Advertisement
ಸುದ್ದಿಗಳು

ಗುತ್ತಿಗಾರು ಸಹಕಾರಿ ಸಂಘದಿಂದ ಮತ್ತೊಂದು ಮಾದರಿ ಹೆಜ್ಜೆ | ಇದು ಸುವರ್ಣ ಸಹಕಾರ ಮಾರ್ಟ್ |

Share

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮತ್ತೊಂದು ಮಾದರಿ ಹೆಜ್ಜೆ ಇರಿಸಿದೆ. ಈಗಾಗಲೇ ಪೆಟ್ರೋಲ್‌ ಪಂಪ್‌ ಮೂಲಕ ರಾಜ್ಯದಲ್ಲೇ ಗುರುತಿಸಿಕೊಂಡಿರುವ ಸಹಕಾರಿ ಸಂಘವು  ಈಗ ಸುವರ್ಣ ಸಹಕಾರ ಮಾರ್ಟ್ ಮೂಲಕ ದಿನಸಿ ವಸ್ತುಗಳನ್ನು ಸದಸ್ಯರು ಹಾಗೂ ಗ್ರಾಮದ ಜನರಿಗೆ ನೀಡಲು ಯೋಜನೆ ಹಾಕಿಕೊಂಡಿದ್ದು ಇದು ಮತ್ತೊಮ್ಮೆ ಗಮನ ಸೆಳೆದಿದೆ. ಕಡಿಮೆ ದರದಲ್ಲಿ  ಗುಣಮಟ್ಟದ ದಿನಸಿ ಹಾಗೂ ಗೃಹಬಳಕೆ ವಸ್ತುಗಳನ್ನು ನೀಡುವುದು  ಇದರ ಉದ್ದೇಶವಾಗಿದೆ.

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಅತ್ಯಂತ ಗುಣಮಟ್ಟದ ಸೇವೆಯನ್ನು ಸದಸ್ಯರಿಗೆ ನೀಡುತ್ತಿದೆ. ತನ್ನ ಸಂಘದ ಸದಸ್ಯರಿಗೆ ಸಾಲ ಸೌಲಭ್ಯದಿಂದ ತೊಡಗಿ ಎಲ್ಲಾ ರೀತಿಯಲ್ಲೂ ಗ್ರಾಮದ ಜನರಿಗೆ ಆರ್ಥಿಕ, ಸಾಮಾಜಿಕ ಭದ್ರತೆ ನೀಡುವುದು  ಸಹಕಾರಿ ಸಂಘದ ಮೂಲ ಉದ್ದೇಶವಾಗಿದೆ. ಇದೀಗ ಸಂಘದ ಅಧ್ಯಕ್ಷರಾಗಿ ವೆಂಕಟ್‌ ದಂಬೆಕೋಡಿ ಅವರು ಸಂಘವನ್ನು ಮುನ್ನಡೆಸುತ್ತಿದ್ದು ಈಗಾಗಲೇ ವಿವಿಧ ಸಾಮಾಜಿಕ ಕಾರ್ಯಗಳ ಮೂಲಕ ಸಂಘವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಈಗ ಸುವರ್ಣ ಸಹಕಾರ ಮಾರ್ಟ್ ಮೂಲಕ ದಿನಸಿ ವಸ್ತುಗಳನ್ನು ಸದಸ್ಯರಿಗೆ ಹಾಗೂ ಗ್ರಾಮದ ಜನರಿಗೆ ನೀಡಲು ಉತ್ಸಾಹದಿಂದ ಇಳಿದಿದೆ. ಇಲ್ಲಿ ಕೂಡಾ ಸದಸ್ಯರಿಗೆ ಸಾಲ ಸೌಲಭ್ಯ ಹಾಗೂ ವಿವಿಧ ಬಗೆಯ ಯೋಜನೆಗಳನ್ನು ಹಾಕಿಕೊಂಡಿದೆ.ಈ ಮೂಲಕ ಸಂಘದ ಸದಸ್ಯರಿಗೆ ಗುಣಮಟ್ಟದ ಸೇವೆ ನೀಡಲು ಬದ್ದವಾಗಿದೆ.

 

ನೂತನ ಸುವರ್ಣ ಸಹಕಾರ ಮಾರ್ಟ್ ನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿ,

ಸಹಕಾರಿ ಸಂಘಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಟಗಳು ನಡೆಯಬೇಕು. ಬೈಲಾಗನುಗುಣವಾಗಿ ನಡೆದುಕೊಳ್ಳದೇ ಸಂಘದ ಏಳಿಗೆಯ ಹಿತದೃಷ್ಟಿಯಿಂದ ಬೈಲಾವನ್ನು ಹೊರತುಪಡಿಸಿಯೂ ಕಾರ್ಯಪ್ರವೃತವಾಗುವ ನಿರ್ಧಾರಗಳನ್ನು‌ಅನುಸರಿಸುವುದು ಒಳಿತು ಎಂದು  ಅಭಿಪ್ರಾಯ ಪಟ್ಟರು.ರಾಜ್ಯದಲ್ಲಿ ಕರಾವಳಿ ಜಿಲ್ಲೆಗಳ ಸಹಕಾರಿ ಸಂಘಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತಿದ್ದು ಇತರ ಸಂಘಗಳಿಗೆ ಮಾದರಿಯಾಗಿ ಮುನ್ನಡೆಯುತ್ತಿವೆ ಎಂದರು.
ಶಾಸಕ ಎಸ್‌ ಅಂಗಾರ ಮಾತನಾಡಿ, ನಾವು ನಮ್ಮ ಸಂಸ್ಥೆ ಯ ಬಗ್ಗೆ ಹೆಚ್ಚು ನಿಗಾವಹಿಸಿ ಕಾರ್ಯ ಪ್ರವೃತರಾದಾಗ ಆ ಸಂಸ್ಥೆ ಹೆಚ್ಚು ಅಭಿವೃದ್ಧಿ ಹೊಂದಲು ಸಾಧ್ಯವಿದೆ. ಈ ರೀತಿ ಗುತ್ತಿಗಾರು ಸಹಕಾರಿ ಸಂಘದ ಪ್ರಮುಖರು ಯೋಚನೆ ಹೊಂದಿದ್ದ ರಿಂದಲೇ ಇಷ್ಟೊಂದು ಅಭಿವೃದ್ಧಿ ಹೊಂದಿದೆ ಎಂದರು.
ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಸದಸ್ಯರ ಹಿತದೃಷ್ಟಿಯಿಂದ ಹಮ್ಮಿಕೊಂಡಿರುವ ಈ  ಕಾರ್ಯಯೋಜನೆಯ ಸಾಧಕ-ಬಾಧಕಗಳಲ್ಲಿ ನಕಾರಾತ್ಮಕ ಚಿಂತನೆಗಳ ಬಿಟ್ಟು ತನ್ನೊಂದಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಸಂಘದ ಏಳಿಗೆಗೆ ಸಹಕರಿಸುವಂತೆ ಮನವಿ‌ ಮಾಡಿದರು.
ವೇದಿಕೆಯಲ್ಲಿ ತಾ.ಪಂ. ಸದಸ್ಯೆ ಯಶೋದಾ ಬಾಳೆಗುಡ್ಡೆ, ಸಂಘದ ಮಾಜಿ ಅಧ್ಯಕ್ಷರುಗಳಾದ ಭರತ್‌ ಮುಂಡೋಡಿ, ಮುಳಿಯ ತಿಮ್ಮಪ್ಪಯ್ಯ, ನಿವೃತ್ತ ವೃತ್ತ ನಿರೀಕ್ಷಕ ಎಂ ಡಿ ಸುಬ್ಬಣ್ಣ ಗೌಡ, ಕೃಷಿಕ ಚಂದ್ರಶೇಖರ, ಶ್ಯಾಂ ಗೊರಗೋಡಿ, ಸಂಘದ ಉಪಾಧ್ಯಕ್ಷ ಕಿಶೋರ್‌ ಕುಮಾರ್‌ ಅಂಬೆಕಲ್ಲು ಹಾಗೂ ನಿರ್ದೇಶಕರುಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್‌ ಎ ಕೆ ಮೊದಲಾದವರು
ಇದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

22 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago