ಗುತ್ತಿಗಾರು ಗ್ರಾಮದ ಬಳ್ಳಕ್ಕದ ಕಾಲನಿಯ ಕೆಲವು ಮನೆಗಳಿಗೆ ಗ್ರಾಪಂ ವತಿಯಿಂದ ನಿರ್ಮಾಣವಾದ ಕುಡಿಯುವ ನೀರಿನ ವ್ಯವಸ್ಥೆಗೆ ಚಾಲನೆ ನೀಡಲಾಯಿತು. ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ, ಭರತ್ ಕಮಿಲ ಹಾಗೂ ವಸಂತ ಮೊಗ್ರ ಉಪಸ್ಥಿತರಿದ್ದರು.
ಗುತ್ತಿಗಾರು ಗ್ರಾಮದ ಬಳ್ಳಕ್ಕದ ಕಾಲನಿಯ ಕೆಲವು ಮನೆಗಳಿಗೆ ಹಲವು ವರ್ಷಗಳಿಂದ ಕುಡಿಯುವ ನೀರಿನ ವ್ಯವಸ್ಥೆ ಇದ್ದಿರಲಿಲ್ಲ. ಸಮೀಪದ ಹೊಳೆಯಿಂದ ಅಥವಾ ಆಸುಪಾಸಿನ ಮನೆಗಳಿಂದ ನೀರನ್ನು ಹೊತ್ತ ತರಬೇಕಿತ್ತು. ಮಳೆಗಾಲ ಹೊಳೆಯ ಕಲುಷಿತ ನೀರನ್ನೇ ಕುಡಿಯಬೇಕಾದ ಸ್ಥಿತಿ ಇತ್ತು. ಈ ಬಗ್ಗೆ ಗ್ರಾಪಂ ಯೋಜನೆಯನ್ನು ಬಳಸಿಕೊಂಡು ಗ್ರಾಪಂ ಸದಸ್ಯರು ಈ ಮನೆಗಳಿಗೆ ಕುಡಿಯುವ ನೀರಿಗೆ ವ್ಯವಸ್ಥೆ ಮಾಡಿದರು. ಶುಕ್ರವಾರ ಮನೆಗಳಿಗೆ ನೀರಿನ ಬಳಕೆಗೆ ವ್ಯವಸ್ಥೆ ಮಾಡಲಾಯಿತು. ಈ ಸಂದರ್ಭ ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ, ಭರತ್ ಕಮಿಲ ಹಾಗೂ ವಸಂತ ಮೊಗ್ರ , ಗ್ರಾಮ ಭಾರತ ತಂಡದ ಸಂಚಾಲಕ ಸುಧಾಕರ ಮಲ್ಕಜೆ, ಪ್ರಮುಖರಾದ ಬಿಟ್ಟಿ ನೆಡುನೀಲಂ, ಮಹೇಶ್ ಪುಚ್ಚಪ್ಪಾಡಿ, ಕಾಮಗಾರಿ ನಡೆಸಿದ ಅಚ್ಚುತ ಮಲ್ಕಜೆ ಹಾಗೂ ಸ್ಥಳೀಯರಾದ ಕುಸುಮಾಧರ, ವಿಶ್ವನಾಥ ಮೊದಲಾದವರು ಇದ್ದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…