ಗುತ್ತಿಗಾರು ಗ್ರಾಮದ ಬಳ್ಳಕ್ಕದ ಕಾಲನಿಯ ಕೆಲವು ಮನೆಗಳಿಗೆ ಗ್ರಾಪಂ ವತಿಯಿಂದ ನಿರ್ಮಾಣವಾದ ಕುಡಿಯುವ ನೀರಿನ ವ್ಯವಸ್ಥೆಗೆ ಚಾಲನೆ ನೀಡಲಾಯಿತು. ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ, ಭರತ್ ಕಮಿಲ ಹಾಗೂ ವಸಂತ ಮೊಗ್ರ ಉಪಸ್ಥಿತರಿದ್ದರು.
ಗುತ್ತಿಗಾರು ಗ್ರಾಮದ ಬಳ್ಳಕ್ಕದ ಕಾಲನಿಯ ಕೆಲವು ಮನೆಗಳಿಗೆ ಹಲವು ವರ್ಷಗಳಿಂದ ಕುಡಿಯುವ ನೀರಿನ ವ್ಯವಸ್ಥೆ ಇದ್ದಿರಲಿಲ್ಲ. ಸಮೀಪದ ಹೊಳೆಯಿಂದ ಅಥವಾ ಆಸುಪಾಸಿನ ಮನೆಗಳಿಂದ ನೀರನ್ನು ಹೊತ್ತ ತರಬೇಕಿತ್ತು. ಮಳೆಗಾಲ ಹೊಳೆಯ ಕಲುಷಿತ ನೀರನ್ನೇ ಕುಡಿಯಬೇಕಾದ ಸ್ಥಿತಿ ಇತ್ತು. ಈ ಬಗ್ಗೆ ಗ್ರಾಪಂ ಯೋಜನೆಯನ್ನು ಬಳಸಿಕೊಂಡು ಗ್ರಾಪಂ ಸದಸ್ಯರು ಈ ಮನೆಗಳಿಗೆ ಕುಡಿಯುವ ನೀರಿಗೆ ವ್ಯವಸ್ಥೆ ಮಾಡಿದರು. ಶುಕ್ರವಾರ ಮನೆಗಳಿಗೆ ನೀರಿನ ಬಳಕೆಗೆ ವ್ಯವಸ್ಥೆ ಮಾಡಲಾಯಿತು. ಈ ಸಂದರ್ಭ ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ, ಭರತ್ ಕಮಿಲ ಹಾಗೂ ವಸಂತ ಮೊಗ್ರ , ಗ್ರಾಮ ಭಾರತ ತಂಡದ ಸಂಚಾಲಕ ಸುಧಾಕರ ಮಲ್ಕಜೆ, ಪ್ರಮುಖರಾದ ಬಿಟ್ಟಿ ನೆಡುನೀಲಂ, ಮಹೇಶ್ ಪುಚ್ಚಪ್ಪಾಡಿ, ಕಾಮಗಾರಿ ನಡೆಸಿದ ಅಚ್ಚುತ ಮಲ್ಕಜೆ ಹಾಗೂ ಸ್ಥಳೀಯರಾದ ಕುಸುಮಾಧರ, ವಿಶ್ವನಾಥ ಮೊದಲಾದವರು ಇದ್ದರು.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…