Advertisement
MIRROR FOCUS

ಸುಳ್ಯ ತಾಲೂಕಿನಲ್ಲಿ ಹೀಗೇಕೆ ? | ಕೊನೆಗೂ ರಸ್ತೆ ಹಾಳಾಯಿತು | ಸಚಿವರು-ಅಧಿಕಾರಿಗಳಿಗೆ ಹೇಳಿದರೂ ಪ್ರಯೋಜನವಾಗಿಲ್ಲ….!! |

Share
ಈ ಸರಕಾರಗಳು, ಈ ಅಧಿಕಾರಿಗಳು, ಈ ಸ್ಥಳೀಯ ಜನಪ್ರತಿನಿಧಿಗಳು ಯಾರನ್ನು ರಕ್ಷಣೆ ಮಾಡುವವರು ? ಜನಸಾಮಾನ್ಯನೊಬ್ಬ ಪರಿ ಪರಿಯಾಗಿ ರಸ್ತೆ ಕಾಮಗಾರಿ ಬಗ್ಗೆ ಹೇಳಿದರೂ ಕೇಳಲಿಲ್ಲ. ಕೊನೆಗೂ ರಸ್ತೆ ಹಾಳಾಗಿದೆ. ಇನ್ನು ಅನುಭವಿಸುವುದೇ ದಾರಿ…!. ಯಾವುದೋ ವಾಟ್ಸಪ್‌ ಗ್ರೂಪಲ್ಲಿ ಪ್ರಧಾನಿಗಳ ಯೋಜನೆಯನ್ನು , ಪ್ರಧಾನಿಗಳ ಕಾರ್ಯವನ್ನು, ಚೌಕೀದಾರನ ಹೆಸರನ್ನು ಹೇಳಿಕೊಳ್ಳುವ, ದೇಶದ ಉದ್ಧಾರ ಎನ್ನುವ ಮೆಸೇಜ್  ದಾಟಿಸುವ ಮಂದಿ ಜನಸಾಮಾನ್ಯರು ಕಾಳಜಿಯಿಂದ ಹೇಳುವ ಸಂಗತಿಗಳು ಏಕೆ ಗಾಳಿಯಲ್ಲಿ  ತೂರಿ ಹೋಗುತ್ತದೆ ? ಸುಳ್ಯ ತಾಲೂಕಿನಲ್ಲಿ ಕಳೆದ ಹಲವು ಸಮಯಗಳಿಂದ ಇಂತಹದ್ದೇ ಘಟನೆಗಳು ಪದೇ ಪದೇ ನಡೆಯುತ್ತಿದೆ. ಈಗಲೂ ಅಂತಹದ್ದೇ ಘಟನೆ ನಡೆದಿದೆ. ಏನಿದು  ಕತೆ ಇಲ್ಲಿ ಓದಿ.

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಗುತ್ತಿಗಾರು-ಬಳ್ಳಕ್ಕ-ಪಂಜ ರಸ್ತೆ ಅದು. ಅನೇಕ ವರ್ಷಗಳ ಬಳಿಕ ಮರು ಡಾಮರೀಕರಣವಾಯಿತು. ಎರಡು ಹಂತದಲ್ಲಿ ಇಬ್ಬರು ಗುತ್ತಿಗೆದಾರರ ಮೂಲಕ ಡಾಮರೀಕರಣ ನಡೆಯಿತು. ಅನುದಾನಗಳು ಬಂದಾಗ ಸಹಜವಾಗಿಯೇ ಜನರಿಗೆ ಸಂತಸವಾಯಿತು, ಜನಪ್ರತಿನಿಧಿಗಳೂ ಹೆಮ್ಮೆ ಪಟ್ಟರು. ಕಾಮಗಾರಿ ನಡೆಯುವ ವೇಳೆ ಅನೇಕರ ಮಾತುಗಳು ಮೌನವಾದವು, ಕಾಮಗಾರಿ ಸರಿಯಾಗುತ್ತಿಲ್ಲ ಎಂದು ಜನರು ಮಾತನಾಡಿದರೂ ಯಾರೊಬ್ಬರೂ ಮಾತನಾಡಿಲ್ಲ. ಈ ಸಂದರ್ಭದಲ್ಲಿ  ನ್ಯಾಯವಾದಿ ಅನಿಲ್‌ ಹುಲಿಕೆರೆ ಎಂಬ ಯುವಕ ನಾಗರಿಕರ ಪರವಾಗಿ ಕಾಮಗಾರಿ ಸರಿಯಾಗುತ್ತಿಲ್ಲ ಎಂಬ ಅನುಮಾನವನ್ನು ಬಹಿರಂಗವಾಗಿ ವ್ಯಕ್ತ ಪಡಿಸಿದರು.

ಅನಿಲ್‌ ಹುಲಿಕೆರೆ

ಗ್ರಾಮಮಟ್ಟದಲ್ಲಿ ಪಂಚಾಯತ್‌ ಮೂಲಕ ರಚನೆಯಾದ ವ್ಯಾಟ್ಸಪ್‌ ಗ್ರೂಪುಗಳಲ್ಲೂ ತಿಳಿಸಿದ್ದರು.  ಸರಕಾರವೇ ಸೂಚಿಸಿದಂತೆ ಗ್ರಾಮ ಮಟ್ಟದಲ್ಲಿ ರಚನೆಯಾದ ವ್ಯಾಟ್ಸಪ್‌ ಗ್ರೂಪುಗಳಲ್ಲಿ ನೀಡಿದ ಇಂತಹ  ಮಾಹಿತಿಗಳ ಬಗ್ಗೆ ತಕ್ಷಣವೇ ಕ್ರಮವಾಗಬೇಕು. ಹಾಗಿದ್ದರೂ ಯಾವುದೇ ಕ್ರಮ ಆಗಿರಲಿಲ್ಲ ಎನ್ನುತ್ತಾರೆ ಅನಿಲ್.

 

 

 

ಈ ಸಂದರ್ಭ ಸ್ಥಳೀಯರು ಸರಿಯಾಗಿ ಸ್ಪಂದನೆ ಮಾಡಿಲ್ಲವೆಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ದಾಖಲೆ ಸಹಿತ ಅನಿಲ್‌ ಹುಲಿಕೆರೆ ವಾಟ್ಸಪ್‌ ಸಂದೇಶ ಮಾಡಿದರು. ಆಧುನಿಕ ಜಾಲತಾಣವನ್ನು  ರಚನಾತ್ಮಕವಾಗಿ ಬಳಸಿಕೊಂಡ ಯುವಕನಿಗೆ ಸಚಿವರು ಸ್ಪಂದಿಸಿದರು. ಪುತ್ತೂರು ಸಹಾಯಕ ಕಮೀಶನರ್‌ ಸ್ಪಂದಿಸಿದರು. ತಕ್ಷಣವೇ ಕಾಮಗಾರಿ ಸರಿಯಾಗಿ ನಡೆಸಬೇಕು ಎಂದು  ಸೂಚನೆ ನೀಡಿದರು. ಹಾಗಿದ್ದರೂ ಸ್ಥಳೀಯವಾಗಿ ಯಾವುದೇ ಸರಿಯಾದ ಸ್ಪಂದನೆ ಇರಲಿಲ್ಲ ಎನ್ನುತ್ತಾರೆ ಯುವಕ ಅನಿಲ್.‌

ಇದೀಗ ಗುತ್ತಿಗಾರು-ಚಣಿಲ ರಸ್ತೆಯ ಅಲ್ಲಲ್ಲಿ ರಸ್ತೆಯಲ್ಲಿ  ಗುಂಡಿ ಬಿದ್ದಿದೆ. ಕೊನೆಗೂ ಕಾಮಗಾರಿ ಸರಿಯಾಗುತ್ತಿಲ್ಲ ಎಂದು ಪದೇ ಪದೇ ಹೇಳಿರುವ ಯುವಕನ ಸಾಮಾಜಿಕ ಕಾಳಜಿಗೆ ಜನಪ್ರತಿನಿಧಿಗಳು ಧ್ವನಿಯಾಗಲಿಲ್ಲ, ಅಧಿಕಾರಿಗಳೂ ಮೌನವಾದರು. ಇದೀಗ ರಸ್ತೆ ಗುಂಡಿ ಬಿದ್ದಿದೆ. ಈಗ ಮಾತನಾಡುವವರು ಯಾರು ಎನ್ನುವುದೇ ಪ್ರಶ್ನೆಯಾಗಿದೆ. ಪ್ರಧಾನಿಗಳು ಹೇಳುವ ಚೌಕೀದಾರ್‌  ಎನ್ನುವುದು ಈಗ  ಪದೇ ಪದೇ ಇಂತಹ ರಸ್ತೆಗಳ ಮುಂದೆ ಬಂದು ನಿಲ್ಲುತ್ತದೆ.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

4 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

14 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

19 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

20 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

22 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

23 hours ago