದೀನದಯಾಳ್ ಸಭಾಭವನದಲ್ಲಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಅಧ್ಯಕ್ಷತೆಯಲ್ಲಿ ನಡೆಯಿತು.

ಸುಳ್ಯ ತಾಲೂಕಿನ ಪ್ರತಿಷ್ಟಿತ ಸಹಕಾರಿ ಸಂಘಗಳಲ್ಲಿ ಒಂದಾಗಿರುವ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ಶನಿವಾರ ನಡೆಯಿತು.  ಪ್ರಸಕ್ತ ಸಾಲಿನಲ್ಲಿ ಸಂಘವು 434 ಕೋಟಿ ರೂಪಾಯಿ ವ್ಯವಹಾರ ನಡೆಸಿ ‍ 1.42 ಕೋಟಿ ರೂಪಾಯಿ ಲಾಭಾಂಶ ಪಡೆದಿದೆ. ಸದಸ್ಯರಿಗೆ ಶೇ.7 ಡಿವಿಡೆಂಟ್ ಘೋಷಿಸಲಾಯಿತು.

ಈ ಸಂದರ್ಭ ಕ್ಯಾಂಪ್ಕೋ ಗೆ ಅತಿ ಹೆಚ್ಚು ಅಡಿಕೆ ಮಾರಾಟ ಮಾಡಿದ ರತ್ನ ಎಂ ಮುಂಡೋಡಿ, ಕೊಕ್ಕೋ ಮಾರಾಟ ಮಾಡಿದ ವಿಭಾಗದಲ್ಲಿ ನಾಗಪ್ಪ ಗೌಡ, ತಿರುಮಲೇಶ್ವರ್ ಭಟ್ ಚಣಿಲ, ಕಮಲಾಕ್ಷ ಸಂಪ್ಯಾಡಿ, ಅತೀ ಹೆಚ್ಚು ರಸಗೊಬ್ಬರ ಖರೀದಿಗಾಗಿ ಮುಳಿಯ ಕೇಶವ ಭಟ್, ದಯಾನಂದ ಮುತ್ಲಾಜೆ , ಪೆಟ್ರೋಲ್ ಮತ್ತು ಡೀಸೆಲ್ ಖರೀದಿಗಾಗಿ ಸೌರಭ ಟ್ರಾವೆಲ್ಸ್ ನ ಕುಮಾರ್, ಶ್ರೇಯಸ್ ಎಂ ಡಿ ಹೆಚ್ಚು ದಿನಸಿ ಖರೀದಿಗಾಗಿ ಶಿವಪ್ರಕಾಶ್ ಕಡಪಳ, ಪದ್ಮನಾಭ ಕಾಜಿಮಡ್ಕ ದಯಾನಂದ ಮುತ್ತಾಜೆ, ಅತೀ ಹೆಚ್ಚು ದಿನಸಿ ಖರೀದಿ ಮಾಡಿದ ಸಂಸ್ಥೆಯ ಸಲುವಾಗಿ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪರವಾಗಿ ವ್ಯವಸ್ಥಾಪನ ಸಮಿತಿ ಸದಸ್ಯ ಚಂದ್ರಶೇಖರ ಬಾಳುಗೋಡು, ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವಳಲಂಬೆ ಪರವಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮಣ್ಣಗೌಡ ಮತ್ತು ಲಿಂಗಪ್ಪ ಕಾಜಿಮಡ್ಕ ಅವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಕಿಶೋರ್ ಕುಮಾರ್ ಅಂಬೆಕಲ್ಲು, ನಿರ್ದೇಶಕರುಗಳಾದ ಬೆಳ್ಯಪ್ಪ ಗೌಡ, ಎ.ವಿ ತೀರ್ಥರಾಮ, ಕೇಶವ ಭಟ್ ಮುಳಿಯ, ಮಂಜುಳಾ ಮುತ್ಲಾಜೆ, ರವಿಪ್ರಕಾಶ್ ಬಳ್ಳಕ್ಕ ,ಕೃಷ್ಣಯ್ಯ ಮೂಲೆತೋಟ, ಜಯಪ್ರಕಾಶ್ ಮೊಗ್ರ, ನವೀನ್ ಬಾಳುಗೋಡು,  ಚಂದ್ರಾವತಿ ಮುಂಡೋಡಿ, ಕುಂಞ ಬಳ್ಳಕ್ಕ, ಆನಂದ ಹಲಸಿನಡ್ಕ ಉಪಸ್ಥಿತರಿದ್ದರು.

ವೆಂಕಟ್ ದಂಬೆಕೋಡಿ ಸ್ವಾಗತಿಸಿ ಶರತ್ ಎ.ಕೆ ವಂದಿಸಿದರು. ಕಿಶೋರ್ ಕುಮಾರ್ ಪೈಕ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಎ ಕೆ ವರದಿ ವಾಚಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಎ.ವಿ ತೀರ್ಥರಾಮ, ಕೇಂದ್ರ ರಬ್ಬರ್ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಮುಳಿಯ ಕೇಶವ ಭಟ್, ಅವರನ್ನು ಸನ್ಮಾನಿಸಲಾಯಿತು. ಇತ್ತೀಚೆಗೆ ನಿವೃತ್ತರಾದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಹೂವಯ್ಯ ಗೌಡ ಸಂಪ್ಯಾಡಿ ಮತ್ತು ಜಯಂತಿ ದಂಪತಿಗಳನ್ನು ಗೌರವಿಸಲಾಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

6 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

6 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

11 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

11 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

21 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

22 hours ago