ಮತ್ತೆ ಕಾಡುತ್ತಿದೆಯಾ ಮಹಾಮಾರಿ ಕೊರೋನಾ..? | ಹೆಚ್ಚಿನವರಿಗೆ ಕೆಮ್ಮು ನೆಗಡಿ ಬಾಧೆ..! | ಇದೇನು ಕೆಮ್ಮು, ನೆಗಡಿ ? | ಇರಲಿ ಎಚ್ಚರ |

March 5, 2023
12:05 PM

ಎರಡು ವರ್ಷಗಳ ಕಾಲ ಇಡೀ ವಿಶ್ವವನ್ನೆ ಹಿಂಡಿ ಹಿಪ್ಪೆ ಮಾಡಿದ್ದ  ಕೊರೋನಾ ಮಾಹಾಮಾರಿ ಮಾದರಿಯಲ್ಲೇ ಈಗ ಮತ್ತೆ ಶೀತ, ಕಫ ಒಕ್ಕರಿಸುವ ಭೀತಿ ಎದುರಾಗಿದೆ. ಆದರೆ ಈಗ ಕೊರೋನಾ ಇಲ್ಲ ಎಂದು ಹೇಳಲಾಗುತ್ತಿದೆ. ಆರೋಗ್ಯ ಇಲಾಖೆ ಕೂಡ ಈ ಬಗ್ಗೆ ಸ್ಪಷ್ಟನೆ ನೀಡುತ್ತಿದೆ. ಆದರೆ ಭಾರಿ ಸಂಖ್ಯೆಯಲ್ಲಿ ಜನ ಶೀತ, ಕೆಮ್ಮು ನೆಗಡಿಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ತಜ್ಞರು ಸಲಹೆ ನೀಡುತ್ತಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಸೋಮವಾರ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಸಭೆ ನಡೆಸುತ್ತಿದ್ದಾರೆ.

Advertisement

ದೇಶದಲ್ಲಿ ಹೊಸ ವೈರಾಣು ಎಚ್3ಎನ್2 ಪ್ರಬೇಧ ಪತ್ತೆಯಾಗಿದೆ. ಆದರೆ, ರಾಜ್ಯದಲ್ಲಿ ಇನ್ನೂ ಪತ್ತೆಯಾಗಿಲ್ಲ. ಈಗಾಗಲೇ ಅನುಸರಿಸಬೇಕಾದ ಕ್ರಮಗಳ ಕುರಿತು ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ನಾಳೆ ನಡೆಯುವ ಸಭೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು  ಎಂದು ಹೇಳಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಈ ವೈರಾಣುವಿನಿಂದ ದೀರ್ಘಾವಧಿಯ ಕೆಮ್ಮು ಇರಲಿದೆ. ಆದರೆ, ರಾಜ್ಯದಲ್ಲಿ ಎಚ್3ಎನ್2 ಪ್ರಭೇಧ ಪತ್ತೆಯಾಗಿಲ್ಲ, ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಈಗಿನ ಹವಾಮಾನ ವೈಪರೀತ್ಯದ ಕಾರಣದಿಂದ ಆರೋಗ್ಯದಲ್ಲೂ ವ್ಯತ್ಯಾಸ ಕಂಡುಬರುತ್ತಿದೆ. ವಿಪರೀತ ಉಷ್ಣತೆಯ ಕಾರಣದಿಂದ ಸಾಮಾನ್ಯವಾಗಿ ಈ ಸಮಯದಲ್ಲಿ ಜ್ವರ, ಕೆಮ್ಮು, ಕಫ ಕಂಡುಬರುತ್ತದೆ. ಆದರೆ ಎರಡು ವರ್ಷಗಳ ಹಿಂದೆ ಬಾಧಿಸಿರುವ ಕೊರೋನಾ ಈಗ ಎಲ್ಲದಕ್ಕೂ ಭಯ ತಂದಿರಿಸಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿದರೆ ಸಂಪೂರ್ಣ ಜಪ್ತಿ – ದೆಹಲಿ ಹೈಕೋರ್ಟ್
February 19, 2026
8:46 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ
February 19, 2026
12:29 PM
by: ಸಾಯಿಶೇಖರ್ ಕರಿಕಳ
ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ
February 19, 2026
7:55 AM
by: ಮಿರರ್‌ ಡೆಸ್ಕ್
ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ
February 19, 2026
7:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror