ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮತ್ತೊಂದು ಮಾದರಿ ಹೆಜ್ಜೆ ಇರಿಸಿದೆ. ಈಗಾಗಲೇ ಪೆಟ್ರೋಲ್ ಪಂಪ್ ಮೂಲಕ ರಾಜ್ಯದಲ್ಲೇ ಗುರುತಿಸಿಕೊಂಡಿರುವ ಸಹಕಾರಿ ಸಂಘವು ಈಗ ಸುವರ್ಣ ಸಹಕಾರ ಮಾರ್ಟ್ ಮೂಲಕ ದಿನಸಿ ವಸ್ತುಗಳನ್ನು ಸದಸ್ಯರು ಹಾಗೂ ಗ್ರಾಮದ ಜನರಿಗೆ ನೀಡಲು ಯೋಜನೆ ಹಾಕಿಕೊಂಡಿದ್ದು ಇದು ಮತ್ತೊಮ್ಮೆ ಗಮನ ಸೆಳೆದಿದೆ. ಕಡಿಮೆ ದರದಲ್ಲಿ ಗುಣಮಟ್ಟದ ದಿನಸಿ ಹಾಗೂ ಗೃಹಬಳಕೆ ವಸ್ತುಗಳನ್ನು ನೀಡುವುದು ಇದರ ಉದ್ದೇಶವಾಗಿದೆ.
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಅತ್ಯಂತ ಗುಣಮಟ್ಟದ ಸೇವೆಯನ್ನು ಸದಸ್ಯರಿಗೆ ನೀಡುತ್ತಿದೆ. ತನ್ನ ಸಂಘದ ಸದಸ್ಯರಿಗೆ ಸಾಲ ಸೌಲಭ್ಯದಿಂದ ತೊಡಗಿ ಎಲ್ಲಾ ರೀತಿಯಲ್ಲೂ ಗ್ರಾಮದ ಜನರಿಗೆ ಆರ್ಥಿಕ, ಸಾಮಾಜಿಕ ಭದ್ರತೆ ನೀಡುವುದು ಸಹಕಾರಿ ಸಂಘದ ಮೂಲ ಉದ್ದೇಶವಾಗಿದೆ. ಇದೀಗ ಸಂಘದ ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ ಅವರು ಸಂಘವನ್ನು ಮುನ್ನಡೆಸುತ್ತಿದ್ದು ಈಗಾಗಲೇ ವಿವಿಧ ಸಾಮಾಜಿಕ ಕಾರ್ಯಗಳ ಮೂಲಕ ಸಂಘವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಈಗ ಸುವರ್ಣ ಸಹಕಾರ ಮಾರ್ಟ್ ಮೂಲಕ ದಿನಸಿ ವಸ್ತುಗಳನ್ನು ಸದಸ್ಯರಿಗೆ ಹಾಗೂ ಗ್ರಾಮದ ಜನರಿಗೆ ನೀಡಲು ಉತ್ಸಾಹದಿಂದ ಇಳಿದಿದೆ. ಇಲ್ಲಿ ಕೂಡಾ ಸದಸ್ಯರಿಗೆ ಸಾಲ ಸೌಲಭ್ಯ ಹಾಗೂ ವಿವಿಧ ಬಗೆಯ ಯೋಜನೆಗಳನ್ನು ಹಾಕಿಕೊಂಡಿದೆ.ಈ ಮೂಲಕ ಸಂಘದ ಸದಸ್ಯರಿಗೆ ಗುಣಮಟ್ಟದ ಸೇವೆ ನೀಡಲು ಬದ್ದವಾಗಿದೆ.
ನೂತನ ಸುವರ್ಣ ಸಹಕಾರ ಮಾರ್ಟ್ ನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿ,
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…