ಸುದ್ದಿಗಳು

ಗುತ್ತಿಗಾರು ಸಹಕಾರಿ ಸಂಘದಿಂದ ಮತ್ತೊಂದು ಮಾದರಿ ಹೆಜ್ಜೆ | ಇದು ಸುವರ್ಣ ಸಹಕಾರ ಮಾರ್ಟ್ |

Share

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮತ್ತೊಂದು ಮಾದರಿ ಹೆಜ್ಜೆ ಇರಿಸಿದೆ. ಈಗಾಗಲೇ ಪೆಟ್ರೋಲ್‌ ಪಂಪ್‌ ಮೂಲಕ ರಾಜ್ಯದಲ್ಲೇ ಗುರುತಿಸಿಕೊಂಡಿರುವ ಸಹಕಾರಿ ಸಂಘವು  ಈಗ ಸುವರ್ಣ ಸಹಕಾರ ಮಾರ್ಟ್ ಮೂಲಕ ದಿನಸಿ ವಸ್ತುಗಳನ್ನು ಸದಸ್ಯರು ಹಾಗೂ ಗ್ರಾಮದ ಜನರಿಗೆ ನೀಡಲು ಯೋಜನೆ ಹಾಕಿಕೊಂಡಿದ್ದು ಇದು ಮತ್ತೊಮ್ಮೆ ಗಮನ ಸೆಳೆದಿದೆ. ಕಡಿಮೆ ದರದಲ್ಲಿ  ಗುಣಮಟ್ಟದ ದಿನಸಿ ಹಾಗೂ ಗೃಹಬಳಕೆ ವಸ್ತುಗಳನ್ನು ನೀಡುವುದು  ಇದರ ಉದ್ದೇಶವಾಗಿದೆ.

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಅತ್ಯಂತ ಗುಣಮಟ್ಟದ ಸೇವೆಯನ್ನು ಸದಸ್ಯರಿಗೆ ನೀಡುತ್ತಿದೆ. ತನ್ನ ಸಂಘದ ಸದಸ್ಯರಿಗೆ ಸಾಲ ಸೌಲಭ್ಯದಿಂದ ತೊಡಗಿ ಎಲ್ಲಾ ರೀತಿಯಲ್ಲೂ ಗ್ರಾಮದ ಜನರಿಗೆ ಆರ್ಥಿಕ, ಸಾಮಾಜಿಕ ಭದ್ರತೆ ನೀಡುವುದು  ಸಹಕಾರಿ ಸಂಘದ ಮೂಲ ಉದ್ದೇಶವಾಗಿದೆ. ಇದೀಗ ಸಂಘದ ಅಧ್ಯಕ್ಷರಾಗಿ ವೆಂಕಟ್‌ ದಂಬೆಕೋಡಿ ಅವರು ಸಂಘವನ್ನು ಮುನ್ನಡೆಸುತ್ತಿದ್ದು ಈಗಾಗಲೇ ವಿವಿಧ ಸಾಮಾಜಿಕ ಕಾರ್ಯಗಳ ಮೂಲಕ ಸಂಘವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಈಗ ಸುವರ್ಣ ಸಹಕಾರ ಮಾರ್ಟ್ ಮೂಲಕ ದಿನಸಿ ವಸ್ತುಗಳನ್ನು ಸದಸ್ಯರಿಗೆ ಹಾಗೂ ಗ್ರಾಮದ ಜನರಿಗೆ ನೀಡಲು ಉತ್ಸಾಹದಿಂದ ಇಳಿದಿದೆ. ಇಲ್ಲಿ ಕೂಡಾ ಸದಸ್ಯರಿಗೆ ಸಾಲ ಸೌಲಭ್ಯ ಹಾಗೂ ವಿವಿಧ ಬಗೆಯ ಯೋಜನೆಗಳನ್ನು ಹಾಕಿಕೊಂಡಿದೆ.ಈ ಮೂಲಕ ಸಂಘದ ಸದಸ್ಯರಿಗೆ ಗುಣಮಟ್ಟದ ಸೇವೆ ನೀಡಲು ಬದ್ದವಾಗಿದೆ.

 

ನೂತನ ಸುವರ್ಣ ಸಹಕಾರ ಮಾರ್ಟ್ ನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿ,

ಸಹಕಾರಿ ಸಂಘಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಟಗಳು ನಡೆಯಬೇಕು. ಬೈಲಾಗನುಗುಣವಾಗಿ ನಡೆದುಕೊಳ್ಳದೇ ಸಂಘದ ಏಳಿಗೆಯ ಹಿತದೃಷ್ಟಿಯಿಂದ ಬೈಲಾವನ್ನು ಹೊರತುಪಡಿಸಿಯೂ ಕಾರ್ಯಪ್ರವೃತವಾಗುವ ನಿರ್ಧಾರಗಳನ್ನು‌ಅನುಸರಿಸುವುದು ಒಳಿತು ಎಂದು  ಅಭಿಪ್ರಾಯ ಪಟ್ಟರು.ರಾಜ್ಯದಲ್ಲಿ ಕರಾವಳಿ ಜಿಲ್ಲೆಗಳ ಸಹಕಾರಿ ಸಂಘಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತಿದ್ದು ಇತರ ಸಂಘಗಳಿಗೆ ಮಾದರಿಯಾಗಿ ಮುನ್ನಡೆಯುತ್ತಿವೆ ಎಂದರು.
ಶಾಸಕ ಎಸ್‌ ಅಂಗಾರ ಮಾತನಾಡಿ, ನಾವು ನಮ್ಮ ಸಂಸ್ಥೆ ಯ ಬಗ್ಗೆ ಹೆಚ್ಚು ನಿಗಾವಹಿಸಿ ಕಾರ್ಯ ಪ್ರವೃತರಾದಾಗ ಆ ಸಂಸ್ಥೆ ಹೆಚ್ಚು ಅಭಿವೃದ್ಧಿ ಹೊಂದಲು ಸಾಧ್ಯವಿದೆ. ಈ ರೀತಿ ಗುತ್ತಿಗಾರು ಸಹಕಾರಿ ಸಂಘದ ಪ್ರಮುಖರು ಯೋಚನೆ ಹೊಂದಿದ್ದ ರಿಂದಲೇ ಇಷ್ಟೊಂದು ಅಭಿವೃದ್ಧಿ ಹೊಂದಿದೆ ಎಂದರು.
ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಸದಸ್ಯರ ಹಿತದೃಷ್ಟಿಯಿಂದ ಹಮ್ಮಿಕೊಂಡಿರುವ ಈ  ಕಾರ್ಯಯೋಜನೆಯ ಸಾಧಕ-ಬಾಧಕಗಳಲ್ಲಿ ನಕಾರಾತ್ಮಕ ಚಿಂತನೆಗಳ ಬಿಟ್ಟು ತನ್ನೊಂದಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಸಂಘದ ಏಳಿಗೆಗೆ ಸಹಕರಿಸುವಂತೆ ಮನವಿ‌ ಮಾಡಿದರು.
ವೇದಿಕೆಯಲ್ಲಿ ತಾ.ಪಂ. ಸದಸ್ಯೆ ಯಶೋದಾ ಬಾಳೆಗುಡ್ಡೆ, ಸಂಘದ ಮಾಜಿ ಅಧ್ಯಕ್ಷರುಗಳಾದ ಭರತ್‌ ಮುಂಡೋಡಿ, ಮುಳಿಯ ತಿಮ್ಮಪ್ಪಯ್ಯ, ನಿವೃತ್ತ ವೃತ್ತ ನಿರೀಕ್ಷಕ ಎಂ ಡಿ ಸುಬ್ಬಣ್ಣ ಗೌಡ, ಕೃಷಿಕ ಚಂದ್ರಶೇಖರ, ಶ್ಯಾಂ ಗೊರಗೋಡಿ, ಸಂಘದ ಉಪಾಧ್ಯಕ್ಷ ಕಿಶೋರ್‌ ಕುಮಾರ್‌ ಅಂಬೆಕಲ್ಲು ಹಾಗೂ ನಿರ್ದೇಶಕರುಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್‌ ಎ ಕೆ ಮೊದಲಾದವರು
ಇದ್ದರು.
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-03-2025 | ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ | ಮಾ.25 ರ ನಂತರ ವಿವಿದೆಡೆ ಮಳೆ ಸಾಧ್ಯತೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ, ಕೊಡಗು ಜಿಲ್ಲೆಯ…

5 hours ago

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…

1 day ago

ಸುನಿತಾ ವಿಲಿಯಮ್ಸ್ ಈ ಸಮಾಜಕ್ಕೆ ಸ್ಫೂರ್ತಿ ಏಕೆ…?

ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…

1 day ago

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…

1 day ago

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…

1 day ago

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…

2 days ago