ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮತ್ತೊಂದು ಮಾದರಿ ಹೆಜ್ಜೆ ಇರಿಸಿದೆ. ಈಗಾಗಲೇ ಪೆಟ್ರೋಲ್ ಪಂಪ್ ಮೂಲಕ ರಾಜ್ಯದಲ್ಲೇ ಗುರುತಿಸಿಕೊಂಡಿರುವ ಸಹಕಾರಿ ಸಂಘವು ಈಗ ಸುವರ್ಣ ಸಹಕಾರ ಮಾರ್ಟ್ ಮೂಲಕ ದಿನಸಿ ವಸ್ತುಗಳನ್ನು ಸದಸ್ಯರು ಹಾಗೂ ಗ್ರಾಮದ ಜನರಿಗೆ ನೀಡಲು ಯೋಜನೆ ಹಾಕಿಕೊಂಡಿದ್ದು ಇದು ಮತ್ತೊಮ್ಮೆ ಗಮನ ಸೆಳೆದಿದೆ. ಕಡಿಮೆ ದರದಲ್ಲಿ ಗುಣಮಟ್ಟದ ದಿನಸಿ ಹಾಗೂ ಗೃಹಬಳಕೆ ವಸ್ತುಗಳನ್ನು ನೀಡುವುದು ಇದರ ಉದ್ದೇಶವಾಗಿದೆ.
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಅತ್ಯಂತ ಗುಣಮಟ್ಟದ ಸೇವೆಯನ್ನು ಸದಸ್ಯರಿಗೆ ನೀಡುತ್ತಿದೆ. ತನ್ನ ಸಂಘದ ಸದಸ್ಯರಿಗೆ ಸಾಲ ಸೌಲಭ್ಯದಿಂದ ತೊಡಗಿ ಎಲ್ಲಾ ರೀತಿಯಲ್ಲೂ ಗ್ರಾಮದ ಜನರಿಗೆ ಆರ್ಥಿಕ, ಸಾಮಾಜಿಕ ಭದ್ರತೆ ನೀಡುವುದು ಸಹಕಾರಿ ಸಂಘದ ಮೂಲ ಉದ್ದೇಶವಾಗಿದೆ. ಇದೀಗ ಸಂಘದ ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ ಅವರು ಸಂಘವನ್ನು ಮುನ್ನಡೆಸುತ್ತಿದ್ದು ಈಗಾಗಲೇ ವಿವಿಧ ಸಾಮಾಜಿಕ ಕಾರ್ಯಗಳ ಮೂಲಕ ಸಂಘವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಈಗ ಸುವರ್ಣ ಸಹಕಾರ ಮಾರ್ಟ್ ಮೂಲಕ ದಿನಸಿ ವಸ್ತುಗಳನ್ನು ಸದಸ್ಯರಿಗೆ ಹಾಗೂ ಗ್ರಾಮದ ಜನರಿಗೆ ನೀಡಲು ಉತ್ಸಾಹದಿಂದ ಇಳಿದಿದೆ. ಇಲ್ಲಿ ಕೂಡಾ ಸದಸ್ಯರಿಗೆ ಸಾಲ ಸೌಲಭ್ಯ ಹಾಗೂ ವಿವಿಧ ಬಗೆಯ ಯೋಜನೆಗಳನ್ನು ಹಾಕಿಕೊಂಡಿದೆ.ಈ ಮೂಲಕ ಸಂಘದ ಸದಸ್ಯರಿಗೆ ಗುಣಮಟ್ಟದ ಸೇವೆ ನೀಡಲು ಬದ್ದವಾಗಿದೆ.
ನೂತನ ಸುವರ್ಣ ಸಹಕಾರ ಮಾರ್ಟ್ ನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿ,
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…