ಒಡಿಶಾದಲ್ಲಿ ಗುಟ್ಕಾ ನಿಷೇಧ ಜಾರಿಯಲ್ಲಿದ್ದರೂ, ಅಕ್ರಮ ವ್ಯಾಪಾರ ಮತ್ತು ತೆರಿಗೆ ತಪ್ಪಿಸುವ ಪ್ರಕರಣದ ಹಿನ್ನೆಲೆಯಲ್ಲಿ ಒಡಿಶಾದ ಸಂಬಲ್ಪುರ್ ಜಿಲ್ಲೆಯಲ್ಲಿ ಜಿಎಸ್ಟಿ ಅಧಿಕಾರಿಗಳು ಸುಮಾರು ₹2.40 ಕೋಟಿ ಮೌಲ್ಯದ ಗುಟ್ಕಾ ಸಾಗಾಟವನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣವು ನಿಷೇಧದ ನಡುವೆಯೂ ಗುಟ್ಕಾ ವ್ಯಾಪಾರ ಹೇಗೆ ನಡೆಯುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.
ಅಧಿಕಾರಿಗಳ ಪ್ರಕಾರ, ವಶಕ್ಕೆ ಪಡೆದ ಸರಕುಗಳನ್ನು ಜಿಎಸ್ಟಿ ಪಾವತಿಸದೇ ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಗುಟ್ಕಾ ಉತ್ಪನ್ನಗಳಿಗೆ ಸಾಮಾನ್ಯವಾಗಿ 18% ಜಿಎಸ್ಟಿ ತೆರಿಗೆ ಅನ್ವಯವಾಗುತ್ತದೆ. ಆದರೆ, ಈ ತೆರಿಗೆಯನ್ನು ತಪ್ಪಿಸುವ ಉದ್ದೇಶದಿಂದ ವ್ಯಾಪಾರಿಗಳು ದಾಖಲೆಗಳಿಲ್ಲದೇ ಸರಕು ಸಾಗಾಟ ನಡೆಸಿದ್ದಾರೆ ಎನ್ನಲಾಗಿದೆ.
ಒಡಿಶಾದಲ್ಲಿ ಗುಟ್ಕಾ ಮೇಲಿನ ನಿಷೇಧದಿಂದ ಬೇಡಿಕೆ ಕಡಿಮೆಯಾಗಿಲ್ಲ. ಹೀಗಾಗಿ ಅಕ್ರಮ ಮಾರ್ಗಗಳಿಂದ ಸರಕು ಸಾಗಾಟ ಮತ್ತು ಮಾರಾಟ ಮತ್ತಷ್ಟು ಹೆಚ್ಚುತ್ತಿದೆ ಎನ್ನುವುದು ಈ ಪ್ರಕರಣದಿಂದ ಸ್ಪಷ್ಟವಾಗಿದೆ. ಸಾರ್ವಜನಿಕ ಆರೋಗ್ಯವನ್ನು ಮುಂದಿಟ್ಟು ಗುಟ್ಕಾ ನಿಷೇಧ ಮಾಡಲಾಗಿತ್ತು. ಆದರೆ, ಗುಟ್ಕಾ ಅಕ್ರಮವಾಗಿ ಹರಿದಾಡುತ್ತಿದೆ, ಜೊತೆಗೆ ಸರ್ಕಾರಕ್ಕೆ ತೆರಿಗೆ ಆದಾಯದಲ್ಲೂ ದೊಡ್ಡ ನಷ್ಟ ಉಂಟಾಗಿದೆ.
ಜಿಎಸ್ಟಿ ಇಲಾಖೆ ಪ್ರಕರಣ ದಾಖಲಿಸಿಕೊಂಡಿದ್ದು, ಸರಕು ಸಾಗಾಟದಲ್ಲಿ ಭಾಗಿಯಾದವರನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ. ಅಧಿಕಾರಿಗಳು ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ವ್ಯಾಪಾರಗಳ ಮೇಲೆ ಇನ್ನಷ್ಟು ಕಠಿಣ ನಿಗಾ ವಹಿಸುವುದಾಗಿ ತಿಳಿಸಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…