Advertisement
ಸುದ್ದಿಗಳು

#SwachchBharath | ಪುಟ್ಟ ಹಳ್ಳಿಯ ಸ್ವಚ್ಛತಾ ಅಭಿಯಾನದ ಇಂಪ್ಯಾಕ್ಟ್….‌ | ಇನ್ನೀಗ ಬೇಕಿರುವುದು ಜನರ ಒಲವು… ಆಡಳಿತದ ನೆರವು.. |

Share

ಸ್ವಚ್ಛತಾ ಅಭಿಯಾನ, ಪ್ಲಾಸ್ಟಿಕ್‌ ಮುಕ್ತ ಗ್ರಾಮ ಈ ಕನಸುಗಳೊಂದಿಗೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಆರಂಭಗೊಂಡ ಟಾಸ್ಕ್‌ ಫೋರ್ಸ್‌ ಕೆಲಸ ಮುಂದುವರಿದಿದೆ. ಕಳೆದ 5 ವಾರಗಳಿಂದ ಪ್ರತೀ ವಾರ ಜಾಗೃತಿ ಅಭಿಯಾನ ನಡೆಸುತ್ತಿತ್ತು. ಇದೀಗ ಈ ಅಭಿಯಾನದ ಪರಿಣಾಮ ಗುತ್ತಿಗಾರಿನ ಪುಟ್ಟ ಹಳ್ಳಿಯಲ್ಲಿ ಕೆಲವು ಅಂಗಡಿಗಳ ಮುಂದೆ ಸ್ವಚ್ಛತೆಯ ಪರಿಣಾಮ ಕಂಡುಬಂದಿದೆ. ಗುತ್ತಿಗಾರಿನ ಬಹುತೇಕ ವರ್ತಕರು ಈ ಅಭಿಯಾನಕ್ಕೆ ಕೆಲಸ ಮೂಲಕ ಬೆಂಬಲ ಸೂಚಿಸಿದ್ದಾರೆ.

Advertisement
Advertisement
ವರ್ತಕರಿಂದಲೇ ಸ್ವಚ್ಛವಾಗಿರುವ ಗುತ್ತಿಗಾರು ಪೇಟೆ
ಹೊಂಬೆಳಕು ತಂಡದಿಂದ ಸ್ವಚ್ಛವಾಗಿರುವ ಬಸ್‌ ತಂಗುದಾಣ

ಗುತ್ತಿಗಾರಿನ ಸಂಜೀವಿನ ಮಹಿಳಾ ಒಕ್ಕೂಟ, ವರ್ತಕ ಸಂಘ ಗುತ್ತಿಗಾರು ಮತ್ತು ಗುತ್ತಿಗಾರು ಗ್ರಾಮ ಪಂಚಾಯತ್‌  ಹಾಗೂ ಇತರ ಎಲ್ಲಾ ಸಂಘಸಂಸ್ಥೆಗಳ ಮೂಲಕ ರಚನೆಗೊಂಡ ಟಾಸ್ಕ್‌ ಫೋರ್ಸ್‌ ಕಳೆದ 5 ವಾರಗಳಿಂದ ಗುತ್ತಿಗಾರು ಪೇಟೆಯಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ನಡೆಸುತ್ತಿತ್ತು. ಪ್ರತೀ ಗುರುವಾರ ಟಾಸ್ಕ್‌ ಫೋರ್ಸ್‌ ತಂಡ ಸದಸ್ಯರು ಗುತ್ತಿಗಾರು ಪೇಟೆಯಲ್ಲಿ ತೆರಳಿ ಅಂಗಡಿಗಳ ಮಾಲೀಕರಿಗೆ ಸ್ವಚ್ಛತಾ ಜಾಗೃತಿ ಬಗ್ಗೆ ತಿಳಿಸುತ್ತಿದ್ದರು. ಪ್ಲಾಸ್ಟಿಕ್‌ ಮುಕ್ತ ಗ್ರಾಮಕ್ಕಾಗಿ ಕೆಲಸ ಮಾಡುತ್ತಿದ್ದರು. ಇದೀಗ 5 ನೇ ವಾರದ ಅಭಿಯಾನದ ವೇಳೆ ಬಹುತೇಕ ವರ್ತಕರು ಈ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದು ಕಂಡುಬಂದಿದೆ. ಅಂಗಡಿಗಳ ಮುಂದೆ ಸ್ವಚ್ಛತೆಯನ್ನು ಕಾಯ್ದುಕೊಂಡಿರುವುದು ಕಂಡುಬಂದಿದೆ. ಸ್ವಚ್ಛ ಗುತ್ತಿಗಾರು ಯೋಜನೆಗೆ ಅಗತ್ಯ ಎನ್ನುವುದನ್ನೂ ಹೇಳುತ್ತಿದ್ದಾರೆ. ಇದೇ ವೇಳೆ ವಿವಿಧ ಸಂಘಸಂಸ್ಥೆಗಳೂ ಸ್ವಚ್ಛತಾ ಅಭಿಯಾನಕ್ಕೆ ಬೆಂಬಲಿಸಿದ್ದಾರೆ. ಸ್ವಯಂಪ್ರೇರಿತರಾಗಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಸಂಘಟನೆಗಳು ಅವರ ಬಿಡುವಿನ ವೇಳೆ ತಮ್ಮದೇ ಮಾದರಿಯಲ್ಲಿ ಕೆಲಸ ಮಾಡುತ್ತಿವೆ.  ಹೊಂಬೆಳಕು ತಂಡವು ಈಚೆಗೆ ಬಸ್‌ ನಿಲ್ದಾಣ ಸ್ವಚ್ಛತೆಯನ್ನು ಮಾಡಿದ್ದರೆ , ಬಿಎಂಎಸ್‌ ಅಟೋ ಚಾಲಕರ ಸಂಘವು ಕೂಡಾ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿತ್ತು. ಜೀಪು ಚಾಲಕರ ಸಂಘವು ಕೂಡಾ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿತ್ತು.

ವರ್ತಕರಿಂದಲೇ ಸ್ವಚ್ಛವಾಗಿರುವ ಗುತ್ತಿಗಾರು ಪೇಟೆ
ಸ್ವಚ್ಛತಾ ಜಾಗೃತಿ ಪರಿಣಾಮ

ಇನ್ನೀಗ ಸಾರ್ವಜನಿಕರ ನೆರವು ಅತೀ ಅಗತ್ಯವಾಗಿ ಬೇಕಿದೆ. ಸ್ವಚ್ಛ ಗುತ್ತಿಗಾರು ಅಭಿಯಾನಕ್ಕೆ ಸಾರ್ವಜನಿಕರು ನೆರವು ನೀಡಬೇಕಾಗಿದೆ. ಸ್ವಚ್ಛತೆಗಾಗಿ ತಮ್ಮದೇ ಆದ ಕೊಡುಗೆಗಳ ಕಡೆಗೆ ಗಮನಹರಿಸಬೇಕಿದೆ. ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಕಸದ ತೊಟ್ಟಿಗಳಲ್ಲಿ ಎಸೆಯುವ ಅಭ್ಯಾಸ ಮಾಡಿಕೊಳ್ಳಬೇಕಿದೆ. ಅದರ ಜೊತೆಗೆ ಪ್ಲಾಸ್ಟಿಕ್‌ ಬದಲಿಗೆ ಬಟ್ಟೆ ಚೀಲಗಳ ಬಳಕೆಯತ್ತ ಮನಸ್ಸು ಮಾಡಬೇಕಿದೆ.

ಇದರ ಜೊತೆಗೆ ಅತೀ ಮುಖ್ಯವಾಗಿ ಗ್ರಾಮ ಪಂಚಾಯತ್‌ ಆಡಳಿತವು ಸಂಪೂರ್ಣವಾದ ನೆರವು ಈ ಟಾಸ್ಕ್‌ಫೋರ್ಸ್ ಯಾಚಿಸುತ್ತದೆ. 5 ವಾರಗಳ ಅಭಿಯಾನದ ಬಳಿಕ ಕಸ ಎಸೆದರೆ ದಂಡನೆ, ತ್ಯಾಜ್ಯ ಎಸೆಯದಂತೆ ಜಾಗೃತಿ ಫಲಕ, ದಂಡನೆಯ ಎಚ್ಚರಿಕೆ ಇತ್ಯಾದಿಗಳ ಕಾನೂನು ಕ್ರಮಗಳ ಬಗ್ಗೆ ಪಂಚಾಯತ್‌ ಮುತುವರ್ಜಿ ವಹಿಸಬೇಕಿದೆ. ಈ ಮೂಲಕ ದೇಶದ ಒಂದು ಪುಟ್ಟ ಹಳ್ಳಿಯ ಸ್ವಚ್ಛತಾ ಅಭಿಯಾನ, ಸ್ವಚ್ಛತಾ ಉದ್ದೇಶಗಳನ್ನು ಮಾದರಿಯಾಗಿಸುವ ಪಾತ್ರಕ್ಕೆ ಗ್ರಾಮ ಪಂಚಾಯತ್‌ ಹಾಗೂ ಇತರ ಆಡಳಿತಗಳ ನೆರವು ಬೇಕಿದೆ.

ವರ್ತಕರಿಂದಲೇ ಸ್ವಚ್ಛವಾಗಿರುವ ಗುತ್ತಿಗಾರು ಪೇಟೆ
ಗುತ್ತಿಗಾರು ಪೇಟೆಯ ದೃಶ್ಯ
ವರ್ತಕರಿಂದಲೇ ಸ್ವಚ್ಛವಾಗಿರುವ ಗುತ್ತಿಗಾರು ಅಂಗಡಿ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

16 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago