Advertisement
ಸುದ್ದಿಗಳು

#SwachchBharath | ಪುಟ್ಟ ಹಳ್ಳಿಯ ಸ್ವಚ್ಛತಾ ಅಭಿಯಾನದ ಇಂಪ್ಯಾಕ್ಟ್….‌ | ಇನ್ನೀಗ ಬೇಕಿರುವುದು ಜನರ ಒಲವು… ಆಡಳಿತದ ನೆರವು.. |

Share

ಸ್ವಚ್ಛತಾ ಅಭಿಯಾನ, ಪ್ಲಾಸ್ಟಿಕ್‌ ಮುಕ್ತ ಗ್ರಾಮ ಈ ಕನಸುಗಳೊಂದಿಗೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಆರಂಭಗೊಂಡ ಟಾಸ್ಕ್‌ ಫೋರ್ಸ್‌ ಕೆಲಸ ಮುಂದುವರಿದಿದೆ. ಕಳೆದ 5 ವಾರಗಳಿಂದ ಪ್ರತೀ ವಾರ ಜಾಗೃತಿ ಅಭಿಯಾನ ನಡೆಸುತ್ತಿತ್ತು. ಇದೀಗ ಈ ಅಭಿಯಾನದ ಪರಿಣಾಮ ಗುತ್ತಿಗಾರಿನ ಪುಟ್ಟ ಹಳ್ಳಿಯಲ್ಲಿ ಕೆಲವು ಅಂಗಡಿಗಳ ಮುಂದೆ ಸ್ವಚ್ಛತೆಯ ಪರಿಣಾಮ ಕಂಡುಬಂದಿದೆ. ಗುತ್ತಿಗಾರಿನ ಬಹುತೇಕ ವರ್ತಕರು ಈ ಅಭಿಯಾನಕ್ಕೆ ಕೆಲಸ ಮೂಲಕ ಬೆಂಬಲ ಸೂಚಿಸಿದ್ದಾರೆ.

ವರ್ತಕರಿಂದಲೇ ಸ್ವಚ್ಛವಾಗಿರುವ ಗುತ್ತಿಗಾರು ಪೇಟೆ
ಹೊಂಬೆಳಕು ತಂಡದಿಂದ ಸ್ವಚ್ಛವಾಗಿರುವ ಬಸ್‌ ತಂಗುದಾಣ

ಗುತ್ತಿಗಾರಿನ ಸಂಜೀವಿನ ಮಹಿಳಾ ಒಕ್ಕೂಟ, ವರ್ತಕ ಸಂಘ ಗುತ್ತಿಗಾರು ಮತ್ತು ಗುತ್ತಿಗಾರು ಗ್ರಾಮ ಪಂಚಾಯತ್‌  ಹಾಗೂ ಇತರ ಎಲ್ಲಾ ಸಂಘಸಂಸ್ಥೆಗಳ ಮೂಲಕ ರಚನೆಗೊಂಡ ಟಾಸ್ಕ್‌ ಫೋರ್ಸ್‌ ಕಳೆದ 5 ವಾರಗಳಿಂದ ಗುತ್ತಿಗಾರು ಪೇಟೆಯಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ನಡೆಸುತ್ತಿತ್ತು. ಪ್ರತೀ ಗುರುವಾರ ಟಾಸ್ಕ್‌ ಫೋರ್ಸ್‌ ತಂಡ ಸದಸ್ಯರು ಗುತ್ತಿಗಾರು ಪೇಟೆಯಲ್ಲಿ ತೆರಳಿ ಅಂಗಡಿಗಳ ಮಾಲೀಕರಿಗೆ ಸ್ವಚ್ಛತಾ ಜಾಗೃತಿ ಬಗ್ಗೆ ತಿಳಿಸುತ್ತಿದ್ದರು. ಪ್ಲಾಸ್ಟಿಕ್‌ ಮುಕ್ತ ಗ್ರಾಮಕ್ಕಾಗಿ ಕೆಲಸ ಮಾಡುತ್ತಿದ್ದರು. ಇದೀಗ 5 ನೇ ವಾರದ ಅಭಿಯಾನದ ವೇಳೆ ಬಹುತೇಕ ವರ್ತಕರು ಈ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದು ಕಂಡುಬಂದಿದೆ. ಅಂಗಡಿಗಳ ಮುಂದೆ ಸ್ವಚ್ಛತೆಯನ್ನು ಕಾಯ್ದುಕೊಂಡಿರುವುದು ಕಂಡುಬಂದಿದೆ. ಸ್ವಚ್ಛ ಗುತ್ತಿಗಾರು ಯೋಜನೆಗೆ ಅಗತ್ಯ ಎನ್ನುವುದನ್ನೂ ಹೇಳುತ್ತಿದ್ದಾರೆ. ಇದೇ ವೇಳೆ ವಿವಿಧ ಸಂಘಸಂಸ್ಥೆಗಳೂ ಸ್ವಚ್ಛತಾ ಅಭಿಯಾನಕ್ಕೆ ಬೆಂಬಲಿಸಿದ್ದಾರೆ. ಸ್ವಯಂಪ್ರೇರಿತರಾಗಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಸಂಘಟನೆಗಳು ಅವರ ಬಿಡುವಿನ ವೇಳೆ ತಮ್ಮದೇ ಮಾದರಿಯಲ್ಲಿ ಕೆಲಸ ಮಾಡುತ್ತಿವೆ.  ಹೊಂಬೆಳಕು ತಂಡವು ಈಚೆಗೆ ಬಸ್‌ ನಿಲ್ದಾಣ ಸ್ವಚ್ಛತೆಯನ್ನು ಮಾಡಿದ್ದರೆ , ಬಿಎಂಎಸ್‌ ಅಟೋ ಚಾಲಕರ ಸಂಘವು ಕೂಡಾ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿತ್ತು. ಜೀಪು ಚಾಲಕರ ಸಂಘವು ಕೂಡಾ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿತ್ತು.

ವರ್ತಕರಿಂದಲೇ ಸ್ವಚ್ಛವಾಗಿರುವ ಗುತ್ತಿಗಾರು ಪೇಟೆ
ಸ್ವಚ್ಛತಾ ಜಾಗೃತಿ ಪರಿಣಾಮ

ಇನ್ನೀಗ ಸಾರ್ವಜನಿಕರ ನೆರವು ಅತೀ ಅಗತ್ಯವಾಗಿ ಬೇಕಿದೆ. ಸ್ವಚ್ಛ ಗುತ್ತಿಗಾರು ಅಭಿಯಾನಕ್ಕೆ ಸಾರ್ವಜನಿಕರು ನೆರವು ನೀಡಬೇಕಾಗಿದೆ. ಸ್ವಚ್ಛತೆಗಾಗಿ ತಮ್ಮದೇ ಆದ ಕೊಡುಗೆಗಳ ಕಡೆಗೆ ಗಮನಹರಿಸಬೇಕಿದೆ. ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಕಸದ ತೊಟ್ಟಿಗಳಲ್ಲಿ ಎಸೆಯುವ ಅಭ್ಯಾಸ ಮಾಡಿಕೊಳ್ಳಬೇಕಿದೆ. ಅದರ ಜೊತೆಗೆ ಪ್ಲಾಸ್ಟಿಕ್‌ ಬದಲಿಗೆ ಬಟ್ಟೆ ಚೀಲಗಳ ಬಳಕೆಯತ್ತ ಮನಸ್ಸು ಮಾಡಬೇಕಿದೆ.

ಇದರ ಜೊತೆಗೆ ಅತೀ ಮುಖ್ಯವಾಗಿ ಗ್ರಾಮ ಪಂಚಾಯತ್‌ ಆಡಳಿತವು ಸಂಪೂರ್ಣವಾದ ನೆರವು ಈ ಟಾಸ್ಕ್‌ಫೋರ್ಸ್ ಯಾಚಿಸುತ್ತದೆ. 5 ವಾರಗಳ ಅಭಿಯಾನದ ಬಳಿಕ ಕಸ ಎಸೆದರೆ ದಂಡನೆ, ತ್ಯಾಜ್ಯ ಎಸೆಯದಂತೆ ಜಾಗೃತಿ ಫಲಕ, ದಂಡನೆಯ ಎಚ್ಚರಿಕೆ ಇತ್ಯಾದಿಗಳ ಕಾನೂನು ಕ್ರಮಗಳ ಬಗ್ಗೆ ಪಂಚಾಯತ್‌ ಮುತುವರ್ಜಿ ವಹಿಸಬೇಕಿದೆ. ಈ ಮೂಲಕ ದೇಶದ ಒಂದು ಪುಟ್ಟ ಹಳ್ಳಿಯ ಸ್ವಚ್ಛತಾ ಅಭಿಯಾನ, ಸ್ವಚ್ಛತಾ ಉದ್ದೇಶಗಳನ್ನು ಮಾದರಿಯಾಗಿಸುವ ಪಾತ್ರಕ್ಕೆ ಗ್ರಾಮ ಪಂಚಾಯತ್‌ ಹಾಗೂ ಇತರ ಆಡಳಿತಗಳ ನೆರವು ಬೇಕಿದೆ.

ವರ್ತಕರಿಂದಲೇ ಸ್ವಚ್ಛವಾಗಿರುವ ಗುತ್ತಿಗಾರು ಪೇಟೆ
ಗುತ್ತಿಗಾರು ಪೇಟೆಯ ದೃಶ್ಯ
ವರ್ತಕರಿಂದಲೇ ಸ್ವಚ್ಛವಾಗಿರುವ ಗುತ್ತಿಗಾರು ಅಂಗಡಿ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

7 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

19 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

2 days ago