ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮತ್ತೊಂದು ಮಾದರಿ ಹೆಜ್ಜೆ ಇರಿಸಿದೆ. ಈಗಾಗಲೇ ಪೆಟ್ರೋಲ್ ಪಂಪ್ ಮೂಲಕ ರಾಜ್ಯದಲ್ಲೇ ಗುರುತಿಸಿಕೊಂಡಿರುವ ಸಹಕಾರಿ ಸಂಘವು ಈಗ ಸುವರ್ಣ ಸಹಕಾರ ಮಾರ್ಟ್ ಮೂಲಕ ದಿನಸಿ ವಸ್ತುಗಳನ್ನು ಸದಸ್ಯರು ಹಾಗೂ ಗ್ರಾಮದ ಜನರಿಗೆ ನೀಡಲು ಯೋಜನೆ ಹಾಕಿಕೊಂಡಿದ್ದು ಇದು ಮತ್ತೊಮ್ಮೆ ಗಮನ ಸೆಳೆದಿದೆ. ಕಡಿಮೆ ದರದಲ್ಲಿ ಗುಣಮಟ್ಟದ ದಿನಸಿ ಹಾಗೂ ಗೃಹಬಳಕೆ ವಸ್ತುಗಳನ್ನು ನೀಡುವುದು ಇದರ ಉದ್ದೇಶವಾಗಿದೆ.
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಅತ್ಯಂತ ಗುಣಮಟ್ಟದ ಸೇವೆಯನ್ನು ಸದಸ್ಯರಿಗೆ ನೀಡುತ್ತಿದೆ. ತನ್ನ ಸಂಘದ ಸದಸ್ಯರಿಗೆ ಸಾಲ ಸೌಲಭ್ಯದಿಂದ ತೊಡಗಿ ಎಲ್ಲಾ ರೀತಿಯಲ್ಲೂ ಗ್ರಾಮದ ಜನರಿಗೆ ಆರ್ಥಿಕ, ಸಾಮಾಜಿಕ ಭದ್ರತೆ ನೀಡುವುದು ಸಹಕಾರಿ ಸಂಘದ ಮೂಲ ಉದ್ದೇಶವಾಗಿದೆ. ಇದೀಗ ಸಂಘದ ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ ಅವರು ಸಂಘವನ್ನು ಮುನ್ನಡೆಸುತ್ತಿದ್ದು ಈಗಾಗಲೇ ವಿವಿಧ ಸಾಮಾಜಿಕ ಕಾರ್ಯಗಳ ಮೂಲಕ ಸಂಘವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಈಗ ಸುವರ್ಣ ಸಹಕಾರ ಮಾರ್ಟ್ ಮೂಲಕ ದಿನಸಿ ವಸ್ತುಗಳನ್ನು ಸದಸ್ಯರಿಗೆ ಹಾಗೂ ಗ್ರಾಮದ ಜನರಿಗೆ ನೀಡಲು ಉತ್ಸಾಹದಿಂದ ಇಳಿದಿದೆ. ಇಲ್ಲಿ ಕೂಡಾ ಸದಸ್ಯರಿಗೆ ಸಾಲ ಸೌಲಭ್ಯ ಹಾಗೂ ವಿವಿಧ ಬಗೆಯ ಯೋಜನೆಗಳನ್ನು ಹಾಕಿಕೊಂಡಿದೆ.ಈ ಮೂಲಕ ಸಂಘದ ಸದಸ್ಯರಿಗೆ ಗುಣಮಟ್ಟದ ಸೇವೆ ನೀಡಲು ಬದ್ದವಾಗಿದೆ.
ನೂತನ ಸುವರ್ಣ ಸಹಕಾರ ಮಾರ್ಟ್ ನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿ,
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…