ಗುತ್ತಿಗಾರು ಗ್ರಾಮದ ಬಳ್ಳಕ್ಕದ ಕಾಲನಿಯ ಕೆಲವು ಮನೆಗಳಿಗೆ ಗ್ರಾಪಂ ವತಿಯಿಂದ ನಿರ್ಮಾಣವಾದ ಕುಡಿಯುವ ನೀರಿನ ವ್ಯವಸ್ಥೆಗೆ ಚಾಲನೆ ನೀಡಲಾಯಿತು. ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ, ಭರತ್ ಕಮಿಲ ಹಾಗೂ ವಸಂತ ಮೊಗ್ರ ಉಪಸ್ಥಿತರಿದ್ದರು.
ಗುತ್ತಿಗಾರು ಗ್ರಾಮದ ಬಳ್ಳಕ್ಕದ ಕಾಲನಿಯ ಕೆಲವು ಮನೆಗಳಿಗೆ ಹಲವು ವರ್ಷಗಳಿಂದ ಕುಡಿಯುವ ನೀರಿನ ವ್ಯವಸ್ಥೆ ಇದ್ದಿರಲಿಲ್ಲ. ಸಮೀಪದ ಹೊಳೆಯಿಂದ ಅಥವಾ ಆಸುಪಾಸಿನ ಮನೆಗಳಿಂದ ನೀರನ್ನು ಹೊತ್ತ ತರಬೇಕಿತ್ತು. ಮಳೆಗಾಲ ಹೊಳೆಯ ಕಲುಷಿತ ನೀರನ್ನೇ ಕುಡಿಯಬೇಕಾದ ಸ್ಥಿತಿ ಇತ್ತು. ಈ ಬಗ್ಗೆ ಗ್ರಾಪಂ ಯೋಜನೆಯನ್ನು ಬಳಸಿಕೊಂಡು ಗ್ರಾಪಂ ಸದಸ್ಯರು ಈ ಮನೆಗಳಿಗೆ ಕುಡಿಯುವ ನೀರಿಗೆ ವ್ಯವಸ್ಥೆ ಮಾಡಿದರು. ಶುಕ್ರವಾರ ಮನೆಗಳಿಗೆ ನೀರಿನ ಬಳಕೆಗೆ ವ್ಯವಸ್ಥೆ ಮಾಡಲಾಯಿತು. ಈ ಸಂದರ್ಭ ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ, ಭರತ್ ಕಮಿಲ ಹಾಗೂ ವಸಂತ ಮೊಗ್ರ , ಗ್ರಾಮ ಭಾರತ ತಂಡದ ಸಂಚಾಲಕ ಸುಧಾಕರ ಮಲ್ಕಜೆ, ಪ್ರಮುಖರಾದ ಬಿಟ್ಟಿ ನೆಡುನೀಲಂ, ಮಹೇಶ್ ಪುಚ್ಚಪ್ಪಾಡಿ, ಕಾಮಗಾರಿ ನಡೆಸಿದ ಅಚ್ಚುತ ಮಲ್ಕಜೆ ಹಾಗೂ ಸ್ಥಳೀಯರಾದ ಕುಸುಮಾಧರ, ವಿಶ್ವನಾಥ ಮೊದಲಾದವರು ಇದ್ದರು.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…