ಇದೆಲ್ಲದರ ಹೊರತಾಗಿಯೂ ಲಕ್ಷಾಂತರ ಅಡಿಕೆ ಬೆಳೆಗಾರರ ಜೀವನಾಡಿ, ಆರ್ಥಿಕ ಮೂಲವೂ ಆಗಿರುವ ಅಡಿಕೆ ಮಾರುಕಟ್ಟೆಯಲ್ಲಿ ಒಂದು ವೇಳೆ ಬೆಲೆ ಕುಸಿತ ಉಂಟಾದಲ್ಲಿ ಬೆಳೆಗಾರರನ್ನು ರಕ್ಷಿಸಲು ಮಾರುಕಟ್ಟೆ ಸ್ಥಿರೀಕರಣ ವ್ಯವಸ್ಥೆಯನ್ನು ಕೂಡಾ ಸರ್ಕಾರ ಪರಿಗಣನೆ ಮಾಡಬೇಕು. ನಿಷೇಧಿತ ತಂಬಾಕು–ನಿಕೋಟಿನ್ ಉತ್ಪನ್ನಗಳ ವಿರುದ್ಧದ ಕ್ರಮಕ್ಕೆ ಅಡಿಕೆ ಬೆಳೆಗಾರರ ಸಂಘದ ಯಾವುದೇ ವಿರೋಧವಿಲ್ಲ. ಅಡಿಕೆಯ ಪರ್ಯಾಯ ಬಳಕೆಯೂ ಈಗಾಗಲೇ ಇದೆ. ಅಡಿಕೆಯ ಸಿಹಿ ಸುಪಾರಿ, ಚಹಾ ಸೇರಿದಂತೆ ಇತರ ಉತ್ಪನ್ನಗಳೂ ಇವೆ. ಹೀಗಾಗಿ ಈಗ ಕ್ರಮದ ಹೆಸರಿನಲ್ಲಿ ಅಡಿಕೆ ಬೆಳೆಗಾರರು, ಅಡಿಕೆ ವ್ಯಾಪಾರಿಗಳು ಅಥವಾ ಕಾನೂನುಬದ್ಧ ಅಡಿಕೆ ಮಾರುಕಟ್ಟೆಗೆ ಅನಗತ್ಯ ತೊಂದರೆ ಉಂಟಾಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ಹೊರಡಿಸಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸುತ್ತದೆ ಎಂದು ಸಂಘದ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ ಹಾಗೂ ಕಾರ್ಯದರ್ಶಿ ಸಿ ಜಿ ವೆಂಕಟಗಿರೀಶ್ ತಿಳಿಸಿದ್ದಾರೆ.
ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ

