Advertisement
ಸುದ್ದಿಗಳು

#SwachchBharath | ಪುಟ್ಟ ಹಳ್ಳಿಯ ಸ್ವಚ್ಛತಾ ಅಭಿಯಾನದ ಇಂಪ್ಯಾಕ್ಟ್….‌ | ಇನ್ನೀಗ ಬೇಕಿರುವುದು ಜನರ ಒಲವು… ಆಡಳಿತದ ನೆರವು.. |

Share

ಸ್ವಚ್ಛತಾ ಅಭಿಯಾನ, ಪ್ಲಾಸ್ಟಿಕ್‌ ಮುಕ್ತ ಗ್ರಾಮ ಈ ಕನಸುಗಳೊಂದಿಗೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಆರಂಭಗೊಂಡ ಟಾಸ್ಕ್‌ ಫೋರ್ಸ್‌ ಕೆಲಸ ಮುಂದುವರಿದಿದೆ. ಕಳೆದ 5 ವಾರಗಳಿಂದ ಪ್ರತೀ ವಾರ ಜಾಗೃತಿ ಅಭಿಯಾನ ನಡೆಸುತ್ತಿತ್ತು. ಇದೀಗ ಈ ಅಭಿಯಾನದ ಪರಿಣಾಮ ಗುತ್ತಿಗಾರಿನ ಪುಟ್ಟ ಹಳ್ಳಿಯಲ್ಲಿ ಕೆಲವು ಅಂಗಡಿಗಳ ಮುಂದೆ ಸ್ವಚ್ಛತೆಯ ಪರಿಣಾಮ ಕಂಡುಬಂದಿದೆ. ಗುತ್ತಿಗಾರಿನ ಬಹುತೇಕ ವರ್ತಕರು ಈ ಅಭಿಯಾನಕ್ಕೆ ಕೆಲಸ ಮೂಲಕ ಬೆಂಬಲ ಸೂಚಿಸಿದ್ದಾರೆ.

ವರ್ತಕರಿಂದಲೇ ಸ್ವಚ್ಛವಾಗಿರುವ ಗುತ್ತಿಗಾರು ಪೇಟೆ
ಹೊಂಬೆಳಕು ತಂಡದಿಂದ ಸ್ವಚ್ಛವಾಗಿರುವ ಬಸ್‌ ತಂಗುದಾಣ

ಗುತ್ತಿಗಾರಿನ ಸಂಜೀವಿನ ಮಹಿಳಾ ಒಕ್ಕೂಟ, ವರ್ತಕ ಸಂಘ ಗುತ್ತಿಗಾರು ಮತ್ತು ಗುತ್ತಿಗಾರು ಗ್ರಾಮ ಪಂಚಾಯತ್‌  ಹಾಗೂ ಇತರ ಎಲ್ಲಾ ಸಂಘಸಂಸ್ಥೆಗಳ ಮೂಲಕ ರಚನೆಗೊಂಡ ಟಾಸ್ಕ್‌ ಫೋರ್ಸ್‌ ಕಳೆದ 5 ವಾರಗಳಿಂದ ಗುತ್ತಿಗಾರು ಪೇಟೆಯಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ನಡೆಸುತ್ತಿತ್ತು. ಪ್ರತೀ ಗುರುವಾರ ಟಾಸ್ಕ್‌ ಫೋರ್ಸ್‌ ತಂಡ ಸದಸ್ಯರು ಗುತ್ತಿಗಾರು ಪೇಟೆಯಲ್ಲಿ ತೆರಳಿ ಅಂಗಡಿಗಳ ಮಾಲೀಕರಿಗೆ ಸ್ವಚ್ಛತಾ ಜಾಗೃತಿ ಬಗ್ಗೆ ತಿಳಿಸುತ್ತಿದ್ದರು. ಪ್ಲಾಸ್ಟಿಕ್‌ ಮುಕ್ತ ಗ್ರಾಮಕ್ಕಾಗಿ ಕೆಲಸ ಮಾಡುತ್ತಿದ್ದರು. ಇದೀಗ 5 ನೇ ವಾರದ ಅಭಿಯಾನದ ವೇಳೆ ಬಹುತೇಕ ವರ್ತಕರು ಈ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದು ಕಂಡುಬಂದಿದೆ. ಅಂಗಡಿಗಳ ಮುಂದೆ ಸ್ವಚ್ಛತೆಯನ್ನು ಕಾಯ್ದುಕೊಂಡಿರುವುದು ಕಂಡುಬಂದಿದೆ. ಸ್ವಚ್ಛ ಗುತ್ತಿಗಾರು ಯೋಜನೆಗೆ ಅಗತ್ಯ ಎನ್ನುವುದನ್ನೂ ಹೇಳುತ್ತಿದ್ದಾರೆ. ಇದೇ ವೇಳೆ ವಿವಿಧ ಸಂಘಸಂಸ್ಥೆಗಳೂ ಸ್ವಚ್ಛತಾ ಅಭಿಯಾನಕ್ಕೆ ಬೆಂಬಲಿಸಿದ್ದಾರೆ. ಸ್ವಯಂಪ್ರೇರಿತರಾಗಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಸಂಘಟನೆಗಳು ಅವರ ಬಿಡುವಿನ ವೇಳೆ ತಮ್ಮದೇ ಮಾದರಿಯಲ್ಲಿ ಕೆಲಸ ಮಾಡುತ್ತಿವೆ.  ಹೊಂಬೆಳಕು ತಂಡವು ಈಚೆಗೆ ಬಸ್‌ ನಿಲ್ದಾಣ ಸ್ವಚ್ಛತೆಯನ್ನು ಮಾಡಿದ್ದರೆ , ಬಿಎಂಎಸ್‌ ಅಟೋ ಚಾಲಕರ ಸಂಘವು ಕೂಡಾ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿತ್ತು. ಜೀಪು ಚಾಲಕರ ಸಂಘವು ಕೂಡಾ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿತ್ತು.

ವರ್ತಕರಿಂದಲೇ ಸ್ವಚ್ಛವಾಗಿರುವ ಗುತ್ತಿಗಾರು ಪೇಟೆ
ಸ್ವಚ್ಛತಾ ಜಾಗೃತಿ ಪರಿಣಾಮ

ಇನ್ನೀಗ ಸಾರ್ವಜನಿಕರ ನೆರವು ಅತೀ ಅಗತ್ಯವಾಗಿ ಬೇಕಿದೆ. ಸ್ವಚ್ಛ ಗುತ್ತಿಗಾರು ಅಭಿಯಾನಕ್ಕೆ ಸಾರ್ವಜನಿಕರು ನೆರವು ನೀಡಬೇಕಾಗಿದೆ. ಸ್ವಚ್ಛತೆಗಾಗಿ ತಮ್ಮದೇ ಆದ ಕೊಡುಗೆಗಳ ಕಡೆಗೆ ಗಮನಹರಿಸಬೇಕಿದೆ. ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಕಸದ ತೊಟ್ಟಿಗಳಲ್ಲಿ ಎಸೆಯುವ ಅಭ್ಯಾಸ ಮಾಡಿಕೊಳ್ಳಬೇಕಿದೆ. ಅದರ ಜೊತೆಗೆ ಪ್ಲಾಸ್ಟಿಕ್‌ ಬದಲಿಗೆ ಬಟ್ಟೆ ಚೀಲಗಳ ಬಳಕೆಯತ್ತ ಮನಸ್ಸು ಮಾಡಬೇಕಿದೆ.

ಇದರ ಜೊತೆಗೆ ಅತೀ ಮುಖ್ಯವಾಗಿ ಗ್ರಾಮ ಪಂಚಾಯತ್‌ ಆಡಳಿತವು ಸಂಪೂರ್ಣವಾದ ನೆರವು ಈ ಟಾಸ್ಕ್‌ಫೋರ್ಸ್ ಯಾಚಿಸುತ್ತದೆ. 5 ವಾರಗಳ ಅಭಿಯಾನದ ಬಳಿಕ ಕಸ ಎಸೆದರೆ ದಂಡನೆ, ತ್ಯಾಜ್ಯ ಎಸೆಯದಂತೆ ಜಾಗೃತಿ ಫಲಕ, ದಂಡನೆಯ ಎಚ್ಚರಿಕೆ ಇತ್ಯಾದಿಗಳ ಕಾನೂನು ಕ್ರಮಗಳ ಬಗ್ಗೆ ಪಂಚಾಯತ್‌ ಮುತುವರ್ಜಿ ವಹಿಸಬೇಕಿದೆ. ಈ ಮೂಲಕ ದೇಶದ ಒಂದು ಪುಟ್ಟ ಹಳ್ಳಿಯ ಸ್ವಚ್ಛತಾ ಅಭಿಯಾನ, ಸ್ವಚ್ಛತಾ ಉದ್ದೇಶಗಳನ್ನು ಮಾದರಿಯಾಗಿಸುವ ಪಾತ್ರಕ್ಕೆ ಗ್ರಾಮ ಪಂಚಾಯತ್‌ ಹಾಗೂ ಇತರ ಆಡಳಿತಗಳ ನೆರವು ಬೇಕಿದೆ.

ವರ್ತಕರಿಂದಲೇ ಸ್ವಚ್ಛವಾಗಿರುವ ಗುತ್ತಿಗಾರು ಪೇಟೆ
ಗುತ್ತಿಗಾರು ಪೇಟೆಯ ದೃಶ್ಯ
ವರ್ತಕರಿಂದಲೇ ಸ್ವಚ್ಛವಾಗಿರುವ ಗುತ್ತಿಗಾರು ಅಂಗಡಿ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

9 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

9 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago