ಗುತ್ತಿಗಾರು ಗ್ರಾಮದ ಬಳ್ಳಕ್ಕದ ಕಾಲನಿಯ ಕೆಲವು ಮನೆಗಳಿಗೆ ಗ್ರಾಪಂ ವತಿಯಿಂದ ನಿರ್ಮಾಣವಾದ ಕುಡಿಯುವ ನೀರಿನ ವ್ಯವಸ್ಥೆಗೆ ಚಾಲನೆ ನೀಡಲಾಯಿತು. ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ, ಭರತ್ ಕಮಿಲ ಹಾಗೂ ವಸಂತ ಮೊಗ್ರ ಉಪಸ್ಥಿತರಿದ್ದರು.
ಗುತ್ತಿಗಾರು ಗ್ರಾಮದ ಬಳ್ಳಕ್ಕದ ಕಾಲನಿಯ ಕೆಲವು ಮನೆಗಳಿಗೆ ಹಲವು ವರ್ಷಗಳಿಂದ ಕುಡಿಯುವ ನೀರಿನ ವ್ಯವಸ್ಥೆ ಇದ್ದಿರಲಿಲ್ಲ. ಸಮೀಪದ ಹೊಳೆಯಿಂದ ಅಥವಾ ಆಸುಪಾಸಿನ ಮನೆಗಳಿಂದ ನೀರನ್ನು ಹೊತ್ತ ತರಬೇಕಿತ್ತು. ಮಳೆಗಾಲ ಹೊಳೆಯ ಕಲುಷಿತ ನೀರನ್ನೇ ಕುಡಿಯಬೇಕಾದ ಸ್ಥಿತಿ ಇತ್ತು. ಈ ಬಗ್ಗೆ ಗ್ರಾಪಂ ಯೋಜನೆಯನ್ನು ಬಳಸಿಕೊಂಡು ಗ್ರಾಪಂ ಸದಸ್ಯರು ಈ ಮನೆಗಳಿಗೆ ಕುಡಿಯುವ ನೀರಿಗೆ ವ್ಯವಸ್ಥೆ ಮಾಡಿದರು. ಶುಕ್ರವಾರ ಮನೆಗಳಿಗೆ ನೀರಿನ ಬಳಕೆಗೆ ವ್ಯವಸ್ಥೆ ಮಾಡಲಾಯಿತು. ಈ ಸಂದರ್ಭ ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ, ಭರತ್ ಕಮಿಲ ಹಾಗೂ ವಸಂತ ಮೊಗ್ರ , ಗ್ರಾಮ ಭಾರತ ತಂಡದ ಸಂಚಾಲಕ ಸುಧಾಕರ ಮಲ್ಕಜೆ, ಪ್ರಮುಖರಾದ ಬಿಟ್ಟಿ ನೆಡುನೀಲಂ, ಮಹೇಶ್ ಪುಚ್ಚಪ್ಪಾಡಿ, ಕಾಮಗಾರಿ ನಡೆಸಿದ ಅಚ್ಚುತ ಮಲ್ಕಜೆ ಹಾಗೂ ಸ್ಥಳೀಯರಾದ ಕುಸುಮಾಧರ, ವಿಶ್ವನಾಥ ಮೊದಲಾದವರು ಇದ್ದರು.
ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್…
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.
ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…
ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…