Advertisement
ಧಾರ್ಮಿಕ

ಗುತ್ತಿಗಾರು : ವಸಂತ ವೇದ ಶಿಬಿರ ಉದ್ಘಾಟನೆ

Share

ಗುತ್ತಿಗಾರಿನ ಅನೂಚಾನ ವಿದ್ಯಾ ಪ್ರತಿಷ್ಟಾನ  ಹಾಗೂ  ಗುತ್ತಿಗಾರು ಹವ್ಯಕ ವಲಯ ಇದರ ಆಶ್ರಯದಲ್ಲಿ  ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ವಸಂತ ವೇದ ಶಿಬಿರ ಮತ್ತು ಗಾಯತ್ರೀ ಯಜ್ಞ ಪ್ರಾರಂಭವು ನಡೆಯಿತು. ವೇ.ಮೂ.ಕರುವಜೆ ಕೇಶವ ಜೋಯಿಸರು ಶಿಬಿರವನ್ನು ಉದ್ಘಾಟಿಸಿದರು.

ವೇದ ಪರಂಪರೆ ಹಾಗೂ ಭಾರತೀಯ ಪರಂಪರೆಯ ಉಳಿವಿನ ಉದ್ದೇಶದೊಂದಿಗೆ ಕಳೆದ ಹಲವು ವರ್ಷಗಳಿಂದ ವಳಲಂಬೆಯಲ್ಲಿ ನಡೆದುಕೊಂಡು ಬರುತ್ತಿರುವ ವಸಂತ ವೇದ ಶಿಬಿರವು ಶುಕ್ರವಾರ ವಳಲಂಬೆಯಲ್ಲಿ ಉದ್ಘಾಟನೆಗೊಂಡಿತು. ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸಹಕಾರದೊಂದಿಗೆ ಗುತ್ತಿಗಾರಿನ ಅನೂಚಾನ ವಿದ್ಯಾಪ್ರತಿಷ್ಟಾನ  ಹಾಗೂ  ಗುತ್ತಿಗಾರು ಹವ್ಯಕ ವಲಯ ಇದರ ಆಶ್ರಯದಲ್ಲಿ 20  ದಿನಗಳ ಕಾಲ ನಡೆಯುವ ವಸಂತ ವೇದ ಶಿಬಿರವನ್ನು  ಉದ್ಘಾಟಿಸಿದ ವೇ.ಮೂ.ಕರುವಜೆ ಕೇಶವ ಜೋಯಿಸರು, ಶ್ರದ್ಧಾ, ಮೇಧ, ಪ್ರಜ್ಞಾ ಶಕ್ತಿಯನ್ನು ವಿದ್ಯಾರ್ಥಿಗಳು ಹೆಚ್ಚಿಸಿಕೊಳ್ಳುವ ಮೂಲಕ ಅಂತ:ಶಕ್ತಿ, ಚೈತನ್ಯವನ್ನು ವೃದ್ಧಿಸಿಕೊಳ್ಳಬೇಕು. ಈ ಮೂಲಕ ಜಗತ್ತಿಗೆ ಒಳಿತಾಗುವಂತಹ ಕಾರ್ಯಗಳನ್ನು ಮಾಡಬೇಕಾಗಿದೆ. ವೇದದ ಅಧ್ಯಯನ ಹಾಗೂ ಪಠಣದ ಮೂಲಕ, ನಿತ್ಯಾನುಷ್ಟಾನಗಳ ಮೂಲಕ ಮಾನಸಿಕವಾದ ದೃಢತೆಯನ್ನು , ಚೈತನ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.

Advertisement

ಸಭಾಧ್ಯಕ್ಷತೆಯನ್ನು ವಹಿಸಿದ್ದ ಅನೂಚಾನ ವಿದ್ಯಾಪ್ರತಿಷ್ಟಾನ ಅಧ್ಯಕ್ಷ ಕೃಷ್ಣ ಭಟ್‌ ಗುಂಡಿಮಜಲು ಮಾತನಾಡಿ, ಕೊರೋನಾ ನಂತರ ಎರಡು ವರ್ಷಗಳ ಕಾಲ ವೇದ ಶಿಬಿರದ ಆಯೋಜನೆ ಸಾಧ್ಯವಾಗಿರಲಿಲ್ಲ. ಸಮಾಜದ ಎಲ್ಲರ ಸಹಕಾರ ಅಗತ್ಯವಿದೆ ಎಂದರು.

ವೇದಿಕೆಯಲ್ಲಿ ಅನೂಚಾನ ವಿದ್ಯಾಪ್ರತಿಷ್ಟಾನದ ಪ್ರಾಚಾರ್ಯ ವೇ.ಮೂ.ಮಹಾಬಲೇಶ್ವರ ಭಟ್‌ ಉಪಸ್ಥಿತರಿದ್ದರು.  ಪ್ರತಿಷ್ಟಾನದ ಕಾರ್ಯದರ್ಶಿ ಶಿವರಾಮ ಕರುವಜೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಕಾರ್ಯಕ್ರಮಕ್ಕೂ ಮುನ್ನ ವೇ.ಮೂ.ಕರುವಜೆ ಕೇಶವ ಜೋಯಿಸರ ನೇತೃತ್ವದಲ್ಲಿ ಗಾಯತ್ರೀ  ಯಜ್ಞದ ಮಹಾಸಂಕಲ್ಪ ನೆರವೇರಿತು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…

6 hours ago

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

1 day ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

1 day ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

2 days ago