ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಗುತ್ತಿಗಾರು-ಬಳ್ಳಕ್ಕ-ಪಂಜ ರಸ್ತೆ ಅದು. ಅನೇಕ ವರ್ಷಗಳ ಬಳಿಕ ಮರು ಡಾಮರೀಕರಣವಾಯಿತು. ಎರಡು ಹಂತದಲ್ಲಿ ಇಬ್ಬರು ಗುತ್ತಿಗೆದಾರರ ಮೂಲಕ ಡಾಮರೀಕರಣ ನಡೆಯಿತು. ಅನುದಾನಗಳು ಬಂದಾಗ ಸಹಜವಾಗಿಯೇ ಜನರಿಗೆ ಸಂತಸವಾಯಿತು, ಜನಪ್ರತಿನಿಧಿಗಳೂ ಹೆಮ್ಮೆ ಪಟ್ಟರು. ಕಾಮಗಾರಿ ನಡೆಯುವ ವೇಳೆ ಅನೇಕರ ಮಾತುಗಳು ಮೌನವಾದವು, ಕಾಮಗಾರಿ ಸರಿಯಾಗುತ್ತಿಲ್ಲ ಎಂದು ಜನರು ಮಾತನಾಡಿದರೂ ಯಾರೊಬ್ಬರೂ ಮಾತನಾಡಿಲ್ಲ. ಈ ಸಂದರ್ಭದಲ್ಲಿ ನ್ಯಾಯವಾದಿ ಅನಿಲ್ ಹುಲಿಕೆರೆ ಎಂಬ ಯುವಕ ನಾಗರಿಕರ ಪರವಾಗಿ ಕಾಮಗಾರಿ ಸರಿಯಾಗುತ್ತಿಲ್ಲ ಎಂಬ ಅನುಮಾನವನ್ನು ಬಹಿರಂಗವಾಗಿ ವ್ಯಕ್ತ ಪಡಿಸಿದರು.
ಗ್ರಾಮಮಟ್ಟದಲ್ಲಿ ಪಂಚಾಯತ್ ಮೂಲಕ ರಚನೆಯಾದ ವ್ಯಾಟ್ಸಪ್ ಗ್ರೂಪುಗಳಲ್ಲೂ ತಿಳಿಸಿದ್ದರು. ಸರಕಾರವೇ ಸೂಚಿಸಿದಂತೆ ಗ್ರಾಮ ಮಟ್ಟದಲ್ಲಿ ರಚನೆಯಾದ ವ್ಯಾಟ್ಸಪ್ ಗ್ರೂಪುಗಳಲ್ಲಿ ನೀಡಿದ ಇಂತಹ ಮಾಹಿತಿಗಳ ಬಗ್ಗೆ ತಕ್ಷಣವೇ ಕ್ರಮವಾಗಬೇಕು. ಹಾಗಿದ್ದರೂ ಯಾವುದೇ ಕ್ರಮ ಆಗಿರಲಿಲ್ಲ ಎನ್ನುತ್ತಾರೆ ಅನಿಲ್.
ಈ ಸಂದರ್ಭ ಸ್ಥಳೀಯರು ಸರಿಯಾಗಿ ಸ್ಪಂದನೆ ಮಾಡಿಲ್ಲವೆಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ದಾಖಲೆ ಸಹಿತ ಅನಿಲ್ ಹುಲಿಕೆರೆ ವಾಟ್ಸಪ್ ಸಂದೇಶ ಮಾಡಿದರು. ಆಧುನಿಕ ಜಾಲತಾಣವನ್ನು ರಚನಾತ್ಮಕವಾಗಿ ಬಳಸಿಕೊಂಡ ಯುವಕನಿಗೆ ಸಚಿವರು ಸ್ಪಂದಿಸಿದರು. ಪುತ್ತೂರು ಸಹಾಯಕ ಕಮೀಶನರ್ ಸ್ಪಂದಿಸಿದರು. ತಕ್ಷಣವೇ ಕಾಮಗಾರಿ ಸರಿಯಾಗಿ ನಡೆಸಬೇಕು ಎಂದು ಸೂಚನೆ ನೀಡಿದರು. ಹಾಗಿದ್ದರೂ ಸ್ಥಳೀಯವಾಗಿ ಯಾವುದೇ ಸರಿಯಾದ ಸ್ಪಂದನೆ ಇರಲಿಲ್ಲ ಎನ್ನುತ್ತಾರೆ ಯುವಕ ಅನಿಲ್.
ಇದೀಗ ಗುತ್ತಿಗಾರು-ಚಣಿಲ ರಸ್ತೆಯ ಅಲ್ಲಲ್ಲಿ ರಸ್ತೆಯಲ್ಲಿ ಗುಂಡಿ ಬಿದ್ದಿದೆ. ಕೊನೆಗೂ ಕಾಮಗಾರಿ ಸರಿಯಾಗುತ್ತಿಲ್ಲ ಎಂದು ಪದೇ ಪದೇ ಹೇಳಿರುವ ಯುವಕನ ಸಾಮಾಜಿಕ ಕಾಳಜಿಗೆ ಜನಪ್ರತಿನಿಧಿಗಳು ಧ್ವನಿಯಾಗಲಿಲ್ಲ, ಅಧಿಕಾರಿಗಳೂ ಮೌನವಾದರು. ಇದೀಗ ರಸ್ತೆ ಗುಂಡಿ ಬಿದ್ದಿದೆ. ಈಗ ಮಾತನಾಡುವವರು ಯಾರು ಎನ್ನುವುದೇ ಪ್ರಶ್ನೆಯಾಗಿದೆ. ಪ್ರಧಾನಿಗಳು ಹೇಳುವ ಚೌಕೀದಾರ್ ಎನ್ನುವುದು ಈಗ ಪದೇ ಪದೇ ಇಂತಹ ರಸ್ತೆಗಳ ಮುಂದೆ ಬಂದು ನಿಲ್ಲುತ್ತದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…