ಧಾರ್ಮಿಕ

ಗುತ್ತಿಗಾರು : ವಸಂತ ವೇದ ಶಿಬಿರ ಉದ್ಘಾಟನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುತ್ತಿಗಾರಿನ ಅನೂಚಾನ ವಿದ್ಯಾ ಪ್ರತಿಷ್ಟಾನ  ಹಾಗೂ  ಗುತ್ತಿಗಾರು ಹವ್ಯಕ ವಲಯ ಇದರ ಆಶ್ರಯದಲ್ಲಿ  ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ವಸಂತ ವೇದ ಶಿಬಿರ ಮತ್ತು ಗಾಯತ್ರೀ ಯಜ್ಞ ಪ್ರಾರಂಭವು ನಡೆಯಿತು. ವೇ.ಮೂ.ಕರುವಜೆ ಕೇಶವ ಜೋಯಿಸರು ಶಿಬಿರವನ್ನು ಉದ್ಘಾಟಿಸಿದರು.

Advertisement

ವೇದ ಪರಂಪರೆ ಹಾಗೂ ಭಾರತೀಯ ಪರಂಪರೆಯ ಉಳಿವಿನ ಉದ್ದೇಶದೊಂದಿಗೆ ಕಳೆದ ಹಲವು ವರ್ಷಗಳಿಂದ ವಳಲಂಬೆಯಲ್ಲಿ ನಡೆದುಕೊಂಡು ಬರುತ್ತಿರುವ ವಸಂತ ವೇದ ಶಿಬಿರವು ಶುಕ್ರವಾರ ವಳಲಂಬೆಯಲ್ಲಿ ಉದ್ಘಾಟನೆಗೊಂಡಿತು. ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸಹಕಾರದೊಂದಿಗೆ ಗುತ್ತಿಗಾರಿನ ಅನೂಚಾನ ವಿದ್ಯಾಪ್ರತಿಷ್ಟಾನ  ಹಾಗೂ  ಗುತ್ತಿಗಾರು ಹವ್ಯಕ ವಲಯ ಇದರ ಆಶ್ರಯದಲ್ಲಿ 20  ದಿನಗಳ ಕಾಲ ನಡೆಯುವ ವಸಂತ ವೇದ ಶಿಬಿರವನ್ನು  ಉದ್ಘಾಟಿಸಿದ ವೇ.ಮೂ.ಕರುವಜೆ ಕೇಶವ ಜೋಯಿಸರು, ಶ್ರದ್ಧಾ, ಮೇಧ, ಪ್ರಜ್ಞಾ ಶಕ್ತಿಯನ್ನು ವಿದ್ಯಾರ್ಥಿಗಳು ಹೆಚ್ಚಿಸಿಕೊಳ್ಳುವ ಮೂಲಕ ಅಂತ:ಶಕ್ತಿ, ಚೈತನ್ಯವನ್ನು ವೃದ್ಧಿಸಿಕೊಳ್ಳಬೇಕು. ಈ ಮೂಲಕ ಜಗತ್ತಿಗೆ ಒಳಿತಾಗುವಂತಹ ಕಾರ್ಯಗಳನ್ನು ಮಾಡಬೇಕಾಗಿದೆ. ವೇದದ ಅಧ್ಯಯನ ಹಾಗೂ ಪಠಣದ ಮೂಲಕ, ನಿತ್ಯಾನುಷ್ಟಾನಗಳ ಮೂಲಕ ಮಾನಸಿಕವಾದ ದೃಢತೆಯನ್ನು , ಚೈತನ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.

ಸಭಾಧ್ಯಕ್ಷತೆಯನ್ನು ವಹಿಸಿದ್ದ ಅನೂಚಾನ ವಿದ್ಯಾಪ್ರತಿಷ್ಟಾನ ಅಧ್ಯಕ್ಷ ಕೃಷ್ಣ ಭಟ್‌ ಗುಂಡಿಮಜಲು ಮಾತನಾಡಿ, ಕೊರೋನಾ ನಂತರ ಎರಡು ವರ್ಷಗಳ ಕಾಲ ವೇದ ಶಿಬಿರದ ಆಯೋಜನೆ ಸಾಧ್ಯವಾಗಿರಲಿಲ್ಲ. ಸಮಾಜದ ಎಲ್ಲರ ಸಹಕಾರ ಅಗತ್ಯವಿದೆ ಎಂದರು.

ವೇದಿಕೆಯಲ್ಲಿ ಅನೂಚಾನ ವಿದ್ಯಾಪ್ರತಿಷ್ಟಾನದ ಪ್ರಾಚಾರ್ಯ ವೇ.ಮೂ.ಮಹಾಬಲೇಶ್ವರ ಭಟ್‌ ಉಪಸ್ಥಿತರಿದ್ದರು.  ಪ್ರತಿಷ್ಟಾನದ ಕಾರ್ಯದರ್ಶಿ ಶಿವರಾಮ ಕರುವಜೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಕಾರ್ಯಕ್ರಮಕ್ಕೂ ಮುನ್ನ ವೇ.ಮೂ.ಕರುವಜೆ ಕೇಶವ ಜೋಯಿಸರ ನೇತೃತ್ವದಲ್ಲಿ ಗಾಯತ್ರೀ  ಯಜ್ಞದ ಮಹಾಸಂಕಲ್ಪ ನೆರವೇರಿತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

4 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ…

5 hours ago

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

9 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

1 day ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago