ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಗುತ್ತಿಗಾರು-ಬಳ್ಳಕ್ಕ-ಪಂಜ ರಸ್ತೆ ಅದು. ಅನೇಕ ವರ್ಷಗಳ ಬಳಿಕ ಮರು ಡಾಮರೀಕರಣವಾಯಿತು. ಎರಡು ಹಂತದಲ್ಲಿ ಇಬ್ಬರು ಗುತ್ತಿಗೆದಾರರ ಮೂಲಕ ಡಾಮರೀಕರಣ ನಡೆಯಿತು. ಅನುದಾನಗಳು ಬಂದಾಗ ಸಹಜವಾಗಿಯೇ ಜನರಿಗೆ ಸಂತಸವಾಯಿತು, ಜನಪ್ರತಿನಿಧಿಗಳೂ ಹೆಮ್ಮೆ ಪಟ್ಟರು. ಕಾಮಗಾರಿ ನಡೆಯುವ ವೇಳೆ ಅನೇಕರ ಮಾತುಗಳು ಮೌನವಾದವು, ಕಾಮಗಾರಿ ಸರಿಯಾಗುತ್ತಿಲ್ಲ ಎಂದು ಜನರು ಮಾತನಾಡಿದರೂ ಯಾರೊಬ್ಬರೂ ಮಾತನಾಡಿಲ್ಲ. ಈ ಸಂದರ್ಭದಲ್ಲಿ ನ್ಯಾಯವಾದಿ ಅನಿಲ್ ಹುಲಿಕೆರೆ ಎಂಬ ಯುವಕ ನಾಗರಿಕರ ಪರವಾಗಿ ಕಾಮಗಾರಿ ಸರಿಯಾಗುತ್ತಿಲ್ಲ ಎಂಬ ಅನುಮಾನವನ್ನು ಬಹಿರಂಗವಾಗಿ ವ್ಯಕ್ತ ಪಡಿಸಿದರು.
ಗ್ರಾಮಮಟ್ಟದಲ್ಲಿ ಪಂಚಾಯತ್ ಮೂಲಕ ರಚನೆಯಾದ ವ್ಯಾಟ್ಸಪ್ ಗ್ರೂಪುಗಳಲ್ಲೂ ತಿಳಿಸಿದ್ದರು. ಸರಕಾರವೇ ಸೂಚಿಸಿದಂತೆ ಗ್ರಾಮ ಮಟ್ಟದಲ್ಲಿ ರಚನೆಯಾದ ವ್ಯಾಟ್ಸಪ್ ಗ್ರೂಪುಗಳಲ್ಲಿ ನೀಡಿದ ಇಂತಹ ಮಾಹಿತಿಗಳ ಬಗ್ಗೆ ತಕ್ಷಣವೇ ಕ್ರಮವಾಗಬೇಕು. ಹಾಗಿದ್ದರೂ ಯಾವುದೇ ಕ್ರಮ ಆಗಿರಲಿಲ್ಲ ಎನ್ನುತ್ತಾರೆ ಅನಿಲ್.
ಈ ಸಂದರ್ಭ ಸ್ಥಳೀಯರು ಸರಿಯಾಗಿ ಸ್ಪಂದನೆ ಮಾಡಿಲ್ಲವೆಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ದಾಖಲೆ ಸಹಿತ ಅನಿಲ್ ಹುಲಿಕೆರೆ ವಾಟ್ಸಪ್ ಸಂದೇಶ ಮಾಡಿದರು. ಆಧುನಿಕ ಜಾಲತಾಣವನ್ನು ರಚನಾತ್ಮಕವಾಗಿ ಬಳಸಿಕೊಂಡ ಯುವಕನಿಗೆ ಸಚಿವರು ಸ್ಪಂದಿಸಿದರು. ಪುತ್ತೂರು ಸಹಾಯಕ ಕಮೀಶನರ್ ಸ್ಪಂದಿಸಿದರು. ತಕ್ಷಣವೇ ಕಾಮಗಾರಿ ಸರಿಯಾಗಿ ನಡೆಸಬೇಕು ಎಂದು ಸೂಚನೆ ನೀಡಿದರು. ಹಾಗಿದ್ದರೂ ಸ್ಥಳೀಯವಾಗಿ ಯಾವುದೇ ಸರಿಯಾದ ಸ್ಪಂದನೆ ಇರಲಿಲ್ಲ ಎನ್ನುತ್ತಾರೆ ಯುವಕ ಅನಿಲ್.
ಇದೀಗ ಗುತ್ತಿಗಾರು-ಚಣಿಲ ರಸ್ತೆಯ ಅಲ್ಲಲ್ಲಿ ರಸ್ತೆಯಲ್ಲಿ ಗುಂಡಿ ಬಿದ್ದಿದೆ. ಕೊನೆಗೂ ಕಾಮಗಾರಿ ಸರಿಯಾಗುತ್ತಿಲ್ಲ ಎಂದು ಪದೇ ಪದೇ ಹೇಳಿರುವ ಯುವಕನ ಸಾಮಾಜಿಕ ಕಾಳಜಿಗೆ ಜನಪ್ರತಿನಿಧಿಗಳು ಧ್ವನಿಯಾಗಲಿಲ್ಲ, ಅಧಿಕಾರಿಗಳೂ ಮೌನವಾದರು. ಇದೀಗ ರಸ್ತೆ ಗುಂಡಿ ಬಿದ್ದಿದೆ. ಈಗ ಮಾತನಾಡುವವರು ಯಾರು ಎನ್ನುವುದೇ ಪ್ರಶ್ನೆಯಾಗಿದೆ. ಪ್ರಧಾನಿಗಳು ಹೇಳುವ ಚೌಕೀದಾರ್ ಎನ್ನುವುದು ಈಗ ಪದೇ ಪದೇ ಇಂತಹ ರಸ್ತೆಗಳ ಮುಂದೆ ಬಂದು ನಿಲ್ಲುತ್ತದೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…