Advertisement
ಸುದ್ದಿಗಳು

ಗುತ್ತಿಗಾರು ಸಹಕಾರಿ ಸಂಘದಿಂದ ಮತ್ತೊಂದು ಮಾದರಿ ಹೆಜ್ಜೆ | ಇದು ಸುವರ್ಣ ಸಹಕಾರ ಮಾರ್ಟ್ |

Share

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮತ್ತೊಂದು ಮಾದರಿ ಹೆಜ್ಜೆ ಇರಿಸಿದೆ. ಈಗಾಗಲೇ ಪೆಟ್ರೋಲ್‌ ಪಂಪ್‌ ಮೂಲಕ ರಾಜ್ಯದಲ್ಲೇ ಗುರುತಿಸಿಕೊಂಡಿರುವ ಸಹಕಾರಿ ಸಂಘವು  ಈಗ ಸುವರ್ಣ ಸಹಕಾರ ಮಾರ್ಟ್ ಮೂಲಕ ದಿನಸಿ ವಸ್ತುಗಳನ್ನು ಸದಸ್ಯರು ಹಾಗೂ ಗ್ರಾಮದ ಜನರಿಗೆ ನೀಡಲು ಯೋಜನೆ ಹಾಕಿಕೊಂಡಿದ್ದು ಇದು ಮತ್ತೊಮ್ಮೆ ಗಮನ ಸೆಳೆದಿದೆ. ಕಡಿಮೆ ದರದಲ್ಲಿ  ಗುಣಮಟ್ಟದ ದಿನಸಿ ಹಾಗೂ ಗೃಹಬಳಕೆ ವಸ್ತುಗಳನ್ನು ನೀಡುವುದು  ಇದರ ಉದ್ದೇಶವಾಗಿದೆ.

Advertisement
Advertisement
Advertisement
Advertisement

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಅತ್ಯಂತ ಗುಣಮಟ್ಟದ ಸೇವೆಯನ್ನು ಸದಸ್ಯರಿಗೆ ನೀಡುತ್ತಿದೆ. ತನ್ನ ಸಂಘದ ಸದಸ್ಯರಿಗೆ ಸಾಲ ಸೌಲಭ್ಯದಿಂದ ತೊಡಗಿ ಎಲ್ಲಾ ರೀತಿಯಲ್ಲೂ ಗ್ರಾಮದ ಜನರಿಗೆ ಆರ್ಥಿಕ, ಸಾಮಾಜಿಕ ಭದ್ರತೆ ನೀಡುವುದು  ಸಹಕಾರಿ ಸಂಘದ ಮೂಲ ಉದ್ದೇಶವಾಗಿದೆ. ಇದೀಗ ಸಂಘದ ಅಧ್ಯಕ್ಷರಾಗಿ ವೆಂಕಟ್‌ ದಂಬೆಕೋಡಿ ಅವರು ಸಂಘವನ್ನು ಮುನ್ನಡೆಸುತ್ತಿದ್ದು ಈಗಾಗಲೇ ವಿವಿಧ ಸಾಮಾಜಿಕ ಕಾರ್ಯಗಳ ಮೂಲಕ ಸಂಘವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಈಗ ಸುವರ್ಣ ಸಹಕಾರ ಮಾರ್ಟ್ ಮೂಲಕ ದಿನಸಿ ವಸ್ತುಗಳನ್ನು ಸದಸ್ಯರಿಗೆ ಹಾಗೂ ಗ್ರಾಮದ ಜನರಿಗೆ ನೀಡಲು ಉತ್ಸಾಹದಿಂದ ಇಳಿದಿದೆ. ಇಲ್ಲಿ ಕೂಡಾ ಸದಸ್ಯರಿಗೆ ಸಾಲ ಸೌಲಭ್ಯ ಹಾಗೂ ವಿವಿಧ ಬಗೆಯ ಯೋಜನೆಗಳನ್ನು ಹಾಕಿಕೊಂಡಿದೆ.ಈ ಮೂಲಕ ಸಂಘದ ಸದಸ್ಯರಿಗೆ ಗುಣಮಟ್ಟದ ಸೇವೆ ನೀಡಲು ಬದ್ದವಾಗಿದೆ.

Advertisement

 

Advertisement

ನೂತನ ಸುವರ್ಣ ಸಹಕಾರ ಮಾರ್ಟ್ ನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿ,

ಸಹಕಾರಿ ಸಂಘಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಟಗಳು ನಡೆಯಬೇಕು. ಬೈಲಾಗನುಗುಣವಾಗಿ ನಡೆದುಕೊಳ್ಳದೇ ಸಂಘದ ಏಳಿಗೆಯ ಹಿತದೃಷ್ಟಿಯಿಂದ ಬೈಲಾವನ್ನು ಹೊರತುಪಡಿಸಿಯೂ ಕಾರ್ಯಪ್ರವೃತವಾಗುವ ನಿರ್ಧಾರಗಳನ್ನು‌ಅನುಸರಿಸುವುದು ಒಳಿತು ಎಂದು  ಅಭಿಪ್ರಾಯ ಪಟ್ಟರು.ರಾಜ್ಯದಲ್ಲಿ ಕರಾವಳಿ ಜಿಲ್ಲೆಗಳ ಸಹಕಾರಿ ಸಂಘಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತಿದ್ದು ಇತರ ಸಂಘಗಳಿಗೆ ಮಾದರಿಯಾಗಿ ಮುನ್ನಡೆಯುತ್ತಿವೆ ಎಂದರು.
ಶಾಸಕ ಎಸ್‌ ಅಂಗಾರ ಮಾತನಾಡಿ, ನಾವು ನಮ್ಮ ಸಂಸ್ಥೆ ಯ ಬಗ್ಗೆ ಹೆಚ್ಚು ನಿಗಾವಹಿಸಿ ಕಾರ್ಯ ಪ್ರವೃತರಾದಾಗ ಆ ಸಂಸ್ಥೆ ಹೆಚ್ಚು ಅಭಿವೃದ್ಧಿ ಹೊಂದಲು ಸಾಧ್ಯವಿದೆ. ಈ ರೀತಿ ಗುತ್ತಿಗಾರು ಸಹಕಾರಿ ಸಂಘದ ಪ್ರಮುಖರು ಯೋಚನೆ ಹೊಂದಿದ್ದ ರಿಂದಲೇ ಇಷ್ಟೊಂದು ಅಭಿವೃದ್ಧಿ ಹೊಂದಿದೆ ಎಂದರು.
ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಸದಸ್ಯರ ಹಿತದೃಷ್ಟಿಯಿಂದ ಹಮ್ಮಿಕೊಂಡಿರುವ ಈ  ಕಾರ್ಯಯೋಜನೆಯ ಸಾಧಕ-ಬಾಧಕಗಳಲ್ಲಿ ನಕಾರಾತ್ಮಕ ಚಿಂತನೆಗಳ ಬಿಟ್ಟು ತನ್ನೊಂದಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಸಂಘದ ಏಳಿಗೆಗೆ ಸಹಕರಿಸುವಂತೆ ಮನವಿ‌ ಮಾಡಿದರು.
ವೇದಿಕೆಯಲ್ಲಿ ತಾ.ಪಂ. ಸದಸ್ಯೆ ಯಶೋದಾ ಬಾಳೆಗುಡ್ಡೆ, ಸಂಘದ ಮಾಜಿ ಅಧ್ಯಕ್ಷರುಗಳಾದ ಭರತ್‌ ಮುಂಡೋಡಿ, ಮುಳಿಯ ತಿಮ್ಮಪ್ಪಯ್ಯ, ನಿವೃತ್ತ ವೃತ್ತ ನಿರೀಕ್ಷಕ ಎಂ ಡಿ ಸುಬ್ಬಣ್ಣ ಗೌಡ, ಕೃಷಿಕ ಚಂದ್ರಶೇಖರ, ಶ್ಯಾಂ ಗೊರಗೋಡಿ, ಸಂಘದ ಉಪಾಧ್ಯಕ್ಷ ಕಿಶೋರ್‌ ಕುಮಾರ್‌ ಅಂಬೆಕಲ್ಲು ಹಾಗೂ ನಿರ್ದೇಶಕರುಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್‌ ಎ ಕೆ ಮೊದಲಾದವರು
ಇದ್ದರು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…

20 hours ago

‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ

ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…

20 hours ago

ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |

15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…

20 hours ago

ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ

ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…

20 hours ago

ಅಡಿಕೆಯ ಹಳದಿ ಎಲೆ ರೋಗದ ಖಾಯಂ ನಿವಾರಣೆಗಾಗಿ ಯೋಜನೆ ಅನುಷ್ಟಾನಗೊಳ್ಳುತ್ತದೆ ಎಂಬ ಭರವಸೆ ಇರಲಿ

ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…

1 day ago

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…

1 day ago