ಗುತ್ತಿಗಾರು ಗ್ರಾಮದ ಬಳ್ಳಕ್ಕದ ಕಾಲನಿಯ ಕೆಲವು ಮನೆಗಳಿಗೆ ಗ್ರಾಪಂ ವತಿಯಿಂದ ನಿರ್ಮಾಣವಾದ ಕುಡಿಯುವ ನೀರಿನ ವ್ಯವಸ್ಥೆಗೆ ಚಾಲನೆ ನೀಡಲಾಯಿತು. ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ, ಭರತ್ ಕಮಿಲ ಹಾಗೂ ವಸಂತ ಮೊಗ್ರ ಉಪಸ್ಥಿತರಿದ್ದರು.
ಗುತ್ತಿಗಾರು ಗ್ರಾಮದ ಬಳ್ಳಕ್ಕದ ಕಾಲನಿಯ ಕೆಲವು ಮನೆಗಳಿಗೆ ಹಲವು ವರ್ಷಗಳಿಂದ ಕುಡಿಯುವ ನೀರಿನ ವ್ಯವಸ್ಥೆ ಇದ್ದಿರಲಿಲ್ಲ. ಸಮೀಪದ ಹೊಳೆಯಿಂದ ಅಥವಾ ಆಸುಪಾಸಿನ ಮನೆಗಳಿಂದ ನೀರನ್ನು ಹೊತ್ತ ತರಬೇಕಿತ್ತು. ಮಳೆಗಾಲ ಹೊಳೆಯ ಕಲುಷಿತ ನೀರನ್ನೇ ಕುಡಿಯಬೇಕಾದ ಸ್ಥಿತಿ ಇತ್ತು. ಈ ಬಗ್ಗೆ ಗ್ರಾಪಂ ಯೋಜನೆಯನ್ನು ಬಳಸಿಕೊಂಡು ಗ್ರಾಪಂ ಸದಸ್ಯರು ಈ ಮನೆಗಳಿಗೆ ಕುಡಿಯುವ ನೀರಿಗೆ ವ್ಯವಸ್ಥೆ ಮಾಡಿದರು. ಶುಕ್ರವಾರ ಮನೆಗಳಿಗೆ ನೀರಿನ ಬಳಕೆಗೆ ವ್ಯವಸ್ಥೆ ಮಾಡಲಾಯಿತು. ಈ ಸಂದರ್ಭ ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ, ಭರತ್ ಕಮಿಲ ಹಾಗೂ ವಸಂತ ಮೊಗ್ರ , ಗ್ರಾಮ ಭಾರತ ತಂಡದ ಸಂಚಾಲಕ ಸುಧಾಕರ ಮಲ್ಕಜೆ, ಪ್ರಮುಖರಾದ ಬಿಟ್ಟಿ ನೆಡುನೀಲಂ, ಮಹೇಶ್ ಪುಚ್ಚಪ್ಪಾಡಿ, ಕಾಮಗಾರಿ ನಡೆಸಿದ ಅಚ್ಚುತ ಮಲ್ಕಜೆ ಹಾಗೂ ಸ್ಥಳೀಯರಾದ ಕುಸುಮಾಧರ, ವಿಶ್ವನಾಥ ಮೊದಲಾದವರು ಇದ್ದರು.
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…