Advertisement
MIRROR FOCUS

ಸುಳ್ಯ ತಾಲೂಕಿನಲ್ಲಿ ಹೀಗೇಕೆ ? | ಕೊನೆಗೂ ರಸ್ತೆ ಹಾಳಾಯಿತು | ಸಚಿವರು-ಅಧಿಕಾರಿಗಳಿಗೆ ಹೇಳಿದರೂ ಪ್ರಯೋಜನವಾಗಿಲ್ಲ….!! |

Share
ಈ ಸರಕಾರಗಳು, ಈ ಅಧಿಕಾರಿಗಳು, ಈ ಸ್ಥಳೀಯ ಜನಪ್ರತಿನಿಧಿಗಳು ಯಾರನ್ನು ರಕ್ಷಣೆ ಮಾಡುವವರು ? ಜನಸಾಮಾನ್ಯನೊಬ್ಬ ಪರಿ ಪರಿಯಾಗಿ ರಸ್ತೆ ಕಾಮಗಾರಿ ಬಗ್ಗೆ ಹೇಳಿದರೂ ಕೇಳಲಿಲ್ಲ. ಕೊನೆಗೂ ರಸ್ತೆ ಹಾಳಾಗಿದೆ. ಇನ್ನು ಅನುಭವಿಸುವುದೇ ದಾರಿ…!. ಯಾವುದೋ ವಾಟ್ಸಪ್‌ ಗ್ರೂಪಲ್ಲಿ ಪ್ರಧಾನಿಗಳ ಯೋಜನೆಯನ್ನು , ಪ್ರಧಾನಿಗಳ ಕಾರ್ಯವನ್ನು, ಚೌಕೀದಾರನ ಹೆಸರನ್ನು ಹೇಳಿಕೊಳ್ಳುವ, ದೇಶದ ಉದ್ಧಾರ ಎನ್ನುವ ಮೆಸೇಜ್  ದಾಟಿಸುವ ಮಂದಿ ಜನಸಾಮಾನ್ಯರು ಕಾಳಜಿಯಿಂದ ಹೇಳುವ ಸಂಗತಿಗಳು ಏಕೆ ಗಾಳಿಯಲ್ಲಿ  ತೂರಿ ಹೋಗುತ್ತದೆ ? ಸುಳ್ಯ ತಾಲೂಕಿನಲ್ಲಿ ಕಳೆದ ಹಲವು ಸಮಯಗಳಿಂದ ಇಂತಹದ್ದೇ ಘಟನೆಗಳು ಪದೇ ಪದೇ ನಡೆಯುತ್ತಿದೆ. ಈಗಲೂ ಅಂತಹದ್ದೇ ಘಟನೆ ನಡೆದಿದೆ. ಏನಿದು  ಕತೆ ಇಲ್ಲಿ ಓದಿ.

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಗುತ್ತಿಗಾರು-ಬಳ್ಳಕ್ಕ-ಪಂಜ ರಸ್ತೆ ಅದು. ಅನೇಕ ವರ್ಷಗಳ ಬಳಿಕ ಮರು ಡಾಮರೀಕರಣವಾಯಿತು. ಎರಡು ಹಂತದಲ್ಲಿ ಇಬ್ಬರು ಗುತ್ತಿಗೆದಾರರ ಮೂಲಕ ಡಾಮರೀಕರಣ ನಡೆಯಿತು. ಅನುದಾನಗಳು ಬಂದಾಗ ಸಹಜವಾಗಿಯೇ ಜನರಿಗೆ ಸಂತಸವಾಯಿತು, ಜನಪ್ರತಿನಿಧಿಗಳೂ ಹೆಮ್ಮೆ ಪಟ್ಟರು. ಕಾಮಗಾರಿ ನಡೆಯುವ ವೇಳೆ ಅನೇಕರ ಮಾತುಗಳು ಮೌನವಾದವು, ಕಾಮಗಾರಿ ಸರಿಯಾಗುತ್ತಿಲ್ಲ ಎಂದು ಜನರು ಮಾತನಾಡಿದರೂ ಯಾರೊಬ್ಬರೂ ಮಾತನಾಡಿಲ್ಲ. ಈ ಸಂದರ್ಭದಲ್ಲಿ  ನ್ಯಾಯವಾದಿ ಅನಿಲ್‌ ಹುಲಿಕೆರೆ ಎಂಬ ಯುವಕ ನಾಗರಿಕರ ಪರವಾಗಿ ಕಾಮಗಾರಿ ಸರಿಯಾಗುತ್ತಿಲ್ಲ ಎಂಬ ಅನುಮಾನವನ್ನು ಬಹಿರಂಗವಾಗಿ ವ್ಯಕ್ತ ಪಡಿಸಿದರು.

ಅನಿಲ್‌ ಹುಲಿಕೆರೆ

ಗ್ರಾಮಮಟ್ಟದಲ್ಲಿ ಪಂಚಾಯತ್‌ ಮೂಲಕ ರಚನೆಯಾದ ವ್ಯಾಟ್ಸಪ್‌ ಗ್ರೂಪುಗಳಲ್ಲೂ ತಿಳಿಸಿದ್ದರು.  ಸರಕಾರವೇ ಸೂಚಿಸಿದಂತೆ ಗ್ರಾಮ ಮಟ್ಟದಲ್ಲಿ ರಚನೆಯಾದ ವ್ಯಾಟ್ಸಪ್‌ ಗ್ರೂಪುಗಳಲ್ಲಿ ನೀಡಿದ ಇಂತಹ  ಮಾಹಿತಿಗಳ ಬಗ್ಗೆ ತಕ್ಷಣವೇ ಕ್ರಮವಾಗಬೇಕು. ಹಾಗಿದ್ದರೂ ಯಾವುದೇ ಕ್ರಮ ಆಗಿರಲಿಲ್ಲ ಎನ್ನುತ್ತಾರೆ ಅನಿಲ್.

 

 

 

ಈ ಸಂದರ್ಭ ಸ್ಥಳೀಯರು ಸರಿಯಾಗಿ ಸ್ಪಂದನೆ ಮಾಡಿಲ್ಲವೆಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ದಾಖಲೆ ಸಹಿತ ಅನಿಲ್‌ ಹುಲಿಕೆರೆ ವಾಟ್ಸಪ್‌ ಸಂದೇಶ ಮಾಡಿದರು. ಆಧುನಿಕ ಜಾಲತಾಣವನ್ನು  ರಚನಾತ್ಮಕವಾಗಿ ಬಳಸಿಕೊಂಡ ಯುವಕನಿಗೆ ಸಚಿವರು ಸ್ಪಂದಿಸಿದರು. ಪುತ್ತೂರು ಸಹಾಯಕ ಕಮೀಶನರ್‌ ಸ್ಪಂದಿಸಿದರು. ತಕ್ಷಣವೇ ಕಾಮಗಾರಿ ಸರಿಯಾಗಿ ನಡೆಸಬೇಕು ಎಂದು  ಸೂಚನೆ ನೀಡಿದರು. ಹಾಗಿದ್ದರೂ ಸ್ಥಳೀಯವಾಗಿ ಯಾವುದೇ ಸರಿಯಾದ ಸ್ಪಂದನೆ ಇರಲಿಲ್ಲ ಎನ್ನುತ್ತಾರೆ ಯುವಕ ಅನಿಲ್.‌

ಇದೀಗ ಗುತ್ತಿಗಾರು-ಚಣಿಲ ರಸ್ತೆಯ ಅಲ್ಲಲ್ಲಿ ರಸ್ತೆಯಲ್ಲಿ  ಗುಂಡಿ ಬಿದ್ದಿದೆ. ಕೊನೆಗೂ ಕಾಮಗಾರಿ ಸರಿಯಾಗುತ್ತಿಲ್ಲ ಎಂದು ಪದೇ ಪದೇ ಹೇಳಿರುವ ಯುವಕನ ಸಾಮಾಜಿಕ ಕಾಳಜಿಗೆ ಜನಪ್ರತಿನಿಧಿಗಳು ಧ್ವನಿಯಾಗಲಿಲ್ಲ, ಅಧಿಕಾರಿಗಳೂ ಮೌನವಾದರು. ಇದೀಗ ರಸ್ತೆ ಗುಂಡಿ ಬಿದ್ದಿದೆ. ಈಗ ಮಾತನಾಡುವವರು ಯಾರು ಎನ್ನುವುದೇ ಪ್ರಶ್ನೆಯಾಗಿದೆ. ಪ್ರಧಾನಿಗಳು ಹೇಳುವ ಚೌಕೀದಾರ್‌  ಎನ್ನುವುದು ಈಗ  ಪದೇ ಪದೇ ಇಂತಹ ರಸ್ತೆಗಳ ಮುಂದೆ ಬಂದು ನಿಲ್ಲುತ್ತದೆ.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 hour ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

10 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

14 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago