ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮತ್ತೊಂದು ಮಾದರಿ ಹೆಜ್ಜೆ ಇರಿಸಿದೆ. ಈಗಾಗಲೇ ಪೆಟ್ರೋಲ್ ಪಂಪ್ ಮೂಲಕ ರಾಜ್ಯದಲ್ಲೇ ಗುರುತಿಸಿಕೊಂಡಿರುವ ಸಹಕಾರಿ ಸಂಘವು ಈಗ ಸುವರ್ಣ ಸಹಕಾರ ಮಾರ್ಟ್ ಮೂಲಕ ದಿನಸಿ ವಸ್ತುಗಳನ್ನು ಸದಸ್ಯರು ಹಾಗೂ ಗ್ರಾಮದ ಜನರಿಗೆ ನೀಡಲು ಯೋಜನೆ ಹಾಕಿಕೊಂಡಿದ್ದು ಇದು ಮತ್ತೊಮ್ಮೆ ಗಮನ ಸೆಳೆದಿದೆ. ಕಡಿಮೆ ದರದಲ್ಲಿ ಗುಣಮಟ್ಟದ ದಿನಸಿ ಹಾಗೂ ಗೃಹಬಳಕೆ ವಸ್ತುಗಳನ್ನು ನೀಡುವುದು ಇದರ ಉದ್ದೇಶವಾಗಿದೆ.
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಅತ್ಯಂತ ಗುಣಮಟ್ಟದ ಸೇವೆಯನ್ನು ಸದಸ್ಯರಿಗೆ ನೀಡುತ್ತಿದೆ. ತನ್ನ ಸಂಘದ ಸದಸ್ಯರಿಗೆ ಸಾಲ ಸೌಲಭ್ಯದಿಂದ ತೊಡಗಿ ಎಲ್ಲಾ ರೀತಿಯಲ್ಲೂ ಗ್ರಾಮದ ಜನರಿಗೆ ಆರ್ಥಿಕ, ಸಾಮಾಜಿಕ ಭದ್ರತೆ ನೀಡುವುದು ಸಹಕಾರಿ ಸಂಘದ ಮೂಲ ಉದ್ದೇಶವಾಗಿದೆ. ಇದೀಗ ಸಂಘದ ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ ಅವರು ಸಂಘವನ್ನು ಮುನ್ನಡೆಸುತ್ತಿದ್ದು ಈಗಾಗಲೇ ವಿವಿಧ ಸಾಮಾಜಿಕ ಕಾರ್ಯಗಳ ಮೂಲಕ ಸಂಘವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಈಗ ಸುವರ್ಣ ಸಹಕಾರ ಮಾರ್ಟ್ ಮೂಲಕ ದಿನಸಿ ವಸ್ತುಗಳನ್ನು ಸದಸ್ಯರಿಗೆ ಹಾಗೂ ಗ್ರಾಮದ ಜನರಿಗೆ ನೀಡಲು ಉತ್ಸಾಹದಿಂದ ಇಳಿದಿದೆ. ಇಲ್ಲಿ ಕೂಡಾ ಸದಸ್ಯರಿಗೆ ಸಾಲ ಸೌಲಭ್ಯ ಹಾಗೂ ವಿವಿಧ ಬಗೆಯ ಯೋಜನೆಗಳನ್ನು ಹಾಕಿಕೊಂಡಿದೆ.ಈ ಮೂಲಕ ಸಂಘದ ಸದಸ್ಯರಿಗೆ ಗುಣಮಟ್ಟದ ಸೇವೆ ನೀಡಲು ಬದ್ದವಾಗಿದೆ.
ನೂತನ ಸುವರ್ಣ ಸಹಕಾರ ಮಾರ್ಟ್ ನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿ,
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…